ಕೋಟಿಗೊಬ್ಬ3 ಸ್ಟಿಲ್ 
ಸಿನಿಮಾ ಸುದ್ದಿ

ಯೂಟ್ಯೂಬ್ ನಿಂದ ಡಿಲೀಟ್ ಆಗಿದ್ದ ಕೋಟಿಗೊಬ್ಬ-3 ಟೀಸರ್ ಇಂದಿನಿಂದ ಲಭ್ಯ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷೆಯ ಕೋಟಿಗೊಬ್ಬ-3 ಸಿನಿಮಾ ರಿಲೀಸ್ ಗೆ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ. ಈಗಾಗಲೆ ಟೀಸರ್ ಮೂಲಕ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದ್ದ ಸಿನಿಮಾ ಈಗ ಸಂಕಷ್ಟದಲ್ಲಿ ಸಿಲುಕಿದೆ. ಹೌದು, ಕೋಟಿಗೊಬ್ಬ-3 ಚಿತ್ರದ ಟೀಸರ್ ಯೂಟ್ಯೂಬ್ ನಿಂದ ಡಿಲೀಟ್ ಮಾಡಲಾಗಿತ್ತು.

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷೆಯ ಕೋಟಿಗೊಬ್ಬ-3 ಸಿನಿಮಾ ರಿಲೀಸ್ ಗೆ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ. ಈಗಾಗಲೆ ಟೀಸರ್ ಮೂಲಕ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದ್ದ ಸಿನಿಮಾ ಈಗ ಸಂಕಷ್ಟದಲ್ಲಿ ಸಿಲುಕಿದೆ. ಹೌದು, ಕೋಟಿಗೊಬ್ಬ-3 ಚಿತ್ರದ ಟೀಸರ್ ಯೂಟ್ಯೂಬ್ ನಿಂದ ಡಿಲೀಟ್ ಮಾಡಲಾಗಿತ್ತು.

ಆದರೆ ಸೋಮವಾರದಿಂದ ಯೂಬ್ಯೂನಲ್ಲಿ ಲಭ್ಯವಾಗಲಿದೆ ಎಂದು ನಟ ಸುದೀಪ್ ಟ್ವೀಟ್ ಮಾಡಿದ್ದಾರೆ.

ದಿಢೀರನೆ ಚಿತ್ರದ ಟೀಸರ್ ಡಿಲೀಟ್ ಆಗಿರುವುದು ನೋಡಿ ಚಿತ್ರತಂಡ ಮತ್ತು ಅಭಿಮಾನಿಗಳು ಶಾಕ್ ಆಗಿತ್ತು.  ಚಿತ್ರತಂಡ ಭಾಕಿ ಹಣಕೊಟ್ಟಿಲ್ಲ ಎನ್ನುವ ಕಾರಣಕ್ಕೆ ಅಜಯ್ ಪಾಲ್ ಟೀಸರ್ ಡಿಲೀಟ್ ಮಾಡಿಸಿದ್ದಾರಂತೆ. ಪೋಲೆಂಡ್ ನಲ್ಲಿ ಚಿತ್ರೀಕರಿಸಲಾದ ದೃಶ್ಯಗಳು ಅಜಯ್ ಪಾಲ್ ಮತ್ತು ಸಂಜಯ್ ಪಾಲ್ ಕಂಪೆನಿ ಹೆಸರಿನಲ್ಲಿದೆ. 

ಭಾಕಿ ಹಣ ನೀಡದೆ ಟೀಸರ್ ರಿಲೀಸ್ ಮಾಡಲಾಗಿದೆ ಎನ್ನುವ ಕಾರಣಕ್ಕೆ ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿದ್ದ ಟೀಸರ್ ಅನ್ನು ಡಿಲೀಟ್ ಮಾಡಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಭಾಕಿ ಹಣ ಕೊಡುವವರೆಗೂ ಪೋಲೆಂಡ್ ನಲ್ಲಿ ಚಿತ್ರೀಕರಿಸಲಾದ ದೃಶ್ಯಗಳನ್ನು ನೀಡುವುದಲಿಲ್ಲ ಎಂದು ಅಜಯ್ ಪಾಲ್ ಎಚ್ಚರಿಕೆ ಕೂಡ ನೀಡಿದ್ದಾರಂತೆ. ಈ ಮೊದಲು, ಪೋಲೆಂಡ್ ನಲ್ಲಿ ಚಿತ್ರೀಕರಣಕ್ಕೆ ಹೋದ ಸಮಯದಲ್ಲೂ ಚಿತ್ರತಂಡಕ್ಕೆ ದೊಡ್ಡ ಸಮಸ್ಯೆ ಎದುರಾಗಿತ್ತು.

ಚಿತ್ರತಂಡ 50 ಲಕ್ಷ ಹಣಕೊಡಬೇಕು ಎಂದು ಅಜಯ್ ಪಾಲ್ ಬೇಡಿಕೆ ಇಟ್ಟಿದ್ದರು. ಇದಕ್ಕೆ ಒಪ್ಪದ ಚಿತ್ರತಂಡ ಪೋಲೆಂಡ್ ನಿಂದ ವಾಪಾಸ್ ಆಗಿತ್ತು. ಆದರೆ ಒಬ್ಬ ಅಕೌಂಟೆಂಟ್ ಅನ್ನು ಅಜಯ್ ಪಾಲ್ ಬಳಿ ಒತ್ತೆ ಇಟ್ಟು ವಾಪಾಸ್ ಆಗಿದ್ದರು. ಆ ನಂತರ ಕೇಂದ್ರ ಸಚಿವರ ನೆರವಿಂದ ಒತ್ತೆ ಇಟ್ಟಿದ್ದ ಅಕೌಂಟೆಂಟ್ ಅನ್ನು ವಾಪಾಸ್ ಭಾರತಕ್ಕೆ ಕರೆಸಿಕೊಂಡಿದ್ದರು.

ಈಗ ಮತ್ತೆ ರಿಲೀಸ್ ಸಮಯದಲ್ಲಿ ತೊಂದರೆ ಕೊಡುತ್ತಿರುವುದು ಚಿತ್ರತಂಡಕ್ಕೆ ದೊಡ್ಡ ತಲೆನೋವಾಗಿದೆ ನಿರ್ಮಾಪಕ ಸೂರಪ್ಪಬಾಬು ಹೇಳಿದ್ದಾರೆ.  ಚಿತ್ರದ ಟೀಸರ್ ಅನ್ನು ಮತ್ತೆ ಯೂಟ್ಯೂಬ್ ನಲ್ಲಿ ರಿಲೀಸ್ ಮಾಡಿ ಕಾನೂನು ಹೋರಾಟ ಮಾಡುವುದಾಗಿ ಹೇಳಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT