ನಟ ಶಿವರಾಜ್ ಕುಮಾರ್ 
ಸಿನಿಮಾ ಸುದ್ದಿ

ಕೊರೋನಾ ಭೀತಿ: ನಟ ಶಿವರಾಜ್ ಕುಮಾರ್ ಶಬರಿಮಲೆ ಯಾತ್ರೆ ರದ್ದು

ಕೊರೋನಾ ಭೀತಿ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ಚಿತ್ರೀಕರಣ, ಚಿತ್ರ ಪ್ರದರ್ಶನ ಮೊಟಕುಗೊಂಡಿದ್ದು, ಇದೀಗ ಚಿತ್ರನಟ ಶಿವರಾಜ್ ಕುಮಾರ್ ಅವರ ಶಬರಿ ಮಲೆ ಯಾತ್ರೆ ಸಹ ರದ್ದಾಗಿದೆ. 

ಬೆಂಗಳೂರು: ಕೊರೋನಾ ಭೀತಿ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ಚಿತ್ರೀಕರಣ, ಚಿತ್ರ ಪ್ರದರ್ಶನ ಮೊಟಕುಗೊಂಡಿದ್ದು, ಇದೀಗ ಚಿತ್ರನಟ ಶಿವರಾಜ್ ಕುಮಾರ್ ಅವರ ಶಬರಿ ಮಲೆ ಯಾತ್ರೆ ಸಹ ರದ್ದಾಗಿದೆ. 

ಶಿವಕುಮಾರ್ ಕುಮಾರ್ ಅವರು ಪ್ರತಿ ವರ್ಷ ಮಾಲೆ ಧರಿಸಿಕೊಂಡು ತಮ್ಮ ಆತ್ಮೀಯರೊಂದಿಗೆ ಶಬರಿಮಲೆಯ ಸ್ವಾಮಿ ಅಯ್ಯಪ್ಪ ದರ್ಶನಕ್ಕೆ ಹೋಗುತ್ತಿದ್ದರು. ಅದರಂತೆ ಈ  ಬಾರಿಯೂ ಅವರ ಸ್ವಾಮಿ ಅಯ್ಯಪ್ಪ ದೇವಾಲಯಕ್ಕೆ ಹೋಗಲು ಸಕಲ ಸಿದ್ಧತೆ ಮಾಡಿಕೊಂಡಿದ್ದರು. ಆದರೆ,  ಕೊರೋನಾ ವೈರಸ್ ಭೀತಿಯಿಂದಾಗಿ  ಶಿವರಾಜ್ ಕುಮಾರ್ ಅವರು ಶಬರಿ ಮಲೆ ಯಾತ್ರೆಯನ್ನು ರದ್ದುಗೊಳಿಸಿದ್ದಾರೆ.

ಇಂದು ಅವರು ತಮ್ಮ ನಿವಾಸದಲ್ಲೇ ಪೂಜೆ ಮಾಡಿ ಮಾಲೆ ಬಿಚ್ಚಿದರು. ಸಹೋದರ ರಾಘವೇಂದ್ರ ರಾಜ್ ಕುಮಾರ್ ಸೇರಿ ಕುಟುಂಬ ಸದಸ್ಯರು ಪೂಜೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT