ನಿರ್ಭಯಾ ಹತ್ಯಾಚಾರಿಗಳಿಗೆ ಶಿಕ್ಷೆ: ಹಂತಕರ ಗಲ್ಲಿಗೇರಿಸಿದ ಹ್ಯಾಂಗ್'ಮನ್'ಗೆ ರೂ.1 ಲಕ್ಷ ದೇಣಿಗೆ ನೀಡಿದ ನಟ ಜಗ್ಗೇಶ್! 
ಸಿನಿಮಾ ಸುದ್ದಿ

ನಿರ್ಭಯಾ ಹತ್ಯಾಚಾರಿಗಳಿಗೆ ಶಿಕ್ಷೆ: ಹಂತಕರ ಗಲ್ಲಿಗೇರಿಸಿದ ಹ್ಯಾಂಗ್'ಮನ್'ಗೆ ರೂ.1 ಲಕ್ಷ ದೇಣಿಗೆ ನೀಡಿದ ನಟ ಜಗ್ಗೇಶ್!

ನಿರ್ಭಯಾ ಹತ್ಯಾಚಾರ ಪ್ರಕರಣದ ನಾಲ್ವರು ದೋಷಿಗಳಿಗೆ ಶುಕ್ರವಾರ ಬೆಳಿಗ್ಗೆ 5.30ಕ್ಕೆ ಗಲ್ಲಿಗೇರಿಸಲಾಗಿದ್ದು, ಅಪರಾಧಿಗಳನ್ನು ಗಲ್ಲಿಗೇರಿಸಿದ ಹ್ಯಾಂಗ್'ಮನ್'ಗೆ ಸ್ಯಾಂಡಲ್'ವುಡ್'ನ ನವರಸ ನಾಯಕ ಜಗ್ಗೇಶ್ ಅವರು ರೂ.1 ಲಕ್ಷ ದೇಣಿಗೆ ನೀಡಿದ್ದಾರೆ. 

ಬೆಂಗಳೂರು: ನಿರ್ಭಯಾ ಹತ್ಯಾಚಾರ ಪ್ರಕರಣದ ನಾಲ್ವರು ದೋಷಿಗಳಿಗೆ ಶುಕ್ರವಾರ ಬೆಳಿಗ್ಗೆ 5.30ಕ್ಕೆ ಗಲ್ಲಿಗೇರಿಸಲಾಗಿದ್ದು, ಅಪರಾಧಿಗಳನ್ನು ಗಲ್ಲಿಗೇರಿಸಿದ ಹ್ಯಾಂಗ್'ಮನ್'ಗೆ ಸ್ಯಾಂಡಲ್'ವುಡ್'ನ ನವರಸ ನಾಯಕ ಜಗ್ಗೇಶ್ ಅವರು ರೂ.1 ಲಕ್ಷ ದೇಣಿಗೆ ನೀಡಿದ್ದಾರೆ. 

ನಿರ್ಭಯಾ ಹಂತಕರಿಗೆ ಈ ಹಿಂದೆ ಗಲ್ಲು ಶಿಕ್ಷೆ ಪ್ರಕಟವಾದ ವೇಳೆ ಹೇಳಿಕೆ ನೀಡಿದ್ದ ಜಗ್ಗೇಶ್ ಅವರು, ಹ್ಯಾಂಗ್'ಮನ್'ಗೆ ರೂ.1 ಲಕ್ಷ ನೀಡುವುದಾಗಿ ತಿಳಿಸಿದ್ದರು. ಇದರಂತೆ ಕೊನೆಗೂ ಹಂತಕರಿಗೆ ಗಲ್ಲು ಶಿಕ್ಷೆಯಾಗಿದ್ದು, ಈ ಹಿನ್ನೆಲೆಯಲ್ಲಿ ಕೊಟ್ಟ ಮಾತಿನಂತೆ ನಡೆದುಕೊಳ್ಳುವುದಾಗಿ ಜಗ್ಗೇಶ್ ತಿಳಿಸಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕೊಟ್ಟ ಮಾತಿನಂತೆ ರೂ.1 ಲಕ್ಷವನ್ನು ನಿರ್ಭಯಾ ಹಂತಕರ ಹ್ಯಾಂಗ್'ಮನ್'ಗೆ ದೇಣಿಗೆ ನೀಡುತ್ತಿದ್ದೇನೆ. ದೇವನೊಬ್ಬನಿರುವ ಅವ ಎಲ್ಲಾ ನೋಡುತ್ತಿರುವ. ಸತ್ಯದ ಹಾದಿಯಲ್ಲಿ ನಡೆದವನಿಗೆ ಭಯವಿಲ್ಲಾ. ಅಸತ್ಯದ ಮಾರ್ಗಕ್ಕೆ ಶಿಕ್ಷೆ ತಪ್ಪುವುದಿಲ್ಲ. ಈ ದಿನಕ್ಕೆ ಹಲ್ಲು ಕಚ್ಚಿ ಎಂದು ಅಂತ್ಯ ದುಷ್ಟ ಕ್ರಿಮಿಗಳಿಗೆ ಎಂದು ಕಾಯುತ್ತಿದ್ದೆ. ಸುದ್ದಿ ಕೇಳಲು ನಿದ್ರೆ ಮಾಡದೆ ಕಾದೆ. ಹರಿಓಂ. ಶುಭದಿನ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಗೆಲುವು; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

SCROLL FOR NEXT