'ರಾಬರ್ಟ್' ಜೊತೆಯಲ್ಲಿರುವ ಈ ಪುಟ್ಟ ಬಾಲಕ ಯಾರು? 
ಸಿನಿಮಾ ಸುದ್ದಿ

'ರಾಬರ್ಟ್' ಜೊತೆಯಲ್ಲಿರುವ ಈ ಪುಟ್ಟ ಬಾಲಕ ಯಾರು? 

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನಯೆ ಬಹುನಿರೀಕ್ಷಿತ ರಾಬರ್ಟ್ ಚಿತ್ರದ ಎರಡನೇ ಮೋಷನ್ ಪೋಸ್ಟರ್ ಬಿಡುಗಡೆಯಾಗಿದ್ದು, ಪೋಸ್ಟರ್ ನಲ್ಲಿ ಆಂಜನೇಯನ ಅವತಾರದಲ್ಲಿ ದರ್ಶನ್ ಕಾಣಿಸಿಕೊಂಡಿದ್ದಾರೆ. ಆದರೆ, ದರ್ಶನ್ ಹೆಗಲ ಮೇಲೆ ಪುಟ್ಟ ಬಾಲಕನೊಬ್ಬ ಕುಳಿತಿದ್ದು, ಈ ಬಾಲಕ ಯಾರು ಎಂಬ ಕುತೂಹಲ ಎಲ್ಲರಲ್ಲೂ ಮೂಡತೊಡಗಿದೆ. 

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನಯೆ ಬಹುನಿರೀಕ್ಷಿತ ರಾಬರ್ಟ್ ಚಿತ್ರದ ಎರಡನೇ ಮೋಷನ್ ಪೋಸ್ಟರ್ ಬಿಡುಗಡೆಯಾಗಿದ್ದು, ಪೋಸ್ಟರ್ ನಲ್ಲಿ ಆಂಜನೇಯನ ಅವತಾರದಲ್ಲಿ ದರ್ಶನ್ ಕಾಣಿಸಿಕೊಂಡಿದ್ದಾರೆ. ಆದರೆ, ದರ್ಶನ್ ಹೆಗಲ ಮೇಲೆ ಪುಟ್ಟ ಬಾಲಕನೊಬ್ಬ ಕುಳಿತಿದ್ದು, ಈ ಬಾಲಕ ಯಾರು ಎಂಬ ಕುತೂಹಲ ಎಲ್ಲರಲ್ಲೂ ಮೂಡತೊಡಗಿದೆ. 

ಮೊದಲು ಟೀಸರ್ ಬಳಿಕ ಬಾ ರೆಡಿ... ನಂತರ ಜೈ ಶ್ರೀರಾಮ್ ಗೀತೆಗಳನ್ನು ಬಿಡುಗಡೆ ಮಾಡಿದ್ದ ರಾಬರ್ಟ್ ಚಿತ್ರ ತಂಡ ಮಾರ್ಚ್.21 ರಂದು ದೋಸ್ತಾ ಕಣೋ ಎಂಬ ಹಾಡನ್ನು ಬಿಡುಗಡೆ ಮಾಡಲಿದೆ. ಈ ಹಾಡಲನ್ನು ವಿಜಯ್ ಪ್ರಕಾಶ್ ಅವರು ಹಾಡಿದ್ದು, ಇವರೊಂದಿಗೆ ಹೇಮಂತ್ ಕೂಡ ದ್ವನಿಗೂಡಿಸಿದ್ದಾರೆ. ಜೈ ಶ್ರೀರಾಮ್ ಹಾಡಿನಲ್ಲಿ ದರ್ಶನ್ ಜೊತೆಗೆ ಪುಟ್ಟ ರಾಮನೊಬ್ಬ ಕಾಣಿಸಿಕೊಂಡಿದ್ದು, ಬಾಲಕನನ್ನು ನಿರ್ದೇಶಕ ತರುಣ್ ಸುಧೀರ್ ಅವರು ಪರಿಚಯ ಮಾಡಿಕೊಟ್ಟಿದ್ದಾರೆ. 

ದರ್ಶನ್ ಹೆಗಲ ಮೇಲೆ ಕುಳಿತ ಪುಟ್ಟ ರಾಮನ ಜೇಸನ್ ಡಿ'ಸೋಜಾ. ತುಂಬಾ ಪ್ರತಿಭಾವಂತ ಬಾಲಕನಾಗಿದ್ದು, ರಾಬರ್ಟ್ ಚಿತ್ರದಲ್ಲಿ ಬಹುಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾನೆಂದು ನಿರ್ದೇಶಕರು ಹೇಳಿದ್ದಾರೆ. 

ಜೇಸನ್ ಮೂಲತಃ ಮುಂಬೈ ಮೂಲದ ಬಾಲಕನಾಗಿದ್ದು, 10 ವರ್ಷದ ಈ ಪೋರ ಹಲವಾರು ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಾನೆ. ಅಲ್ಲಗೆ, ಈಗಾಗಲೇ ಹಲವಾರು ಬಾಲಿವುಡ್ ಸಿನಿಮಾಗಳಲ್ಲಿ ಬಣ್ಣ ಕೂಡ ಹಚ್ಚಿದ್ದಾನೆ. 

ಬಾಲಿವುಡ್ ಬಾದ್ ಷಾ ಶಾರುಖ್ ಖಾನ್, ಅಕ್ಷಯ್ ಕುಮಾರ್ ಸೇರಿದಂತೆ ಸಾಕಷ್ಟು ಸ್ಟಾರ್ ನಟರ ಸಿನಿಮಾಗಳಲ್ಲಿ ನಟಿಸಿದ್ದಾನೆ. ಇದೀಗ ಇದೇ ಮೊದಲ ಬಾರಿಗೆ ಸೌತ್ ಸಿನಿಮಾವೊಂದರಲ್ಲಿ ನಟಿಸುತ್ತಿದ್ದು, ಈಗಾಗಲೇ ರಾಬರ್ಟ್ ಚಿತ್ರದ ಪೋಸ್ಟರ್ ಬಾಲಕನನ್ನು ದೊಡ್ಡ ಪಟ್ಟಕ್ಕೇರಿಸಿದೆ. 

ಇನ್ನು ರಾಬರ್ಟ್ ಚಿತ್ರದಲ್ಲಿ ದರ್ಶನ್ ಅವರು ಮೂರು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಒಂದು ಪಾತ್ರ ಸಂಜಯ್, ಇನ್ನೊಂದು ಅಕ್ಬರ್ ಹಾಗೂ ಮತ್ತೊಂದು ರಾಬರ್ಟ್ ರೌದ್ರವತಾರ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT