ಪೃಥ್ವಿ ಅಂಬಾರ್ 
ಸಿನಿಮಾ ಸುದ್ದಿ

ಮತ್ತೊಂದು ಸಿನಿಮಾಗೆ ಸಹಿ ಮಾಡಿದ 'ದಿಯಾ' ಹೀರೋ ಪೃಥ್ವಿ ಅಂಬಾರ್

ಕೆಎ ಅಶೋಕ್ ನಿರ್ದೇಶನದ ದಿಯಾ ಸಿನಿಮಾ ಮೂಲಕ ಸಿನಿಮಾ ರಂಗಕ್ಕೆ  ಕಾಲಿರಿಸಿದ  ಪೃಥ್ವಿ ಅಂಬಾರ್ ಮತ್ತೊಂದು ಸಿನಿಮಾ ಗೆ ಸಹಿ ಮಾಡಿದ್ದಾರೆ .

ಕೆಎ ಅಶೋಕ್ ನಿರ್ದೇಶನದ ದಿಯಾ ಸಿನಿಮಾ ಮೂಲಕ ಸಿನಿಮಾ ರಂಗಕ್ಕೆ  ಕಾಲಿರಿಸಿದ  ಪೃಥ್ವಿ ಅಂಬಾರ್ ಮತ್ತೊಂದು ಸಿನಿಮಾ ಗೆ ಸಹಿ ಮಾಡಿದ್ದಾರೆ .

ಪೃಥ್ವಿ ನಟಿಸಲಿರುವ ಹೊಸ ಚಿತ್ರಕ್ಕೆ 'for regn' (ಫಾರ್‌ ರಿಜಿಸ್ಟ್ರೇಷನ್‌) ಎಂದು ಶೀರ್ಷಿಕೆ ಇಡಲಾಗಿದೆ. ಮೇ ತಿಂಗಳಿಂದ ಇದರ ಶೂಟಿಂಗ್‌ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಎರಡು ಹಂತದಲ್ಲಿ ಚಿತ್ರೀಕರಣ ನಡೆಯಲಿದ್ದು, ತಬಲ ನಾಣಿ ಕೂಡ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ರೊಮ್ಯಾಂಟಿಕ್ ಕಥಾಹಂದರವಿರುವ ಈ ಚಿತ್ರವನ್ನು ನವೀನ್ ದ್ವಾರಕನಾಥ್ ನಿರ್ದೇಶಿಸುತ್ತಿದ್ದಾರೆ.

ಐ ಟಿ ಹಿನ್ನೆಲೆಯ ನವೀನ್ ದ್ವಾರಕನಾಥ್ ಅವರಿಗೆ ಕೆಲವು ಕಿರುಚಿತ್ರ ನಿರ್ದೇಶನ ಮಾಡಿರುವ ಅನುಭವವಿದೆ. ನಿಶ್ಚಲ್ ಫಿಲಂಸ್ ಲಾಂಛನದಡಿಯಲ್ಲಿ ನವೀನ್ ರಾವ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ವಿವೇಕ್ ಅವರ ಛಾಯಾಗ್ರಹಣ ಹಾಗು ಹರೀಶ್ ಆರ್. ಸಂಗೀತ ನಿರ್ದೇಶನ 'For regn' ಚಿತ್ರಕ್ಕಿದೆ.

ಕನ್ನಡದ ಜೊತೆಗೆ ತುಳು ಸಿನಿಮಾಗಳಲ್ಲಿಯೂ ಪೃಥ್ವಿ ಅಭಿನಯಿಸುತ್ತಿದ್ದಾರೆ. 'ದಿಯಾ' ಸಿನಿಮಾದ ಯಶಸ್ಸಿನ ನಂತರ ಅವರಿಗೆ ಒಳ್ಳೊಳ್ಳೆಯ ಆಫರ್‌ಗಳು ಸಿಗುತ್ತಿವೆ. ಎಲ್ಲವನ್ನೂ ಅಳೆದು-ತೂಗಿ ಅವರು ಸಹಿ ಮಾಡುತ್ತಿದ್ದಾರೆ. ಈ ನಡುವೆ ಕೆಲವು ಚಿತ್ರಗಳ ಸ್ಕ್ರಿಪ್ಟ್‌ ಕೆಲಸದಲ್ಲೂ ಪೃಥ್ವಿ ತೊಡಗಿಕೊಂಡಿದ್ದಾರೆ ಎಂಬುದು ವಿಶೇಷ.

ದಿಯಾ ಸಿನಿಮಾದಲ್ಲಿ ಆದಿ ಪಾತ್ರದಲ್ಲಿ ನಟಿಸಿ  ಪೃಥ್ವಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT