ವಿಶು 
ಸಿನಿಮಾ ಸುದ್ದಿ

ಜನಪ್ರಿಯ ತಮಿಳು ಚಲನಚಿತ್ರ ನಟ, ನಿರ್ದೇಶಕ ವಿಶು ನಿಧನ

ಅವಿಭಜಿತ ಮತ್ತು ಮಧ್ಯಮ ವರ್ಗದ ಕುಟುಂಬಗಳ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಚಿತ್ರಿಸುವಲ್ಲಿ ಹೆಸರುವಾಸಿಯಾಗಿದ್ದ ತಮಿಳು ಚಲನಚಿತ್ರ ನಟ, ಚಿತ್ರ ಸಾಹಿತಿ, ನಿರ್ದೇಶಕ ವಿಶು ದೀರ್ಘಕಾಲದ ಅನಾರೋಗ್ಯದಿಂದ ಭಾನುವಾರ ಸಂಜೆ ನಿಧನಹೊಂದಿದ್ದಾರೆ.

ಚೆನ್ನೈ: ಅವಿಭಜಿತ ಮತ್ತು ಮಧ್ಯಮ ವರ್ಗದ ಕುಟುಂಬಗಳ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಚಿತ್ರಿಸುವಲ್ಲಿ ಹೆಸರುವಾಸಿಯಾಗಿದ್ದ ತಮಿಳು ಚಲನಚಿತ್ರ ನಟ, ಚಿತ್ರ ಸಾಹಿತಿ, ನಿರ್ದೇಶಕ ವಿಶು ದೀರ್ಘಕಾಲದ ಅನಾರೋಗ್ಯದಿಂದ ಭಾನುವಾರ ಸಂಜೆ ನಿಧನಹೊಂದಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. 

ವಿಶು ಅವರು ವಯೋಮಾನ ಸಂಬಂಧಿತ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಭಾನುವಾರ ಸಂಜೆ 6 ಗಂಟೆಗೆ ಅವರು ಕೊನೆಯುಸಿರೆಳಿದಿದ್ದಾರೆ. ರಂಗಭೂಮಿ ಕಲಾವಿದರಾಗಿ ತಮ್ಮ ವೃತ್ತಿಜೀವನವನ್ನು ಆರಂಭಿಸಿದ ವಿಶು ಅವರು, ಜನಪ್ರಿಯ ನಿರ್ದೇಶಕರಾಗಿ ತಮ್ಮ ಚಲನಚಿತ್ರಗಳಲ್ಲಿ ಮಧ್ಯಮ ವರ್ಗದ ಕುಟುಂಬಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಮತ್ತು ಹಾಸ್ಯಮಯವಾಗಿ ಚಿತ್ರಿಸುತ್ತಿದ್ದರು.

ವಿಶು ಅವರು ಸೂಪರ್ ಸ್ಟಾರ್ ರಜನಿಕಾಂತ್ ಅವರೊಂದಿಗೆ 'ನಲ್ಲವನುಕ್ಕು ನಲ್ಲವನ್', 'ಮನ್ನನ್', 'ಅರುಣಾಚಲಂ' ಮತ್ತು "ಉಳ್ಳೆಪಾಳಿ’ ಚಿತ್ರಗಳಲ್ಲಿ ನಟಿಸಿದ್ದಾರೆ.

ವಿಶು ಎಂದು ಜನಪ್ರಿಯರಾದ ಮೀನಾಕ್ಷಿಸುಂದರಂ ರಾಮಸ್ವಾಮಿ ವಿಶ್ವನಾಥನ್ ಅವರು ತಮ್ಮ ವೃತ್ತಿಜೀವನವನ್ನು ರಂಗಭೂಮಿ ವೇದಿಕೆಯಲ್ಲಿ ಆರಂಭಿಸಿದರು. ರಂಗಭೂಮಿ ಕಲಾವಿದ ವೈ ಜಿ ಪಾರ್ಥಸಾರಥಿಯವರ ನಾಟಕ ತಂಡದಲ್ಲಿ ಕತೆಗಳನ್ನು ಬರೆಯುವುದರ ಮೂಲಕ ಹಂತ-ಹಂತವಾಗಿ ಬೆಳೆದರು.

ನಂತರ ಸಹಾಯಕ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪ್ರವೇಶಿಸಿದ ಅವರು, ಚಿತ್ರಸಾಹಿತ್ಯ ಮತ್ತು ಸಂಭಾಷಣೆಗಳನ್ನು ಬರೆಯುವ ಮೂಲಕ ಅನುಭವಿ ಕೆ ಬಾಲಚಂದರ್‌ಗೆ ಹತ್ತಿರವಾದರು.
ರಾಷ್ಟ್ರೀಯತೆ ಮತ್ತು ಆಧ್ಯಾತ್ಮಿಕದಲ್ಲಿ ನಂಬಿಕೆ ಹೊಂದಿದ್ದ ಅವರು 2016ರಲ್ಲಿ ಬಿಜೆಪಿ ಸೇರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT