ಸಿನಿಮಾ ಸುದ್ದಿ

ಕೊರೋನಾ ವೈರಸ್: ಸಂಕಷ್ಟದಲ್ಲಿರುವ ಸಿನಿಮಾ ಕಾರ್ಮಿಕ ವರ್ಗಕ್ಕೆ ರೂ.50 ಲಕ್ಷ ದೇಣಿಗೆ ನೀಡಿದ ರಜನಿಕಾಂತ್

Manjula VN

ಚೆನ್ನೈ: ದೇಶದಾದ್ಯಂತ ಕೊರೋನಾ ವೈರಸ್ ರುದ್ರ ತಾಂಡವವಾಡುತ್ತಿದ್ದು, ವೈರಸ್ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವ ತಮಿಳುನಾಡು ಸರ್ಕಾರ ಇಡೀ ರಾಜ್ಯವನ್ನು ಬಂದ್ ಮಾಡಿದೆ. ಬಂದ್ ನಿಂದಾಗಿ ಸಿನಿಮಾಮ ಕಾರ್ಮಿಕ ವರ್ಗ ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಅವರು, 50 ಲಕ್ಷ ದೇಣಿಗೆ ನೀಡಿದ್ದಾರೆ. 

ತಮಿಳುನಾಡು ರಾಜ್ಯವನ್ನು ಬಂದ್ ಮಾಡಿರುವ ಹಿನ್ನೆಲೆಯಲ್ಲಿ ಫಿಲ್ಮ್ ಎಂಪ್ಲಾಯೀಸ್ ಫೆಡರೇಶನ್ ಆಫ್ ಸೌತ್ ಇಂಡಿಯಾ ಯೂನಿಯನ್ ಕಾರ್ಮಿಕರು ಭಾರೀ ಸಂಕಷ್ಟಕ್ಕೀಡಾಗಿದ್ದು, ಈ ಹಿನ್ನೆಲೆಯಲ್ಲಿ ರಜನಿಕಾಂತ್ ಅವರು ರೂ.50 ಲಕ್ಷವನ್ನು ಕಾರ್ಮಿಕರಿಗೆ ನೀಡಿದ್ದಾರೆಂದು ತಿಳಿದುಬಂದಿದೆ. 

ದೇಶದಾದ್ಯಂತ ಕೊರೋನಾ ವೈರಸ್ ಹಾವಳಿ ಹೆಚ್ಚಾಗಿದ್ದು, 500 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೆ, 11 ಮಂದಿ ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ದೇಶದ ಹಲವು ರಾಜ್ಯಗಳು ಸಂಪೂರ್ಣವಾಗಿ ಲಾಕ್'ಡೌನ್ ಆಗಿವೆ. 

SCROLL FOR NEXT