ನಟ ಪ್ರಭು ಮುಂಡ್ಕೂರ್ 
ಸಿನಿಮಾ ಸುದ್ದಿ

'ಬಾಲಿವುಡ್ ಗೆ ಹಾರಿದ ಉರ್ವಿ ಹೀರೋ'?: ಸಂಜಯ್ ಲೀಲಾ ಬನ್ಸಾಲಿರೊಂದಿಗೆ ಕೆಲಸ ಮಾಡಲು ಉತ್ಸುಕನಾಗಿದ್ದೇನೆ ಎಂದ ಪ್ರಭು ಮುಂಡ್ಕೂರ್

ಉರ್ವಿ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದ ಉದಯೋನ್ಮುಖ ನಟ ಪ್ರಭು ಮುಂಡ್ಕೂರ್ ಇದೀಗ ಬಾಲಿವುಡ್ ರಂಗ ಪ್ರವೇಶ ಮಾಡಲು ತುದಿಗಾಲಲ್ಲಿ ನಿಂತಿದ್ದಾರೆ.

ಬೆಂಗಳೂರು: ಉರ್ವಿ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದ ಉದಯೋನ್ಮುಖ ನಟ ಪ್ರಭು ಮುಂಡ್ಕೂರ್ ಇದೀಗ ಬಾಲಿವುಡ್ ರಂಗ ಪ್ರವೇಶ ಮಾಡಲು ತುದಿಗಾಲಲ್ಲಿ ನಿಂತಿದ್ದಾರೆ.

ಬಾಲಿವುಡ್ ನ ನಿರ್ದೇಶಕರಾದ ಸಂಜಯ್ ಲೀಲಾ ಬನ್ಸಾಲಿ ಮತ್ತು ರಾಜ್ ಕುಮಾರ್ ಹಿರಾನಿ ರಂತಹ ಖ್ಯಾತ ನಿರ್ದೇಶಕ ಚಿತ್ರದ ಮೂಲಕ ಬಾಲಿವುಡ್ ಗೆ ಪದಾರ್ಪಣೆ ಮಾಡಬೇಕು ಎನ್ನುವುದು ಪ್ರಭು ಅವರ ಆಸೆಯಂತೆ. ಈ ಬಗ್ಗೆ ಮಾತನಾಡಿರುವ ಪ್ರಭು ಮುಂಡ್ಕೂರ್ ಅವರು, ನಾನು  ಬಾಲಿವುಡ್ ನ ನಿರ್ದೇಶಕರಾದ ಸಂಜಯ್ ಲೀಲಾ ಬನ್ಸಾಲಿ ಮತ್ತು ರಾಜ್ ಕುಮಾರ್ ಹಿರಾನಿ ರಂತಹ ಖ್ಯಾತ ನಿರ್ದೇಶಕ ಚಿತ್ರದ ಮೂಲಕ ಬಾಲಿವುಡ್ ಗೆ ಪದಾರ್ಪಣೆ ಮಾಡಬೇಕು ಎಂದುಕೊಂಡಿದ್ದೇನೆ, ಓರ್ವ ಪ್ರೇಕ್ಷಕನಾಗಿ ಈ ಇಬ್ಬರೂ ನಿರ್ದೇಶಕರ ಚಿತ್ರಗಳು ನನಗೆ ಬಹಳ  ಇಷ್ಟವಾಗುತ್ತದೆ. ಈ ಇಬ್ಬರೂ ನಿರ್ದೇಶಕರ ಚಿತ್ರಗಳಲ್ಲಿಯೇ ನನ್ನ ಬಾಲಿವುಡ್ ಪಯಣ ಆರಂಭವಾಗಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರಾದೇಶಿಕ ಚಿತ್ರಗಳು ಒಂದು ಗುಂಪು ಅಥವಾ ಸಮುದಾಯಕ್ಕೆ ಸೀಮಿತವಾಗಿಲ್ಲ. ಉತ್ತಮ ಚಿತ್ರಗಳನ್ನು ನಾವು ಸೂಪರ್ ಹಿಟ್ ಮಾಡಬಹುದು. ಜನರು ಈಗ ತಮಗೆ ಬೇಕಾದ ಚಿತ್ರವನ್ನು ತಮ್ಮದೇ ಭಾಷೆಯಲ್ಲಿ ನೋಡುವ ಅವಕಾಶವನ್ನು ಹೊಂದಿದ್ದಾರೆ. ಇದನ್ನು ನಾವು ಸದುಪಯೋಗ  ಪಡಿಸಿಕೊಂಡು ನಮ್ಮ ಚಿತ್ರಗಳನ್ನು ಬೇರೆ ಬೇರೆ ಭಾಷೆಯಲ್ಲೂ ತೆರೆಕಾಣುವಂತೆ ಮಾಡಬೇಕು. ಮನರಂಜನೆಗೆ .ಯಾವುದೇ ಭಾಷೆ ಅಥವಾ ಪ್ರದೇಶದ ಗಡಿ ಇಲ್ಲ. ಓರ್ವ ಕಲಾವಿದನಾಗಿ ಎಲ್ಲ ಭಾಷೆಗಳಲ್ಲೂ ಕೆಲಸ ಮಾಡಲು ನಾನು ಇಷ್ಟ ಪಡುತ್ತೇನೆ. ಪ್ರಮುಖವಾಗಿ ಹಿಂದಿ ಟಿವಿಲೋಕ  ಮತ್ತು ಬಾಲಿವುಡ್ ಎಂದು ಪ್ರಭು ಹೇಳಿದ್ದಾರೆ.

ಪ್ರಸ್ತುತ ಪ್ರಭು ಕನ್ನಡದ ಮೈಸೂರು ಡೈರೀಸ್ ಮತ್ತು ಮಾಯಾ ಕನ್ನಡಿ ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT