ಸಂತೋಷ್ ಆನಂದ್ ರಾಮ್ 
ಸಿನಿಮಾ ಸುದ್ದಿ

ಕೊರೋನಾ ಬಿಕ್ಕಟ್ಟು ತಿಳಿಯಾದ ನಂತರವೇ 'ಯುವರತ್ನ' ಹಾಡು, ಟ್ರೈಲರ್ ಬಿಡುಗಡೆ: ನಿರ್ದೇಶಕ ಸಂತೋಷ್ ಆನಂದ್ ರಾಮ್

ಕೋವಿಡ್ -19 ಕಾರಣ ಜಾರಿಯಲ್ಲಿರುವ ಕಠಿಣ  ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ ನಂತರವೇ ಯುವರತ್ನದ ಟ್ರೈಲರ್ ಮತ್ತು ಹಾಡುಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಸಂತೋಷ್ ಆನಂದ್ ರಾಮ್ ಹೇಳಿದ್ದಾರೆ.

ಕೋವಿಡ್ -19 ಕಾರಣ ಜಾರಿಯಲ್ಲಿರುವ ಕಠಿಣ  ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ ನಂತರವೇ ಯುವರತ್ನದ ಟ್ರೈಲರ್ ಮತ್ತು ಹಾಡುಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಸಂತೋಷ್ ಆನಂದ್ ರಾಮ್ ಹೇಳಿದ್ದಾರೆ.ವೀಡಿಯೊ ಸಂದೇಶದಲ್ಲಿ, ನಿರ್ದೇಶಕರು ಮೇ ದಿನದಂದು ಪ್ರತಿಯೊಬ್ಬ ಕಾರ್ಮಿಕರಿಗೆ  ತಮ್ಮ ಶುಭಾಶಯಗಳನ್ನು ತಿಳಿಸಿದ ನಿರ್ದೇಶಕ  ಪವರ್ ಸ್ಟಾರ್‌ ಪುನೀತ್  ಚಿತ್ರದ ಒಂದು ಲುಕ್ ಪಡೆಯಲು ಕಾಯುತ್ತಿರುವ  ಅವರ ಎಲ್ಲ ಅಭಿಮಾನಿಗಳಿಗೆ ಸಂದೇಶವನ್ನು ಸಹ ನೀಡಿದ್ದಾರೆ

ಬಹುನಿರೀಕ್ಷಿತ ಚಿತ್ರ ಯುವರತ್ನ ನಟ-ನಿರ್ದೇಶಕರ ಜೋಡಿಯ ಎರಡನೇ ಕಾಣಿಕೆಯಾಗಿದೆ. ಈ ಹಿಂದೆ ಈ ಜೋಡಿ ಹಾಗೂ ಹೊಂಬಾಳೆ ಪ್ರೊಡಕ್ಷನ್ಸ್ ಜತೆಯಾಗಿ ರಾಜಕುಮಾರ ಚಿತ್ರ ನಿರ್ಮಿಸಿದ್ದರು. "ಹಾಡುಗಳು ಮತ್ತು ಟ್ರೈಲರ್  ಬಗ್ಗೆ ಸಾಕಷ್ಟು ಕುತೂಹಲವಿದೆ. ಚಿತ್ರದ ಬಗ್ಗೆ ಅಪಾರ ನಿರೀಕ್ಷೆಗಳಿದೆ. ಇದು ನಮ್ಮ ಜವಾಬ್ದಾರಿಯನ್ನು ಹೆಚ್ಚಿಸಿದೆ" ಎಂದು ನಿರ್ದೇಶಕ ಹೇಳಿದ್ದಾರೆ. ರೆ, "ಸಂಗೀತ ನಿರ್ದೇಶಕ ಎಸ್ ತಮನ್ ಯುವರತ್ನಕ್ಕಾಗಿ ತಮ್ಮ ಐದು ಅತ್ಯುತ್ತಮ  ಹಾಡುಗಳ ಸಂಯೋಜನೆ ಮಾಡಿದ್ದಾರೆ.ಅವೆಲ್ಲವನ್ನೂ ಆದಷ್ಟು ಶೀಘ್ರ ರಿಲೀಸ್ ಆಗಲಿದೆ. ತಂಡವು ಖಂಡಿತವಾಗಿಯೂ ನಿಯಮಿತ ಯೋಜನೆಯೊಂದಿಗೆ ಕೆಲಸ ಮಾಡುತ್ತಿದೆ.  ” ಚಿತ್ರ ಬಿಡುಗಡೆಯಾದಾಗ ವೀಕ್ಷಕರು ತಮ್ಮ ಕುಟುಂಬದ ಎಲ್ಲ ಸದಸ್ಯರೊಂದಿಗೆ  ವೀಕ್ಷಿಸಲಿದ್ದಾರೆ ಎಂದು ನಿರ್ದೇಶಕರ ಆಶಯ.

ಸದ್ಯಕ್ಕೆ, ಈ ಲಾಕ್‌ಡೌನ್ ಅವಧಿಯಲ್ಲಿ ಪ್ರತಿಯೊಬ್ಬರೂ ಮನೆಯಲ್ಲಿಯೇ ಇದ್ದು ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕೆಂದು ಅವರು ಕೋರಿದ್ದಾರೆ. ಯುವರತ್ನ ಚಿತ್ರವನ್ನು ವಿಜಯ್ ಕಿರಗಂದೂರ್ ನಿರ್ಮಿಸಿದ್ದು, ಬಹುತಾರಾಂಗಣವನ್ನು ಒಳಗೊಂಡಿದೆ.

ಈ ಚಿತ್ರದ ಮೂಲಕ ಸಯೆಷಾ  ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ವಿಲನ್ ಪಾತ್ರದಲ್ಲಿ ಧನಂಜಯ್ ಅಭಿನಯವಿದೆ. ತಾರಾಗಣದಲ್ಲಿ ದಿಗಂತ್, ಸೋನು ಗೌಡ, ಪ್ರಕಾಶ್ ರೈಮತ್ತು ಸಾಯಿಕುಮಾರ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಯುವರತ್ನಚಿತ್ರಕ್ಕೆ ವೆಂಕಟೇಶ್ ಅಂಗುರಾಜ್ ಛಾಯಾಗ್ರಹಣ ಹಾಗೂ ಜ್ಞಾನೇಶ್ ಬಿ ಮಾತಡ್ ಸಂಕಲನವಿದೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT