ವಿವೇಕ್ ಒಬೆರಾಯ್ 
ಸಿನಿಮಾ ಸುದ್ದಿ

'ಮುತ್ತಪ್ಪ ರೈ' ಜೀವನ ಕಥೆ ಬೆಳ್ಳಿತೆರೆ ಮೇಲೆ ಬರಲಿದೆಯೇ?

ಮಾಜಿ ಡಾನ್ ಮುತ್ತಪ್ಪ ರೈ ಜೀವನ ಕಥೆಯಾಧಾರಿತ ಚಿತ್ರ ಅವರ ಸಾವಿನ ಬಳಿಕವಾದರೂ ತಯಾರಾಗಲಿದೆಯೇ?ಮುತ್ತಪ್ಪ ರೈ ಜೀವನ ಕುರಿತ ಚಿತ್ರವನ್ನು ರೈ ಎಂಬ ಶೀರ್ಷಿಕೆಯೊಂದಿಗೆ ದ ಗ್ರೇಟರ್ ಗ್ಯಾಂಗ್ ಸ್ಟರ್ ಎವರ್ ಎಂಬ ಟ್ಯಾಗ್ ಲೈನ್ ನೊಂದಿಗೆ ನಿರ್ಮಾಪಕ ಸಿ ಆರ್ ಮನೋಹರ್ 2016ರಲ್ಲಿ ಘೋಷಣೆ ಮಾಡಿದ್ದರು.

ಮಾಜಿ ಡಾನ್ ಮುತ್ತಪ್ಪ ರೈ ಜೀವನ ಕಥೆಯಾಧಾರಿತ ಚಿತ್ರ ಅವರ ಸಾವಿನ ಬಳಿಕವಾದರೂ ತಯಾರಾಗಲಿದೆಯೇ?
ಮುತ್ತಪ್ಪ ರೈ ಜೀವನ ಕುರಿತ ಚಿತ್ರವನ್ನು ರೈ ಎಂಬ ಶೀರ್ಷಿಕೆಯೊಂದಿಗೆ ದ ಗ್ರೇಟರ್ ಗ್ಯಾಂಗ್ ಸ್ಟರ್ ಎವರ್ ಎಂಬ ಟ್ಯಾಗ್ ಲೈನ್ ನೊಂದಿಗೆ ನಿರ್ಮಾಪಕ ಸಿ ಆರ್ ಮನೋಹರ್ 2016ರಲ್ಲಿ ಘೋಷಣೆ ಮಾಡಿದ್ದರು.

ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅದರ ನಿರ್ದೇಶನದ ಹೊಣೆ ಹೊತ್ತಿದ್ದರು. ಆರಂಭದಲ್ಲಿ ಸುದೀಪ್ ಮುತ್ತಪ್ಪ ರೈ ಪಾತ್ರವನ್ನು ಮಾಡುತ್ತಾರೆ ಎಂದು ಹೇಳಲಾಗಿತ್ತಾದರೂ ನಂತರ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು.

ಅಭಿಮಾನಿಗಳು, ಹಿತೈಷಿಗಳ ಸಮ್ಮುಖದಲ್ಲಿ ಚಿತ್ರಕ್ಕೆ ಮುಹೂರ್ತ ನೆರವೇರಿಸಿ ವಿವೇಕ್ ಒಬೆರಾಯ್ ಲುಕ್ ಸಹ ಬಿಡುಗಡೆಯಾಗಿತ್ತು. ಚಿತ್ರವನ್ನು ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಭಾಷೆಗಳಲ್ಲಿ ತಯಾರಿಸುವುದೆಂದು ಮಂಗಳೂರು, ಬೆಂಗಳೂರು, ಮುಂಬೈ, ಲಂಡನ್ ಮತ್ತು ದುಬೈಗಳಲ್ಲಿ ಚಿತ್ರೀಕರಣ ಮಾಡುವುದೆಂದು ತೀರ್ಮಾನವಾಗಿತ್ತು.ನಂತರ ಅರ್ಧಕ್ಕೆ ನಿಂತುಹೋಯಿತು.

ಇದೀಗ ಮುತ್ತಪ್ಪ ರೈ ತೀರಿಕೊಂಡಿದ್ದಾರೆ. ಅವರ ಕುರಿತ ಚಿತ್ರ ಬರಲಿದೆಯೇ ಎಂದು ನಿರ್ಮಾಪಕ ಮನೋಹರ್ ಅವರನ್ನು ಕೇಳಿದರೆ ಬೆಳ್ಳಿತೆರೆ ಮೇಲೆ ಮುತ್ತಪ್ಪ ರೈ ಕುರಿತು ಹೇಳುವ ಹಲವು ಆಸಕ್ತಿಕರ ವಿಷಯಗಳಿವೆ. ಚಿತ್ರ ತಯಾರಿಸುತ್ತೇನೆ ಎಂದು ಮುತ್ತಪ್ಪ ರೈ ಬದುಕಿದ್ದಾಗಲೇ ಹೇಳಿದ್ದೆ. ಇದನ್ನು ಮುಂದುವರಿಸಲು ನೋಡುತ್ತಿದ್ದೇನೆ. ಚಿತ್ರಕ್ಕೆ ನ್ಯಾಯ ಒದಗಿಸುವ ನಿರ್ದೇಶಕರು, ಕಥೆ, ಕಲಾವಿದರು ಸಿಕ್ಕಿ ಚಿತ್ರವನ್ನು ತಯಾರಿಸುತ್ತೇನೆ ಎಂಬ ನಂಬಿಕೆಯಿದೆ ಎಂದು ಹೇಳಿದರು.

ದರ್ಶನ್ ನಟನೆಯ ಚಕ್ರವರ್ತಿ ಸಿನಿಮಾಕ್ಕೂ ಮುತ್ತಪ್ಪ ರೈ ಜೀವನಕ್ಕೂ ಹೋಲಿಕೆಯಿದೆ ಎಂದು ಹೇಳಲಾಗುತ್ತಿದೆ. ಚಿಂತನ್ ನಿರ್ದೇಶನದ ಸಿಎಸ್ ಡಿ ವೀರ ಫಿಲ್ಮ್ಸ್ ನಡಿ ತಯಾರಾದ ಚಿತ್ರ 2017ರಲ್ಲಿ ಬಿಡುಗಡೆಯಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT