ಧ್ರುವ ಸರ್ಜಾ 
ಸಿನಿಮಾ ಸುದ್ದಿ

ಧ್ರುವ ಸರ್ಜಾ ಅಭಿಮಾನಿಗಳಿಗೆ ಮತ್ತೊಂದು ಗಿಫ್ಟ್: ಪೊಗರು ಸಿನಿಮಾ ತಂಡದ ಹೊಸ ಪ್ಲಾನ್

ಧ್ರುವ ಸರ್ಜಾ ಅಭಿನಯದ, ನಂದ ಕಿಶೋರ್ ನಿರ್ದೇಶನದ 'ಪೊಗರು' ಚಿತ್ರದ 'ಖರಾಬು' ಹಾಡಿಗೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ. ಯೂಟ್ಯೂಬ್‌ನಲ್ಲಿ ಬಿಡುಗಡೆಯಾದ ಈ ಹಾಡಿಗೆ 21 ಮಿಲಿಯನ್‌ಗೂ ಅಧಿಕ ವೀವ್ಸ್ ಅಗಿದೆ

ಧ್ರುವ ಸರ್ಜಾ ಅಭಿನಯದ, ನಂದ ಕಿಶೋರ್ ನಿರ್ದೇಶನದ 'ಪೊಗರು' ಚಿತ್ರದ 'ಖರಾಬು' ಹಾಡಿಗೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ. ಯೂಟ್ಯೂಬ್‌ನಲ್ಲಿ ಬಿಡುಗಡೆಯಾದ ಈ ಹಾಡಿಗೆ 21 ಮಿಲಿಯನ್‌ಗೂ ಅಧಿಕ ವೀವ್ಸ್ ಅಗಿದೆ. ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರದ ಹಾಡೊಂದಕ್ಕೆ ಯೂಟ್ಯೂಬ್‌ನಲ್ಲಿ ಸಿಕ್ಕ ಬಹುದೊಡ್ಡ ಹಿಟ್ ಇದು.

ಇದರಿಂದ ಸಂತಸಗೊಂಡಿರುವ ಪೊಗರು ಸಿನಿಮಾ ತಂಡ ಮತ್ತೊಂದು ಪ್ಲಾನ್ ಮಾಡಿದೆ.ಧ್ರುವ ಸರ್ಜಾ ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಂಡಿರುವ ಈ ಹಾಡಿನಲ್ಲಿ ರಶ್ಮಿಕಾ ಮಂದಣ್ಣ ಅವರನ್ನು ಪ್ರೀತಿಸುವಂತೆ ಪೀಡಿಸುವ ದೃಶ್ಯಗಳಿವೆ, ಆನಂದ್ ಆಡಿಯೋ ಬಿಡುಗಡೆ ಮಾಡಿರುವ ಈ ಹಾಡು ವೈರಲ್  ಆಗಿದೆ. ಇತ್ತೀಚಿನ ದಿನಗಳಲ್ಲಿ ಟಿಕ್ ಟಾಕ್‌ನಲ್ಲಿಯೂ ಈ ಹಾಡು ಹೆಚ್ಚು ಹರಿದಾಡುತ್ತಿದೆ.

ಚಂದನ್ ಶೆಟ್ಟಿ ಸಂಗೀತ ನೀಡಿರುವ ಈ ಹಾಡಿನ ಯಶಸ್ಸು, ಚಿತ್ರದ ಬಗ್ಗೆ ಹೆಚ್ಚಿನ ನಿರೀಕ್ಷೆಗಳನ್ನು ಮೂಡಿಸಿದೆ. ಹಾಗೆಯೇ ಈಗ ಕೊರೊನಾ ವೈರಸ್ ಭೀತಿ ಇನ್ನೂ ಇರುವುದರಿಂದ ಚಿತ್ರೀಕರಣ ಪೂರ್ಣಗೊಳಿಸಿ ಸಿನಿಮಾ ತೆರೆಗೆ ತರುವುದು ತಡವಾಗುತ್ತದೆ. ಹಾಗಾಗಿ ಅಭಿಮಾನಿಗಳ ಬಯಕೆ ತಣಿಸಲು ಚಿತ್ರತಂಡ ಮತ್ತೊಂದು ಉಪಾಯ ಮಾಡಿದೆ.

'ಖರಾಬು' ಹಾಡಿನ ವಿಚಿತ್ರ ಗೆಟಪ್ ಮತ್ತು ನೃತ್ಯಗಳು ಅಭಿಮಾನಿಗಳಿಗೆ ಇಷ್ಟವಾಗಿದೆ. ಈ ಕಾರಣದಿಂದ ಈ ಹಾಡಿನ ಮೇಕಿಂಗ್ ವಿಡಿಯೋವನ್ನು ಬಿಡುಗಡೆ ಮಾಡಲು ನಂದ ಕಿಶೋರ್ ಬಯಸಿದ್ದಾರೆ. ಈಗ ನಿಯಮಗಳು ಸಡಿಲಿಕೆಯಾಗಿರುವುದರಿಂದ ಮೇಕಿಂಗ್ ವಿಡಿಯೋ ಸಿದ್ಧಪಡಿಸಿ ಬಳಿಕ ಉಳಿದ ಚಟುವಟಿಕೆಗಳನ್ನು ಮುಂದುವರಿಸಲು ಅವರು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಚಿತ್ರದಲ್ಲಿ ನಾಯಕನ ಇಂಟ್ರೊಡಕ್ಷನ್ ಹಾಡಿನ ಚಿತ್ರೀಕರಣ ಬಾಕಿ ಉಳಿದಿದೆ. ನಿಗದಿಯಾದಂತೆ ನಡೆದಿದ್ದರೆ ಈ ವೇಳೆಗೆ 'ಪೊಗರು' ಚಿತ್ರಮಂದಿರದಲ್ಲಿ ಇರುತ್ತಿತ್ತು. ಹೈದರಾಬಾದ್‌ನಲ್ಲಿ ಹಾಡಿನ ಶೂಟಿಂಗ್ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಕೊರೊನಾ ವೈರಸ್ ಕಾರಣದಿಂದ ಚಿತ್ರೀಕರಣ ಸ್ಥಗಿತಗೊಂಡಿತ್ತು.

ಬಿಕೆ ಗಂಗಾಧರ್ ನಿರ್ಮಾಣದ ಸಿನಿಮಾದಲ್ಲಿ ಧ್ರುವ ಸರ್ಜಾ ರಶ್ಮಿಕಾ ಮಂದಣ್ಣ, ಚಿಕ್ಕಣ್ಣ, ಕುರಿ ಪ್ರತಾಪ್, ರವಿ ಶಂಕರ್ ಮುಂತಾದವರು ನಟಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT