ವೈಲ್ಡ್ ಕರ್ನಾಟಕ 
ಸಿನಿಮಾ ಸುದ್ದಿ

ಪ್ರಥಮ ಬಾರಿಗೆ 'ವೈಲ್ಡ್ ಕರ್ನಾಟಕ'ದಲ್ಲಿ ಸಿನಿಮಾ ನಟರು

ಇದೇ ಮೊದಲ ಬಾರಿಗೆ ಚಲನಚಿತ್ರ ನಟರು ಬಹುಭಾಷೆಯ "ವೈಲ್ಡ್​​ ಕರ್ನಾಟಕ" ಕಾರ್ಯಕ್ರಮವೊಂದಕ್ಕೆ ಹಿನ್ನೆಲೆ ಧ್ವನಿ ನೀಡಿದ್ದಾರೆ.

ಬೆಂಗಳೂರು: ಇದೇ ಮೊದಲ ಬಾರಿಗೆ ಚಲನಚಿತ್ರ ನಟರು ಬಹುಭಾಷೆಯ "ವೈಲ್ಡ್​​ ಕರ್ನಾಟಕ" ಕಾರ್ಯಕ್ರಮವೊಂದಕ್ಕೆ ಹಿನ್ನೆಲೆ ಧ್ವನಿ ನೀಡಿದ್ದಾರೆ.

ವನ್ಯಜೀವಿಗಳ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ವೈಲ್ಡ್ ಕರ್ನಾಟಕ ಸಾಕ್ಷ್ಯಚಿತ್ರ ಸಿದ್ಧವಾಗಿದೆ. ರಾಜ್ಯ ಅರಣ್ಯ ಇಲಾಖೆಯಡಿಯಲ್ಲಿ ವನ್ಯ ಜೀವಿಗಳ ಕಥೆ ಮೂಡಿಬರಲಿದ್ದು, ಈ ಕಾರ್ಯಕ್ರಮ ಡಿಸ್ಕವರಿ ಚಾನೆಲ್​ನಲ್ಲಿ ಜೂನ್ 5 ರಂದು ರಾತ್ರಿ 8 ಗಂಟೆಗೆ ತೆರೆಗೆ ಬರಲಿದೆ.

ಡಿಸ್ಕವರಿ ಚಾನಲ್​, ಇದೇ ಮೊದಲ ಬಾರಿಗೆ ಚಲನಚಿತ್ರ ನಟರನ್ನು ಬಳಸಿಕೊಂಡು ವೈಲ್ಡ್​​ ಕರ್ನಾಟಕ ಎಂಬ ಕಾರ್ಯಕ್ರಮವನ್ನು ನರೇಟ್​ ಮಾಡುತ್ತಿದೆ ಎಂದು ಇನ್ ಸ್ಟಾ ಗ್ರಾಂ ಖಾತೆಯಲ್ಲಿ ಬರೆದುಕೊಂಡಿದೆ.

ಕನ್ನಡದ ನಿರ್ದೇಶಕ ರಿಷಬ್ ಶೆಟ್ಟಿ, ತೆಲುಗು ಮತ್ತು ತಮಿಳಿನಲ್ಲಿ ಪ್ರಕಾಶ್ ರೈ, ಹಿಂದಿಯಲ್ಲಿ ರಾಜ್ ಕುಮಾರ್ ರಾವ್ ಮತ್ತು ಇಂಗ್ಲೀಷ್ ನಲ್ಲಿ ಸರ್ ಡೇವಿಡ್ ಅಟಿನ್ ಬರೋ ಧ್ವನಿ ನೀಡಿದ್ದಾರೆ.

ಕರ್ನಾಟಕದ ಕಾಡಿನಲ್ಲಿ ಅಪರೂಪದ ವನ್ಯಜೀವಿಗಳ ಚಲನವಲನ ಮತ್ತು ಜೀವನ ಶೈಲಿಯನ್ನು 4 ಕೆ ಉಲ್ಟ್ರಾ ಎಚ್ ಡಿ ಕ್ಯಾಮರಾದಲ್ಲಿ ಸೆರೆ ಹಿಡಿಯಲಾಗಿದೆ. 20ಕ್ಕೂ ಅಧಿಕ ಛಾಯಾಗ್ರಾಹಕರು ಸತತ ನಾಲ್ಕು ವರ್ಷ ಶ್ರಮ ವಹಿಸಿ ಇದನ್ನು ಚಿತ್ರೀಕರಿಸಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT