ಶಾರೂಖ್ ಖಾನ್ 
ಸಿನಿಮಾ ಸುದ್ದಿ

ಮುಂದಿನ ವರ್ಷ ದೊಡ್ಡದಾದ, ಉತ್ತಮ ಪಾರ್ಟಿ: 55ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶಾರೂಖ್ ಖಾನ್ 

ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್  55 ನೇ ವರ್ಷಕ್ಕೆ ಕಾಲಿಡುತ್ತಿದ್ದಂತೆ  ಅಭಿಮಾನಿಗಳ ಮುಂದುವರಿದ ಪ್ರೀತಿಗಾಗಿ ಧನ್ಯವಾದ ಸಲ್ಲಿಸಿದ್ದು, ಮುಂದಿನ ವರ್ಷ ದೊಡ್ಡದಾದ, ಉತ್ತಮ ಪಾರ್ಟಿ ಮಾಡೋಣ ಎಂದು ಹೇಳಿದ್ದಾರೆ.

ಮುಂಬೈ: ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್  55 ನೇ ವರ್ಷಕ್ಕೆ ಕಾಲಿಡುತ್ತಿದ್ದಂತೆ  ಅಭಿಮಾನಿಗಳ ಮುಂದುವರಿದ ಪ್ರೀತಿಗಾಗಿ ಧನ್ಯವಾದ ಸಲ್ಲಿಸಿದ್ದು, ಮುಂದಿನ ವರ್ಷ ದೊಡ್ಡದಾದ, ಉತ್ತಮ ಪಾರ್ಟಿ ಮಾಡೋಣ ಎಂದು ಹೇಳಿದ್ದಾರೆ.

ಪ್ರತಿ ವರ್ಷ ಹುಟ್ಟುಹಬ್ಬ ಬಂತೆಂದರೆ ಸಾಕು, ತನ್ನ ನೆಚ್ಚಿನ ನಟನನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಶಾರೂಖ್ ಖಾನ್ ಅವರ ಬಾಂದ್ರಾದಲ್ಲಿನ ಬಂಗಲೆಯ ಮುಂಭಾಗ ನೆರೆಯುತ್ತಿದ್ದರು. ಆದರೆ, ಈ ಬಾರಿ ಕೊರೋನಾ ವೈರಸ್ ಕಾರಣದಿಂದಾಗಿ ಪೊಲೀಸರು ಬ್ಯಾರಿಕೇಡ್ ಹಾಗೂ ಸುರಕ್ಷತೆ ಮೂಲಕ ಅವರ ಮನೆಗೆ ಅಭಿಮಾನಿಗಳು ಹೋಗುವುದನ್ನು ನಿರ್ಬಂಧಿಸಲಾಗಿತ್ತು.

ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಟ್ವೀಟರ್ ನಲ್ಲಿ ವಿಡಿಯೋವೊಂದನ್ನು ಫೋಸ್ಟ್ ಮಾಡಿರುವ ಶಾರೂಖ್ ಖಾನ್,  ತಮ್ಮ ಅಭಿಮಾನಿ ಬಳಗದವರು ನಡೆಸಿರುವ ರಕ್ತದಾನ, ಪಿಪಿಇ ಕಿಟ್ ವಿತರಣೆ ಮತ್ತಿತರ ಅನೇಕ ಸಾಮಾಜಿಕ ಸೇವಾ ಕಾರ್ಯಗಳಿಂದ ತಾವು ಆಕರ್ಷಿತರಾಗಿರುವುದಾಗಿ ತಿಳಿಸಿದ್ದಾರೆ.

'' ನಿಮ್ಮೆಲ್ಲರಿಗೂ ಧನ್ಯವಾದಗಳು. ನಾನು ನಿಮ್ಮೆಲ್ಲರನ್ನೂ ಪ್ರೀತಿಸುತ್ತೇನೆ. ಮುಂದಿನ ವರ್ಷ ನಾವೆಲ್ಲರೂ ಒಗ್ಗೂಡಿ ದೊಡ್ಡದಾದ ಉತ್ತಮವಾದ ಪಾರ್ಟಿಯನ್ನು ನಡೆಸುತ್ತೇವೆ. 55ನೇ ಜನ್ಮ ದಿನಕ್ಕಿಂತ 56ನೇ ಜನ್ಮ ದಿನ ಉತ್ತಮವಾಗಿರಲಿದೆ ಎಂದು ಐಪಿಎಲ್ ಹಿನ್ನೆಲೆಯಲ್ಲಿ ಸದ್ಯ ದುಬೈನಲ್ಲಿದ್ದು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಬೆಂಬಲಿಸುತ್ತಿರುವ ಶಾರೂಖ್ ಖಾನ್ ತಿಳಿಸಿದ್ದಾರೆ.

 ಶಾರೂಖ್ ಖಾನ್ ಜಗತ್ತಿನಾದ್ಯಂತ ಅಭಿಮಾನಿ ಬಳಗವನ್ನು ಹೊಂದಿದ್ದು, ಟ್ವೀಟರ್ ನಲ್ಲಿ 4 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಗಲಿದ್ದಾರೆ. ಲಂಡನ್, ನ್ಯೂಯಾರ್ಕ್, ಮಲೇಷ್ಯಾ ಸೇರಿದಂತೆ ದೇಶದ ಹಲವೆಡೆಗಳಿಂದ ಟ್ವೀಟರ್ ಲೈವ್ ನಲ್ಲಿ ಕೇಕ್ ಕಟ್ ಮಾಡಿ ಶಾರೂಖ್ ಖಾನ್ ಗೆ ಹುಟ್ಟುಹಬ್ಬದ ಶುಭಾಶಯ ಕೋರಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT