ಶಾರೂಖ್ ಖಾನ್ 
ಸಿನಿಮಾ ಸುದ್ದಿ

ಮುಂದಿನ ವರ್ಷ ದೊಡ್ಡದಾದ, ಉತ್ತಮ ಪಾರ್ಟಿ: 55ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶಾರೂಖ್ ಖಾನ್ 

ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್  55 ನೇ ವರ್ಷಕ್ಕೆ ಕಾಲಿಡುತ್ತಿದ್ದಂತೆ  ಅಭಿಮಾನಿಗಳ ಮುಂದುವರಿದ ಪ್ರೀತಿಗಾಗಿ ಧನ್ಯವಾದ ಸಲ್ಲಿಸಿದ್ದು, ಮುಂದಿನ ವರ್ಷ ದೊಡ್ಡದಾದ, ಉತ್ತಮ ಪಾರ್ಟಿ ಮಾಡೋಣ ಎಂದು ಹೇಳಿದ್ದಾರೆ.

ಮುಂಬೈ: ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್  55 ನೇ ವರ್ಷಕ್ಕೆ ಕಾಲಿಡುತ್ತಿದ್ದಂತೆ  ಅಭಿಮಾನಿಗಳ ಮುಂದುವರಿದ ಪ್ರೀತಿಗಾಗಿ ಧನ್ಯವಾದ ಸಲ್ಲಿಸಿದ್ದು, ಮುಂದಿನ ವರ್ಷ ದೊಡ್ಡದಾದ, ಉತ್ತಮ ಪಾರ್ಟಿ ಮಾಡೋಣ ಎಂದು ಹೇಳಿದ್ದಾರೆ.

ಪ್ರತಿ ವರ್ಷ ಹುಟ್ಟುಹಬ್ಬ ಬಂತೆಂದರೆ ಸಾಕು, ತನ್ನ ನೆಚ್ಚಿನ ನಟನನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಶಾರೂಖ್ ಖಾನ್ ಅವರ ಬಾಂದ್ರಾದಲ್ಲಿನ ಬಂಗಲೆಯ ಮುಂಭಾಗ ನೆರೆಯುತ್ತಿದ್ದರು. ಆದರೆ, ಈ ಬಾರಿ ಕೊರೋನಾ ವೈರಸ್ ಕಾರಣದಿಂದಾಗಿ ಪೊಲೀಸರು ಬ್ಯಾರಿಕೇಡ್ ಹಾಗೂ ಸುರಕ್ಷತೆ ಮೂಲಕ ಅವರ ಮನೆಗೆ ಅಭಿಮಾನಿಗಳು ಹೋಗುವುದನ್ನು ನಿರ್ಬಂಧಿಸಲಾಗಿತ್ತು.

ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಟ್ವೀಟರ್ ನಲ್ಲಿ ವಿಡಿಯೋವೊಂದನ್ನು ಫೋಸ್ಟ್ ಮಾಡಿರುವ ಶಾರೂಖ್ ಖಾನ್,  ತಮ್ಮ ಅಭಿಮಾನಿ ಬಳಗದವರು ನಡೆಸಿರುವ ರಕ್ತದಾನ, ಪಿಪಿಇ ಕಿಟ್ ವಿತರಣೆ ಮತ್ತಿತರ ಅನೇಕ ಸಾಮಾಜಿಕ ಸೇವಾ ಕಾರ್ಯಗಳಿಂದ ತಾವು ಆಕರ್ಷಿತರಾಗಿರುವುದಾಗಿ ತಿಳಿಸಿದ್ದಾರೆ.

'' ನಿಮ್ಮೆಲ್ಲರಿಗೂ ಧನ್ಯವಾದಗಳು. ನಾನು ನಿಮ್ಮೆಲ್ಲರನ್ನೂ ಪ್ರೀತಿಸುತ್ತೇನೆ. ಮುಂದಿನ ವರ್ಷ ನಾವೆಲ್ಲರೂ ಒಗ್ಗೂಡಿ ದೊಡ್ಡದಾದ ಉತ್ತಮವಾದ ಪಾರ್ಟಿಯನ್ನು ನಡೆಸುತ್ತೇವೆ. 55ನೇ ಜನ್ಮ ದಿನಕ್ಕಿಂತ 56ನೇ ಜನ್ಮ ದಿನ ಉತ್ತಮವಾಗಿರಲಿದೆ ಎಂದು ಐಪಿಎಲ್ ಹಿನ್ನೆಲೆಯಲ್ಲಿ ಸದ್ಯ ದುಬೈನಲ್ಲಿದ್ದು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಬೆಂಬಲಿಸುತ್ತಿರುವ ಶಾರೂಖ್ ಖಾನ್ ತಿಳಿಸಿದ್ದಾರೆ.

 ಶಾರೂಖ್ ಖಾನ್ ಜಗತ್ತಿನಾದ್ಯಂತ ಅಭಿಮಾನಿ ಬಳಗವನ್ನು ಹೊಂದಿದ್ದು, ಟ್ವೀಟರ್ ನಲ್ಲಿ 4 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಗಲಿದ್ದಾರೆ. ಲಂಡನ್, ನ್ಯೂಯಾರ್ಕ್, ಮಲೇಷ್ಯಾ ಸೇರಿದಂತೆ ದೇಶದ ಹಲವೆಡೆಗಳಿಂದ ಟ್ವೀಟರ್ ಲೈವ್ ನಲ್ಲಿ ಕೇಕ್ ಕಟ್ ಮಾಡಿ ಶಾರೂಖ್ ಖಾನ್ ಗೆ ಹುಟ್ಟುಹಬ್ಬದ ಶುಭಾಶಯ ಕೋರಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT