ಯೋಗರಾಜ್ ಭಟ್ ಮತ್ತು ರವಿ ಬೆಳಗೆರೆ (ಸಂಗ್ರಹ ಚಿತ್ರ) 
ಸಿನಿಮಾ ಸುದ್ದಿ

ಇದು ರವಿ ಬೆಳೆಗೆರೆ ಸಾವಲ್ಲ, ಹುಟ್ಟು: ಯೋಗರಾಜ್ ಭಟ್

ಕನ್ನಡ ಅಭಿಮಾನಿಯಾಗಿ ಇದು ರವಿ ಬೆಳಗೆರೆ ಅವರ ಸಾವಲ್ಲ, ಅವರ ಹುಟ್ಟು ಎಂದು ಸಾಹಿತಿ,ನಿರ್ದೇಶಕ ಯೋಗರಾಜ್ ಭಟ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಕನ್ನಡ ಅಭಿಮಾನಿಯಾಗಿ ಇದು ರವಿ ಬೆಳಗೆರೆ ಅವರ ಸಾವಲ್ಲ, ಅವರ ಹುಟ್ಟು ಎಂದು ಸಾಹಿತಿ, ನಿರ್ದೇಶಕ ಯೋಗರಾಜ್ ಭಟ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕರೀಷ್ಮಾ ಹಿಲ್ಸ್ ನ ರವಿಬೆಳಗೆರೆಯ ಅವರ ನಿವಾಸದಲ್ಲಿ ಅಂತಿಮ ದರ್ಶನ ಪಡೆದು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಮೊನ್ನೆವರೆಗೂ ಫೋನ್‍ ನಲ್ಲಿ ರವಿ ಬೆಳಗೆರೆಯೊಂದಿಗೆ ನನ್ನ ಸಿನಿಮಾಗಳ ಬಗ್ಗೆ ಮಾತನಾಡುತ್ತಿದ್ದೆ. ಅವರಿಗೆ ಅನಾರೋಗ್ಯ ಕಾಡುತ್ತಲೇ ಇತ್ತು. ಸಾವು ಬಂದು ಕರೆದಾಗ ಅತ್ಲಾಗೆ ನೋಡೋಣ ನಡಿ ಎಂದು ಹೊರಟುಬಿಟ್ಟಿದ್ದಾರೆನೋ ಅನ್ನಿಸುತ್ತಿದೆ ಎಂದು ಅವರು ಸಂತಾಪ ಸೂಚಿಸಿದರು.

ರವಿ ಬೆಳೆಗೆರೆ ಅವರು ನೆನಪು, ಬರಹಗಳೊಂದಿಗೆ ನಮ್ಮೊಂದಿಗಿದ್ದಾರೆ. ಅವರು ಸಂಗೀತ ಪ್ರಿಯರಾಗಿದ್ದು, ನನ್ನದು ಅವರದ್ದು ಅದ್ಭುತ ಸ್ನೇಹ ಎಂದರು.

ನನ್ನ ಚಿತ್ರ, ಹಾಡುಳ ಬಗ್ಗೆ ಸಾಕಷ್ಟು ಮಾತನಾಡುತ್ತಿದ್ದರು. ತುಂಬು ಜೀವನವನ್ನು ನಡೆಸಿದ್ದು, ಧೈರ್ಯಕ್ಕೆ ಮತ್ತೊಂದು ಹೆಸರು ಧೀಮಂತ ಪತ್ರಕರ್ತ ಎಂದರು.

ಎಲ್ಲಾ ಕಲೆಗಳನ್ನು ಮೋಹಿಸಿ ಬದುಕಿದ ಜೀವ ಅವರದ್ದು. ಕಳೆದ ವರ್ಷ ಕರಾವಳಿಯಲ್ಲಿ ನನಗೆ ಪ್ರಶಸ್ತಿ ನೀಡಿದ್ದರು. ಈಗ ಹೋಗಿ ಬನ್ನಿ ಎನ್ನುವುದು ಬಿಟ್ಟರೆ ಬೇರೆನಿಲ್ಲ ಎಂದು ಅವರು ಬೇಸರಿಂದ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT