ಹರ್ಷಿಕಾ ಪೂಣಚ್ಚ 
ಸಿನಿಮಾ ಸುದ್ದಿ

ಭೋಜಪುರಿ ಭಾಷೆಯಲ್ಲಿ ಹರ್ಷಿಕಾ ಪೂಣಚ್ಚ ನಟನೆ

ಕನ್ನಡ, ತಮಿಳು, ತೆಲುಗು, ಕೊಡವ, ಮಲಯಾಳಂ ಸೇರಿದಂತೆ ಈಗಾಗಲೇ ಹಲವು ಭಾಷೆಗಳಲ್ಲಿ ನಟಿಸಿರುವ ನಟಿ ಹರ್ಷಿಕಾ ಪೂಣಚ್ಚ, ಇದೀಗ ಭೋಜಪುರಿ ಭಾಷೆಯ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಬೆಂಗಳೂರು: ಕನ್ನಡ, ತಮಿಳು, ತೆಲುಗು, ಕೊಡವ, ಮಲಯಾಳಂ ಸೇರಿದಂತೆ ಈಗಾಗಲೇ ಹಲವು ಭಾಷೆಗಳಲ್ಲಿ ನಟಿಸಿರುವ ನಟಿ ಹರ್ಷಿಕಾ ಪೂಣಚ್ಚ, ಇದೀಗ ಭೋಜಪುರಿ ಭಾಷೆಯ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. 

ಭೋಜ್‌ಪುರಿ ಚಿತ್ರರಂಗದ ಸೂಪರ್ ಸ್ಟಾರ್ ನಟ ಪವನ್ ಸಿಂಗ್ ಸಿನಿಮಾದ ನಾಯಕರಾಗಿದ್ದು, ಈ ಸಿನಿಮಾ ಭೋಜ್‌ಪುರಿ ಜೊತೆಗೆ ಹಿಂದಿ ಭಾಷೆಯಲ್ಲಿ ಸಹ ಬಿಡುಗಡೆ ಆಗಲಿದೆ. ಸಿನಿಮಾದ ಚಿತ್ರೀಕರಣ ಶೇ 50 ರಷ್ಟು ಪೂರ್ಣವಾಗಿದೆ. ಸಂಪೂರ್ಣ ಚಿತ್ರೀಕರಣ ಲಂಡನ್‌ನಲ್ಲಿಯೇ ನಡೆಯಲಿದೆಯಂತೆ.

ಹರ್ಷಿಕಾ ಈಗ ಸಿನಿಮಾ ಅರ್ಧ ಭಾಗದ ಚಿತ್ರೀಕರಣವನ್ನೂ ಮುಗಿಸಿದ್ದಾರೆ. ಲವ್​ಸ್ಟೋರಿವುಳ್ಳ ಈ ಚಿತ್ರದ ಪೂರ್ತಿ ಸಿನಿಮಾದ ಚಿತ್ರೀಕರಣವು ಲಂಡನ್ ನಲ್ಲಿ ನಡೆಯಲಿದೆ. ಹೀಗಾಗಿ ಹರ್ಷಿಕಾ ಸದ್ಯ ಲಂಡನ್ ನಲ್ಲಿ ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಈ ಕುರಿತು ಹರ್ಷಿಕಾ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ.

ನನ್ನ ಪ್ರೀತಿಯ ಕನ್ನಡಿಗರಿಗೆ ನನ್ನ ನಮಸ್ಕಾರ.

ನೀವು ಸದಾ ನನ್ನನ್ನು ಬೆಳಿಸಿದ್ದೀರಿ, ನನ್ನ ಕಷ್ಟದ ಸಮಯದಲ್ಲಿ ನನ್ನ ಜೊತೆ ನಿಂತಿದ್ದೀರಿ. ಕಳೆದ 2 ವರ್ಷಗಳು ನನ್ನ ಜೀವನದ ಅತೀ ಕಷ್ಟದ ಹಾಗು ನೋವಿನ ಸಮಯ, ತಂದೆಯನ್ನು ಕಳೆಕೊಂಡು ನನ್ನ ಹಾಗು ಅಮ್ಮನ ಜೀವನ ದಿಕ್ಕು ತೋಚದಂತೆ ಆಗಿ ಹೋಗಿತ್ತು. ಈಗಲೂ ಅವರ ನೆನಪು ಸದಾ ಕಾಡುತ್ತೆ.

ಸರಿಯಾಗಿ ಒಂದೂವರೆ ವರ್ಷದ ನಂತರ ನಾನು ನನ್ನ ಸಿನಿಮಾ ಕೆಲಸವನ್ನು ಮತ್ತೆ ಶುರುಮಾಡಿದ್ದೇನೆ , ಒಂದು ಭೋಜಪುರಿ ಸಿನೆಮಾ ಶೂಟಿಂಗಾಗಿ ಲಂಡನ್ಗೆ ಬಂದಿದ್ದೇನೆ. ಈ ಹೊಸ ಸಿನೆಮಾಗೆ ನಿಮ್ಮೆಲರ ಆಶೀರ್ವಾದ ನನಗೆ ಅತ್ಯಗತ್ಯ ಎಂದಿಗೂ ನೆನಪಿಡಿ , ಬೇರೆ ಯಾವ ಭಾಷೆಯಲ್ಲಿಯು ನಾನು ಕೆಲಸ ಮಾಡಿದರು, ನಾನು ಇಂದಿಗೂ ಎಂದಿಗೂ ಕರ್ನಾಟಕದ ಕನ್ನಡದ ಮನೆ ಮಗಳು ಎಂದು ಬರೆದುಕೊಂಡಿದ್ದಾರೆ.

'ಆರೇಳು ಭಾಷೆಯಲ್ಲಿ ನಟಿಸಿದ ನನಗೆ ಇದೀಗ ಭೋಜಪುರಿಯಲ್ಲಿಯೂ ನಟಿಸುವ ಅವಕಾಶ ಸಿಕ್ಕಿದೆ. ಭೋಜಪುರಿಯಲ್ಲಿ ಸಾಕಷ್ಟು ಸಿನಿಮಾ ಮಾಡಿರುವ ಪವನ್ ಸಿಂಗ್ ಈ ಚಿತ್ರದ ನಾಯಕ. ಯಾಶಿ ಪ್ರೊಡಕ್ಷನ್ಸ್​ನಲ್ಲಿ ಅಭಯ್ ಸಿನ್ಹಾ ಎಂಬುವವರು ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ’

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!