ರೆಬೆಲ್ ಸ್ಟಾರ್ ಅಂಬರೀಷ್ ಮತ್ತು ದರ್ಶನ್ ತೂಗುದೀಪ(ಸಂಗ್ರಹ ಚಿತ್ರ) 
ಸಿನಿಮಾ ಸುದ್ದಿ

ಅಪ್ಪಾಜಿಯವರ ಬೈಗುಳವನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ: ನಟ ದರ್ಶನ್

ಅಪ್ಪಾಜಿ ಅಂಬರೀಷ್ ರವರನ್ನು ದೈಹಿಕವಾಗಿ ಅಗಲಿ ಎರಡು ವರ್ಷಗಳಾಗಿವೆ. ಆದರೆ ನಮ್ಮ ಹೃದಯದಲ್ಲಿ ಅವರು ಎಂದೆಂದಿಗೂ ಚಿರಸ್ಥಾಯಿಯಾಗಿ ಉಳಿಯುತ್ತಾರೆ ಎಂದು ಕನ್ನಡದ ಖ್ಯಾತ ನಾಯಕ ನಟ ದರ್ಶನ್ ಹೇಳಿದ್ದಾರೆ.

ಬೆಂಗಳೂರು: ಅಪ್ಪಾಜಿ ಅಂಬರೀಷ್ ರವರನ್ನು ದೈಹಿಕವಾಗಿ ಅಗಲಿ ಎರಡು ವರ್ಷಗಳಾಗಿವೆ. ಆದರೆ ನಮ್ಮ ಹೃದಯದಲ್ಲಿ ಅವರು ಎಂದೆಂದಿಗೂ ಚಿರಸ್ಥಾಯಿಯಾಗಿ ಉಳಿಯುತ್ತಾರೆ ಎಂದು ಕನ್ನಡದ ಖ್ಯಾತ ನಾಯಕ ನಟ ದರ್ಶನ್ ಹೇಳಿದ್ದಾರೆ.

ಅಂಬರೀಷ್ ಅವರ 2ನೇ ಪುಣ್ಯತಿಥಿ ಅಂಗವಾಗಿ ಕಂಠೀರವ ಸ್ಟುಡಿಯೊದಲ್ಲಿ ಅಂಬರೀಷ್ ಸಮಾಧಿಗೆ ಸುಮಲತಾ ಅಂಬರೀಷ್ , ಪುತ್ರ ಅಂಬರೀಷ್ ಜೊತೆಗೆ ಬಂದು ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. 

ಅಂಬರೀಷ್ ಅವರು ಹಿರಿಯ ಮಾರ್ಗದರ್ಶಕರಂತೆ ನಮಗೆಲ್ಲರೂ ಇದ್ದರು. ನಾವು ಏನೇ ತಪ್ಪುಗಳನ್ನು ಮಾಡಿದರೂ ಬೈದು, ತಿದ್ದಿ ತೀಡುತ್ತಿದ್ದರು. ಅವರ ಪ್ರೀತಿಯ ಬೈಗುಳವನ್ನು ಇಂದು ನಾನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದರು.

ಇಂದು ನಾಡಿನಾದ್ಯಂತ ಕೊರೋನಾದಿಂದಾಗಿ ಪರಿಸ್ಥಿತಿ ತೀವ್ರ ಹದಗೆಟ್ಟಿದೆ. ಇಂತಹ ಪರಿಸ್ಥಿತಿಯಲ್ಲಿ ಸಾಧ್ಯವಾದಷ್ಟು ಚೆನ್ನಾಗಿ ಕೆಲಸ ಮಾಡಿ ಮುನ್ನಡೆಯಬೇಕಾಗಿದ್ದು ನಮ್ಮ ಕರ್ತವ್ಯ ಎಂದರು. 

ಕನ್ನಡ ಚಿತ್ರರಂಗದವರಿಗೆ ಹಿರಿಯಣ್ಣನಂತೆ, ಯಜಮಾನನ ಸ್ಥಾನದಲ್ಲಿ ನಿಂತಿದ್ದ ಖ್ಯಾತ ಹಿರಿಯ ನಟ ಅಂಬರೀಷ್ ಅಗಲಿ ಇಂದಿಗೆ ಎರಡು ವರ್ಷ. 2018ರ ನವೆಂಬರ್ 24ರಂದು ಅವರು ಅಗಲಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT