ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ಮನಸ್ಸಿನ ಆರು ಬಯಕೆಗಳ ಅನ್ವೇಷಣೆಯೇ 'ಅರಿಷಡ್ವರ್ಗ': ನಿರ್ದೇಶಕ ಅರವಿಂದ್ ಕಾಮತ್

ನಾಳೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿರುವ  'ಅರಿಷಡ್ವರ್ಗ' ಚಿತ್ರ  ಮನಸ್ಸಿನ ಆರು ಬಯಕೆಗಳ ಅನ್ವೇಷಣೆಯಾಗಿದೆ ಎಂದು ಈ ಚಿತ್ರದ ನಿರ್ದೇಶಕ ಅರವಿಂದ್ ಕಾಮತ್ ಹೇಳಿದ್ದಾರೆ. 

ಬೆಂಗಳೂರು: ನಾಳೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿರುವ  'ಅರಿಷಡ್ವರ್ಗ' ಚಿತ್ರ  ಮನಸ್ಸಿನ ಆರು ಬಯಕೆಗಳ ಅನ್ವೇಷಣೆಯಾಗಿದೆ ಎಂದು ಈ ಚಿತ್ರದ ನಿರ್ದೇಶಕ ಅರವಿಂದ್ ಕಾಮತ್ ಹೇಳಿದ್ದಾರೆ. ಈ ಸಿನಿಮಾ ಕೊಲೆಯ ಪರಿಸ್ಥಿತಿಯಲ್ಲಿ ಸಿಲುಕಿರುವ ನೈಜ ವ್ಯಕ್ತಿಗಳ ಕುರಿತಾಗಿದ್ದು, ತನಿಖೆಯ ಮೂಲಕ ಅವರ ಪರಸ್ಪರ ಸಂಬಂಧವು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದು ಕಥೆಯಲ್ಲಿ ತೆರೆದುಕೊಳ್ಳುತ್ತದೆ ಎಂದಿದ್ದಾರೆ.

ಸುತ್ತಲೂ ನಡೆಯುವ ವಿವಿಧ ಸಂಗತಿಗಳು ಕೂಡಾ ಈ ಕಥೆಗೆ ಪ್ರೇರಣೆಯಾಗಿದ್ದು, ಕೊಲೆಯ ರಹಸ್ಯತೆಯ ಸುತ್ತ ಸಾಗುವ ಚಿತ್ರ ಖಂಡಿತವಾಗಿಯೂ ಪ್ರೇಕ್ಷಕರಿಗೆ ಇಷ್ಟವಾಗಲಿದೆ ಎಂದು ಅವರು ಭರವಸೆ ಹೊಂದಿದ್ದಾರೆ.

8-9 ವರ್ಷಗಳ ಕಾಲ ಐಟಿ ವಲಯದಲ್ಲಿ ಕೆಲಸ ಮಾಡಿರುವ ಅರವಿಂದ್ ಕಾಮತ್, 2010ರಲ್ಲಿ ಸಿನಿಮಾ ಪ್ರಪಂಚಕ್ಕೆ ಕಾಲಿಟ್ಟಿದ್ದು, ಅಲ್ಲಿಂದ ಅವರು ಹಿಂತಿರುಗಿ ನೋಡೆ ಇಲ್ಲ. ಅವರೇ ಸ್ವತಂತ್ರವಾಗಿ ಮಾಡಿರುವ ಇನ್ವೆಂಡೊ ಚಿತ್ರ ಕೆಲ ಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡಿದೆ. ನಂತರ ಅವರು ಜಾಹಿರಾತು ಏಜೆನ್ಸಿಯೊಂದರಲ್ಲಿ ಕೆಲಸ ಮಾಡುತ್ತಾ ಅರಿಷಡ್ವರ್ಗ ಚಿತ್ರ ಮಾಡಿದ್ದಾಗಿ ಅವರು ಹೇಳಿದ್ದಾರೆ.

2017ರಲ್ಲಿ ಈ ಚಿತ್ರದ ಕೆಲಸವನ್ನು ಆರಂಭಿಸಿರುವ ಅರವಿಂದ್ ಕಾಮತ್, ಈಗಲೂ ಹ್ಯಾಂಗ್ ಓವರ್ ನಲ್ಲಿದ್ದು, ಉತ್ತಮ ಸ್ಪಂದನೆಯ ನಿರೀಕ್ಷೆಯಲ್ಲಿದ್ದಾರೆ. ನಿರ್ಮಾಪಕರು ತನ್ನ ಮೇಲೆ ನಂಬಿಕೆ ಇಟ್ಟು ಚಿತ್ರ ಮಾಡಿದ್ದು, ಅವರ ನಂಬಿಕೆ ಹುಸಿಯಾಗಲು ಬಿಡಲ್ಲ, ಪೋಸ್ಟ್ ಪ್ರೊಢಕ್ಷನ್ ಕಾರ್ಯಕ್ಕಾಗಿ ಒಂದು ವರ್ಷ ತೆಗೆದುಕೊಂಡಿರುವುದಾಗಿ ಅವರು ತಿಳಿಸಿದ್ದಾರೆ.

ಕಳೆದ ವರ್ಷವೇ ತಯಾರಾಗಿದ್ದ ಈ ಚಿತ್ರವನ್ನು ಈ ವರ್ಷದ ಆರಂಭದಲ್ಲಿ ಬಿಡುಗಡೆ ಮಾಡಲು ಯೋಜಿಸಲಾಗಿತ್ತು. ಆದರೆ, ಸಾಂಕ್ರಾಮಿಕ ರೋಗದ ಕಾರಣ ವಿಳಂಬವಾಯಿತು. ಇದೊಂದು ಮುಖ್ಯವಾಹಿನಿಯ ವಿಚಾರವಾಗಿದ್ದು, ಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡಾಗ ವೀಕ್ಷಕರಿಂದ ಮೊದಲ ಪ್ರತಿಕ್ರಿಯೆ ಪಡೆದಿದ್ದೇವೆ. ಅದರಿಂದ ಚಿತ್ರದ ಬಗ್ಗೆ ಪ್ರಚಾರಕ್ಕೂ ನೆರವಾಗಿದೆ ಎಂದು ಅವರು ಹೇಳಿದ್ದಾರೆ.ಸಂಯುಕ್ತ ಹೊರನಾಡು, ಅವಿನಾಶ್, ನಂದಾ ಗೋಪಾಲ್, ಮತ್ತಿತರರು ಅಭಿನಯಿಸಿರುವ ಈ ಚಿತ್ರ ಲಂಡನ್, ಸಿಂಗಾಪುರ ಮತ್ತು ವ್ಯಾಂಕೋವರ್ ಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡಿದೆ.

ಆಕ್ಟ್ 1978ರ ನಂತರ ಅರಿಷಡ್ವರ್ಗ ನಾಳೆ ಸುಮಾರು 50 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದ್ದು, ರಾಜ್ಯಾದ್ಯಂತ 70 ಪ್ರದರ್ಶನ ವಿರಲಿದೆ. ಈ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸುವ ಬಗ್ಗೆ ನಂತರ ನಿರ್ಧರಿಸಲಾಗುವುದು ಎಂದು ಅರವಿಂದ್ ಕಾಮತ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT