ಪಾರುಲ್ ಯಾದವ್ 
ಸಿನಿಮಾ ಸುದ್ದಿ

ನನ್ನ ಮಗು ಹೆಣ್ಣಾದರೆ ಏನು ಗತಿ? ನನಗೆ ತಾಯ್ತನ ಬೇಡ: ನಟಿ ಪಾರುಲ್ ಯಾದವ್ ಆತಂಕ

ಉತ್ತರ ಪ್ರದೇಶದ ಹತ್ರಾಸ್ ನಲ್ಲಿ 19 ವರ್ಷದ ದಲಿತ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ನಟಿ ಪಾರುಲ್ ಯಾದವ್ ಅವರು, ತಾನು ತಾಯಿಯಾಗುವುದಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರು: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ 19 ವರ್ಷದ ದಲಿತ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ನಟಿ ಪಾರುಲ್ ಯಾದವ್ ಅವರು, ತಾನು ತಾಯಿಯಾಗುವುದಿಲ್ಲ ಎಂದು ಹೇಳಿದ್ದಾರೆ.

‘ಹೆಣ್ತನದ ಸಾರವೇ ತಾಯ್ತನ. ಆದರೆ ನಾನಿಂದು ಅಮ್ಮನಾಗಲು ಬಯಸುತ್ತಿಲ್ಲ. ಒಂದು ಹುಡುಗಿಯಾಗಿ ಹೀಗೆ ಹೇಳುವುದು ತುಂಬಾ ಕಷ್ಟ. ಆದರೆ ನಾನು ಆಣೆ ಮಾಡಿ ಹೇಳುತ್ತಿದ್ದೇನೆ. ನಾನು ನಿಜಕ್ಕೂ ತಾಯ್ತನವನ್ನು ತ್ಯಜಿಸುತ್ತಿದ್ದೇನೆ. ನನ್ನ ಮಗು ಹೆಣ್ಣಾದರೆ ಏನು ಗತಿ? ಈ ದೇಶ ಮಹಿಳೆಯರಿಗೆ ಕ್ರೂರಿಯಾಗಿದೆ. ಹತ್ರಾಸ್‌ನಲ್ಲಿ ನಡೆದ ಭಯಂಕರ ಘಟನೆ ಇತ್ತೀಚೆಗಿನ ಉದಾಹರಣೆ' ಎಂದು ಪಾರುಲ್ ಯಾದವ್ ಟ್ವೀಟ್ ಮಾಡಿದ್ದಾರೆ.

ಕಾರಣಗಳು ಬೇರೆ ಇರಬಹುದು, ಆದರೆ ಸಂಕಷ್ಟ ಯಾವಾಗಲೂ ಹೆಣ್ಣಿಗೇ, ಅವಳಿಗೆ ಅದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ’ ಎಂಬುದಾಗಿ ಪಾರೂಲ್​ ಹೇಳಿಕೊಂಡಿದ್ದಾರೆ.

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆಯೂ ನಟಿಯರ ಬೆಂಬಲಕ್ಕೆ ನಿಂತಿದ್ದ ಪಾರುಲ್, ದೇಶದ ಅತ್ಯುನ್ನತ ತನಿಖಾ ಸಂಸ್ಥೆಗಳು ತಮ್ಮ ಸಾಮರ್ಥ್ಯವನ್ನು ಈ ಮೂವರು ಮಹಿಳೆಯರ ಮೇಲೆ ಕೇಂದ್ರೀಕರಿಸುತ್ತಿರುವುದರಲ್ಲಿ ಹೆಚ್ಚು ಅರ್ಥವಿದೆ ಎಂದು‌ ನನಗನಿಸುತ್ತಿಲ್ಲ ಎಂದು ಅಭಿಪ್ರಾಯ ಪಟ್ಟಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಗಣೇಶೋತ್ಸವಕ್ಕೆ ಅನಗತ್ಯ ನಿರ್ಬಂಧ ಇಲ್ಲ, ಆದ್ರೆ ಅಶಾಂತಿ ಸೃಷ್ಟಿಸಲು ಬಿಜೆಪಿ ಕುತಂತ್ರ: CM ಡಿ.ಕೆ ಶಿವಕುಮಾರ್ ಕಿಡಿ

ಟಿ.ನರಸೀಪುರ ಪೊಲೀಸ್ ಠಾಣೆ ಮುಂದೆ ಭಾರೀ ಹೈಡ್ರಾಮಾ: ಆರ್ ಅಶೋಕ್, ಯದುವೀರ್, ಪ್ರತಾಪ್ ಸಿಂಹ ಸೇರಿ ಬಿಜೆಪಿ ನಾಯಕರು ಪೊಲೀಸರ ವಶಕ್ಕೆ

India vs Afghanistan: ಅಭಿಷೇಕ್ ಅಬ್ಬರಕ್ಕೆ ಅಫ್ಘಾನ್ ಧೂಳೀಪಟ; ಮೊದಲ T20ಯಲ್ಲಿ ಭಾರತಕ್ಕೆ ಭರ್ಜರಿ ಗೆಲುವು

ಹಾವೇರಿ: ಪ್ರೀತಿಸಿ ಮದುವೆಯಾಗಿದ್ದ ಪತ್ನಿ ದೂರ; 'ಮುಂದಿನ ಜನ್ಮ ಇದ್ದರೆ ನಿನ್ನವನಾಗಿ ಹುಟ್ಟುವೆ' ಎಂದು ಪೋಸ್ಟ್ ಹಾಕಿ ಯುವಕ ಆತ್ಮಹತ್ಯೆ!

ಸರ್ಕಾರಿ ಸರ್ಕ್ಯೂಟ್‌ ಹೌಸ್‌ನಲ್ಲಿ 'ನೀಲಿ ಚಿತ್ರನಟಿ' ವಾಸ; ರೂರ್ಕೆಲಾದಲ್ಲಿ ಸಂಚಲನ, ಪೊಲೀಸ್ ತನಿಖೆ