ಹರಿಪ್ರಿಯಾ 
ಸಿನಿಮಾ ಸುದ್ದಿ

ದೇವಿ ಅವತಾರವೆತ್ತಿ ಕಿರುತೆರೆಗೆ ಹರಿಪ್ರಿಯಾ ಎಂಟ್ರಿ!

ಕನ್ನಡದ ಇನ್ನೊಬ್ಬ ಪ್ರತಿಭೆ ಹರಿಪ್ರಿಯಾ ಟಿವಿ ಧಾರಾವಾಹಿಯೊಂದರಲ್ಲಿ ಕಾಣಿಸಿಕೊಳ್ಳುವ ಮೂಲಕ ಕಿರುತೆರೆ ಪ್ರವೇಶಕ್ಕೆ ಸಿದ್ದವಾಗಿದ್ದಾರೆ.

ಸ್ಯಾಂಡಲ್ ವುಡ್ ನ ಪ್ರಸಿದ್ಧ ಸ್ಟಾರ್ ನಟ ನಟಿಯರೆಲ್ಲಾ ಒಂದಲ್ಲ ಒಂದು ಟಿವಿ ಧಾರಾವಾಹಿ, ರಿಯಾಲಿಟಿ ಶೋ ಮೂಲಕ ಕಿರುತೆರೆಗೆ ಪಾದಾರ್ಪಣೆ ಮಾಡುವುದು ಸಾಮಾನ್ಯ. ಇತ್ತೀಗೆ "ಕನ್ನಡತಿ" ಧಾರಾವಾಹಿಯ ಮೂಲಕ  ಮಾನ್ವಿತಾ ಕಾಮತ್ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದರು. ಇದೀಗ ಕನ್ನಡದ ಇನ್ನೊಬ್ಬ ಪ್ರತಿಭೆ ಹರಿಪ್ರಿಯಾ ಟಿವಿ ಧಾರಾವಾಹಿಯೊಂದರಲ್ಲಿ ಕಾಣಿಸಿಕೊಳ್ಳುವ ಮೂಲಕ ಕಿರುತೆರೆ ಪ್ರವೇಶಕ್ಕೆ ಸಿದ್ದವಾಗಿದ್ದಾರೆ.

ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ "ಸಂಘರ್ಷ" ಎಂಬ ಪೌರಾಣಿಕ ಧಾರಾವಾಹಿಯಲ್ಲಿ ಅತಿಥಿ ಪಾತ್ರದಲ್ಲಿ ಹರಿಪ್ರಿಯಾ ನಟಿಸುತ್ತಿದ್ದಾರೆ. ಹರಿಪ್ರಿಯಾ ನಟಿಸುತ್ತಿರುವ ಸಂಚಿಕೆಯು ದಸರಾ ಸಮಯದಲ್ಲಿ ಬಿತ್ತರವಾಗುತ್ತಿದೆ

ಮೂಲಗಳ ಪ್ರಕಾರ "ಸಂಘರ್ಷ"ದಲ್ಲಿ ದೇವಿ ಪಾತ್ರದಲ್ಲಿ ಹರಿಪ್ರಿಯಾ ಕಾಣಿಸಿಕೊಳ್ಳುತ್ತಿದ್ದಾರೆ.  ಅವರು ಇತ್ತೀಚೆಗೆ ಮೂರು ದಿನಗಳ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.

"ಇದು ನನ್ನ ಮೊದಲ ಧಾರಾವಾಹಿ. ಇದೊಂದು ಉತ್ತಮ ಅನುಭವ" ಎಂದು ಅವರು ಶೂಟಿಂಗ್ ಮುಗಿದ ನಂತರ ಹೇಳಿದರು.

ತಮಿಳಿನ Ayudha Ezhuthu ರಿಮೇಕ್ ಆಗಿರುವ "ಸಂಘರ್ಷ" ಇದಾಗಲೇ 100 ಕಂತುಗಳ ಪ್ರಸಾರ ಮುಗಿಸಿದೆ.  ತೇಜಸ್ವಿನಿ ಶೇಖರ್, ರೋಹಿತ್ ರಂಗಸ್ವಾಮಿ ಈ ಧಾರಾವಾಹಿಯ ಪ್ರಮುಖ ಪಾತ್ರದಲ್ಲಿದ್ದಾರೆ. ಈ ಧಾರಾವಾಘಿಯನ್ನು ಶ್ರುತಿ ನಾಯ್ಡು ನಿರ್ದೇಶನ ಮಾಡಿದ್ದಾರೆ.

ಈ ಹಿಂದೆ ಹರಿಪ್ರಿಯಾ ಉದಯ ಟಿವಿಯ ನಾಯಕಿ' ಧಾರಾವಾಹಿಯ ಕಥೆ ಹೇಳುವುದಕ್ಕಾಗಿ ಕಿರುತೆರೆಯಲ್ಲಿ ಕಾಣಿಸಿಕೊಂಡಿದ್ದರು. ಆದರೆ "ಸಂಘರ್ಷ"ದ ಮೂಲಕ ಇದೇ ಮೊದಲ ಬಾರಿಗೆ ಧಾರಾವಾಹಿಯಿಂದರಲ್ಲಿ ಅಭಿನಯಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT