ಪುನೀತ್ ರಾಜ್‌ಕುಮಾರ್ 
ಸಿನಿಮಾ ಸುದ್ದಿ

ಪುನೀತ್ 'ಜೇಮ್ಸ್' ಚಿತ್ರದಲ್ಲಿ ಅನು ಪ್ರಭಾಕರ್, ಆದಿತ್ಯ ಮೆನನ್

ಅಕ್ಟೋಬರ್ 12 ರಂದು ಸಂತೋಷ್ ಆನಂದ್ ರಾಮ್ ಅವರ "ಯುವರತ್ನ" ಚಿತ್ರದ ಚಿತ್ರೀಕರಣ ಮುಗಿಸಿದ ಪುನೀತ್ ರಾಜ್‌ಕುಮಾರ್ ತಮ್ಮ ಮುಂದಿನ ಯೋಜನೆ "ಜೇಮ್ಸ್" ಚಿತ್ರದ ಚಿತ್ರೀಕರಣವನ್ನು ಪುನರಾರಂಭಿಸಲು ಸಜ್ಜಾಗಿದ್ದಾರೆ. 

ಅಕ್ಟೋಬರ್ 12 ರಂದು ಸಂತೋಷ್ ಆನಂದ್ ರಾಮ್ ಅವರ "ಯುವರತ್ನ" ಚಿತ್ರದ ಚಿತ್ರೀಕರಣ ಮುಗಿಸಿದ ಪುನೀತ್ ರಾಜ್‌ಕುಮಾರ್ ತಮ್ಮ ಮುಂದಿನ ಯೋಜನೆ "ಜೇಮ್ಸ್" ಚಿತ್ರದ ಚಿತ್ರೀಕರಣವನ್ನು ಪುನರಾರಂಭಿಸಲು ಸಜ್ಜಾಗಿದ್ದಾರೆ. ಚೇತನ್ ಕುಮಾರ್ ನಿರ್ದೇಶನದ ಕಮರ್ಷಿಯಲ್ ಎಂಟರ್ಟೈನರ್ "ಜೇಮ್ಸ್:" ನಲ್ಲಿ ತೆಲುಗು ನಟ ಶ್ರೀಕಾಂತ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಅಲ್ಲದೆ ದಕ್ಷಿಣ ಭಾರತದ ಮತ್ತೊಬ್ಬ ನಟ ಆದಿತ್ಯ ಮೆನನ್ ಸಹ ಮುಂದಿನ ದಿನಗಳಲ್ಲಿ ಸೆಟ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಮಲಯಾಳಂ, ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಕೆಲಸ ಮಾಡಿದ್ದ ಈ ನಟ ಇದಕ್ಕೆ ಮುನ್ನ ಮೊದಲು ಕನ್ನಡ ಟಿವಿ ಧಾರಾವಾಹಿಯಲ್ಲಿ ಕ್ಯಾಮೆರಾವನ್ನು ಎದುರಿಸಿದ್ದರು. ಶಿವಾಜಿನಗರ, ಜಾಗ್ವಾರ್, ಕೋಲಾರ ಮತ್ತು ಸೀತಾರಾಮ ಕಲ್ಯಾಣ ಮುಂತಾದ ಚಲನಚಿತ್ರಗಳಲ್ಲಿ ಅಭಿನಯಿಸಿದ್ದ ಆದಿತ್ಯ ಪಾಲಿಗೆ "ಜೇಮ್ಸ್" ಕನ್ನಡದಲ್ಲಿ ಹೊಸದೊಂದು ಬ್ರೇಕ್ ನೀಡಲಿದೆಯೆ ನೋಡಬೇಕಿದೆ. 

"ಜೇಮ್ಸ್" ಗಾಗಿ ನಟಿ ಅನು ಪ್ರಭಾಕರ್ ಸಹ ಬಣ್ಣ ಹಚ್ಚುತ್ತಿರುವುದು ಇನ್ನೊಂದು ವಿಶೇಷ. 55 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ಅನು ಪ್ರಭಾಕರ್ ಪುನೀತ್ ಅವರೊಂದಿಗೆ ಕಾಣಿಸಿಕೊಳ್ಳುತ್ತಿರುವುದು ಇದು ಮೊದಲ ಬಾರಿಯಾಗಿದೆ. ಇತ್ತೀಚೆಗೆ ಮಹಿಳಾ ಕೇಂದ್ರಿತ ಚಿತ್ರವಾದ ಅರ್ಣಾ ಸದ್ಯಾ ಅವರ "ಸಾರವಜ್ರ" ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು ರಿಲೀಸ್ ಗೆ ಸಿದ್ದವಾಗಿದೆ. "ಜೇಮ್ಸ್" ಅನ್ನು ಕಿಶೋರ್ ಪಾತಿಕೊಂಡ  ನಿರ್ಮಿಸಿದ್ದರೆ  ಚರಣ್ ರಾಜ್ ಸಂಗೀತ ಸಂಯೋಜಿಸಿದ್ದಾರೆ. ನಿರ್ದೇಶಕ ಚೇತನ್ ಕುಮಾರ್ ಅವರು ಚಿತ್ರದ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಗಳನ್ನ ಬರೆದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT