ಚಿರಂಜೀವಿ, ನಾಗಾರ್ಜುನ, ಮಹೇಶ್ ಬಾಬು 
ಸಿನಿಮಾ ಸುದ್ದಿ

ಮಳೆ ಬಾಧಿತ ಹೈದ್ರಾಬಾದಿಗೆ ದೇಣಿಗೆ ಪ್ರಕಟಿಸಿದ ತೆಲುಗು ಸೂಪರ್ ಸ್ಟಾರ್ ಗಳು!

ಮಳೆಯಿಂದ ತೀವ್ರ ಹಾನಿಗೊಳಗಾಗಿರುವ ಮುತ್ತಿನ ನಗರಿ ಹೈದರಾಬಾದ್‌ಗಾಗಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಸ್ಥಾಪಿಸಿರುವ ಪರಿಹಾರ ನಿಧಿಗೆ  ದಕ್ಷಿಣ ಭಾರತದ ನಟರಾದ ಮೆಗಾಸ್ಟಾರ್ ಚಿರಂಜೀವಿ, ನಾಗಾರ್ಜುನ, ಜೂನಿಯರ್ ಎನ್‌ಟಿಆರ್, ವಿಜಯ್ ದೇವರಕೊಂಡ ಮತ್ತು ಮಹೇಶ್ ಬಾಬು, ದೇಣಿಗೆ ನೀಡಿದ್ದಾರೆ.

ಹೈದ್ರಾಬಾದ್:  ಮಳೆಯಿಂದ ತೀವ್ರ ಹಾನಿಗೊಳಗಾಗಿರುವ ಮುತ್ತಿನ ನಗರಿ ಹೈದರಾಬಾದ್‌ಗಾಗಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಸ್ಥಾಪಿಸಿರುವ ಪರಿಹಾರ ನಿಧಿಗೆ  ದಕ್ಷಿಣ ಭಾರತದ ನಟರಾದ ಮೆಗಾಸ್ಟಾರ್ ಚಿರಂಜೀವಿ, ನಾಗಾರ್ಜುನ, ಜೂನಿಯರ್ ಎನ್‌ಟಿಆರ್, ವಿಜಯ್ ದೇವರಕೊಂಡ ಮತ್ತು ಮಹೇಶ್ ಬಾಬು, ದೇಣಿಗೆ ನೀಡುತ್ತಿದ್ದಾರೆ.

ಮೆಗಾಸ್ಟಾರ್ ಚಿರಂಜೀವಿ 1 ಕೋಟಿ ರೂ. ದೇಣಿಗೆ ನೀಡುವುದಾಗಿ ಟ್ವೀಟರ್ ನಲ್ಲಿ ಪ್ರಕಟಿಸಿದ್ದು, ಅಗತ್ಯ ನೆರವು ನೀಡಲು ಎಲ್ಲರು ಮುಂದೆ ಬರುವಂತೆ ಮನವಿ ಮಾಡಿದ್ದಾರೆ. 

ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂ. ದೇಣಿಗೆ ನೀಡುವುದಾಗಿ ನಾಗಾರ್ಜುನ  ತಿಳಿಸಿದ್ದಾರೆ.

ಇಂತಹ ಸಂಕಷ್ಟದ ಸಂದರ್ಭದಲ್ಲಿ ತೆಲಂಗಾಣ ಮುಖ್ಯಮಂತ್ರಿ ಪರಿಹಾರ ನಿಧಿಗೆ 1 ಕೋಟಿ ರೂ.ದೇಣಿಗೆ ನೀಡುವುದಾಗಿ ನಟ ಮಹೇಶ್ ಬಾಬು ಟ್ವೀಟ್ ಮಾಡಿದ್ದಾರೆ.

ಇನ್ನೂ 50 ಲಕ್ಷ ದೇಣಿಗೆ ನೀಡುವುದಾಗಿ ಜ್ಯೂನಿಯರ್ ಎನ್ ಟಿಆರ್ ತಿಳಿಸಿದ್ದಾರೆ.

ವಿಜಯ ದೇವರಕೊಂಡ 10ಲಕ್ಷ ರೂ. ದೇಣಿಗೆ ನೀಡಿದ್ದು, ಉಳ್ಳವರು ಸಿಎಂ ಪರಿಹಾರ ನಿಧಿಗೆ ನೆರವು ನೀಡುವಂತೆ ಮನವಿ ಮಾಡಿದ್ದಾರೆ.

ತೆಲಂಗಾಣದ ರಾಜಧಾನಿಯಾಗಿರುವ ಹೈದ್ರಾಬಾದ್ ಸುತ್ತಮುತ್ತ ಕಳೆದ ವಾರ ಸುರಿದ ಧಾರಾಕಾರ ಮಳೆಯಿಂದಾಗಿ 70 ಜನರು ಸಾವನ್ನಪ್ಪಿದ್ದು, ಆಪಾರ ಪ್ರಮಾಣದ ಆಸ್ತಿಪಾಸ್ತಿ ನಷ್ಟ ಉಂಟಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT