ಅನುಪಮಾ ಗೌಡ 
ಸಿನಿಮಾ ಸುದ್ದಿ

ಸುಜಯ್ ಶಾಸ್ತ್ರಿ ನಿರ್ದೇಶನದ ಕ್ರೈಂ ಥ್ರಿಲ್ಲರ್ ನಲ್ಲಿ ಅನುಪಮಾ ಗೌಡ?

"ಗುಬ್ಬಿ ಮೇಲೆ ಬ್ರಹ್ಮಾಸ್ತ್ರ" ಚಿತ್ರದ ಮೂಲಕ ಚಿತ್ರೋದ್ಯಮಕ್ಕೆ ಪಾದಾರ್ಪಣೆ ಮಾಡಿದ್ದ ರಂಗಭೂಮಿ ಕಲಾವಿದ, ನಟ ಸುಜಯ್ ಶಾಸ್ತ್ರಿ ತಮ್ಮ ಎರಡನೇ ಚಿತ್ರಕ್ಕೆ ಸಜ್ಜಾಗಿದ್ದಾರೆ.

"ಗುಬ್ಬಿ ಮೇಲೆ ಬ್ರಹ್ಮಾಸ್ತ್ರ" ಚಿತ್ರದ ಮೂಲಕ ಚಿತ್ರೋದ್ಯಮಕ್ಕೆ ಪಾದಾರ್ಪಣೆ ಮಾಡಿದ್ದ ರಂಗಭೂಮಿ ಕಲಾವಿದ, ನಟ ಸುಜಯ್ ಶಾಸ್ತ್ರಿ ತಮ್ಮ ಎರಡನೇ ಚಿತ್ರಕ್ಕೆ ಸಜ್ಜಾಗಿದ್ದಾರೆ. ಚಿತ್ರದ ಶೀರ್ಷಿಕೆ ಬುಧವಾರ ಘೋಷಣೆಯಾಗಲಿದೆ. ಇದೊಂದು ಪ್ರೇಕ್ಷಕರನ್ನು ಸೀಟಿನ ತುದಿಯಲ್ಲೇ ಕೂರಿಸಬಹುದಾದ ಥ್ರಿಲ್ಲರ್ ಕಥಾನಕವೆಂದು ನಿರ್ದೇಶಕ ಹೇಳಿದ್ದಾರೆ.

"ಬೆಲ್ ಬಾಟಮ್" ಕಥೆ ಬರೆದಿದ್ದ ಟಿ.ಕೆ. ದಯಾನಂದ್ ಅವರು ಡಿಸೆಂಬರ್ ಮೊದಲ ವಾರದಿಂದ ಫ್ಳೋರ್ ಗೆ ಬರಲಿರುವ ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಪ್ರಸ್ತುತ ಚಿತ್ರಕ್ಕೆ ಸೂಕ್ತ ಪಾತ್ರವರ್ಗದ ಆಯ್ಕೆಯಲ್ಲಿ ನಿರ್ದೇಶಕರಿದ್ದಾರೆ.  ಆದರೆ ಪತ್ರಿಕೆಗೆ ಸಿಕ್ಕಿರುವ ಮೂಲಗಳ ಪ್ರಕಾರ "ಆ ಕರಾಳ ರಾತ್ರಿ" ಖ್ಯಾತಿಯ ಅನುಪಮಾ ಗೌಡ ಚಿತ್ರದ ಪ್ರಧಾನ ನಾಯಕಿಯಾಗಲ್ಲಿದ್ದಾರೆ. "ಲಂಕೇಶ್ ಪತ್ರಿಕೆ" ಚಿತ್ರದಲ್ಲಿ ಬಾಲನಟಿಯಾಗಿ ಅಭಿನಯಿಸಿದ್ದ ಅನುಪಮಾ ಕಿರುತೆರೆ ಧಾರಾವಾಹಿಗಳ ಮೂಲಕ ಮನೆಮಾತಾಗಿದ್ದರು.

ದಯಾಳ್ ಪದ್ಮನಾಭನ್ ನಿರ್ದೇಶನದ "ಆ ಕರಾಳ ರಾತ್ರಿ" ಚಿತ್ರ ಅವರಿಗೆ ದೊಡ್ಡ ಪ್ರಸಿದ್ದಿ ತಂದು ಕೊಟ್ಟಿದೆ. ಸಧ್ಯ ನಟಿ "ಬೆಂಕಿಯಲ್ಲಿ ಅರಳಿದ ಹೂವು" ಚಿತ್ರದ ಬಿಡುಗಡೆಯ ನಿರೀಕ್ಷೆಯಲ್ಲಿದ್ದಾರೆ.

ಸಧ್ಯ ಸುಜಯ್ ಛಾಯಾಗ್ರಾಹಕ ವಿಶ್ವಜಿತ್ ರಾವ್, ಎಡಿಟರ್ ಆಶಿಕ್ ಕುಸುಗೊಳ್ಳಿ ಅವರನ್ನು ತಮ್ಮ ಟೀಂಗೆ ಸೇರಿಸಿಕೊಂಡಿದ್ದಾರೆ. ಚಿತ್ರದಲ್ಲಿ ಇಬ್ಬರುಕಂಪೋಸರ್ ಗಳಿರಲಿದ್ದು ರಾಹುಲ್ ಶಿವಕುಮಾರ್ ಮತ್ತು ರೊನಾಡಾ ಬಕ್ಕೇಶ್ ಹಿನ್ನೆಲೆ ಸಂಗೀತ ನಿರ್ವಹಿಸಲಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT