ಸುರೇಂದ್ರ ಬಂಟ್ವಾಳ್ 
ಸಿನಿಮಾ ಸುದ್ದಿ

ಹಾಡುಹಗಲೇ ತುಳು ಚಿತ್ರ ನಟ ತುಳು ಚಿತ್ರ ನಟ, ರೌಡಿಶೀಟರ್ ಸುರೇಂದ್ರ ಬಂಟ್ವಾಳ್ ಕೊಚ್ಚಿ ಬರ್ಬರ ಹತ್ಯೆ!

ಸುವರ್ಣದೀರ್ಘ ಸಂಧಿ ಸೇರಿದಂತೆ ಕೆಲ ತುಳು ಚಿತ್ರಗಳಲ್ಲಿ ಅಭಿನಯಿಸಿರುವ ತುಳು ಚಿತ್ರ ನಟ, ರೌಡಿಶೀಟರ್ ಸುರೇಂದ್ರ ಬಂಟ್ವಾಳ್ ಅವರನ್ನು ಹಾಡುಹಗಲೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ. 

ಮಂಗಳೂರು: ಸುವರ್ಣದೀರ್ಘ ಸಂಧಿ ಸೇರಿದಂತೆ ಕೆಲ ತುಳು ಚಿತ್ರಗಳಲ್ಲಿ ಅಭಿನಯಿಸಿರುವ ತುಳು ಚಿತ್ರ ನಟ, ರೌಡಿಶೀಟರ್ ಸುರೇಂದ್ರ ಬಂಟ್ವಾಳ್ ಅವರನ್ನು ಹಾಡುಹಗಲೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ. 

ಬಿ.ಸಿ.ರೋಡ್ ನ ಫ್ಲ್ಯಾಟ್ ಒಂದರಲ್ಲಿ ಸುರೇಂದ್ರ ಬಂಟ್ವಾಳ್‌ ಎಂಬವರ ಹತ್ಯೆ ಮಾಡಲಾಗಿದೆ. ಕಳೆದ ರಾತ್ರಿ ಘಟನೆ ನಡೆದಿದ್ದು, ಇಂದು ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

2018ರಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಬಂಟ್ವಾಳ ಪೇಟೆಯಲ್ಲಿ ನಡೆದ ತಲವಾರು ದಾಳಿ ಪ್ರಕರಣದಲ್ಲಿ ಸುರೇಂದ್ರ ಬಂಟ್ವಾಳ್ ಹೆಸರು ಕೇಳಿಬಂದಿತ್ತು. ಬಳಿಕ ಅವರನ್ನು ಕಾಸರಗೋಡಿನ ಕುಂಬ್ಳೆ ಬಳಿ ಪೊಲೀಸರು ಬಂಧಿಸಿ ಕರೆತಂದಿದ್ದರು.

ಈ ಹಿಂದೆ ಬಲಪಂಥೀಯ ಸಂಘಟನೆಯೊಂದಿಗೆ ಗುರುತಿಸಿಕೊಂಡಿದ್ದ ಸುರೇಂದ್ರ ರೌಡಿಶೀಟರ್‌ ಆಗಿದ್ದು ಬಳಿಕ ಕಾಂಗ್ರೆಸ್ ಸೇರಿದ್ದರು. ಅವರು ಚಾಲಿಪೋಲಿಲು ತುಳು ಸಿನಿಮಾದಲ್ಲಿ ನಟಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT