ಧನ್ವೀರ್ 
ಸಿನಿಮಾ ಸುದ್ದಿ

ಸಫಾರಿ ವಿವಾದ: ಕೇಸ್ ಬಳಿಕ ಫೋಟೋ, ವಿಡಿಯೋಗಳನ್ನು ಅರಣ್ಯಾಧಿಕಾರಿಗಳಿಗೆ ನೀಡಿದ ನಟ ಧನ್ವೀರ್

ಬಂಡಿಪುರದಲ್ಲಿ ರಾತ್ರಿ ಸಫಾರಿ ಮಾಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ಮೇಲೆ ಕೇಸ್ ದಾಖಲಾಗುತ್ತಿದ್ದಂತೆಯೇ ನಟ ಧನ್ವೀರ್ ಅವರು, ತಾವು ಯಾವುದೇ ತಪ್ಪು ಮಾಡಿಲ್ಲ, ಸಂಜೆ ಹೊತ್ತಿಗೆ ಕಾಡಿನಿಂದ ಹೊರಗಿದ್ದೆ ಎಂದು ಹೇಳಿದ್ದು, ಇದಕ್ಕೆ ಸಾಕ್ಷ್ಯಾಧಾರಗಳಾಗಿ ತಮ್ಮ ಬಳಿಯಿದ್ದ ಫೋಟೋ ಹಾಗೂ ವಿಡಿಯೋಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ನೀಡಿದ್ದಾರೆ.

ಬೆಂಗಳೂರು: ಬಂಡಿಪುರದಲ್ಲಿ ರಾತ್ರಿ ಸಫಾರಿ ಮಾಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ಮೇಲೆ ಕೇಸ್ ದಾಖಲಾಗುತ್ತಿದ್ದಂತೆಯೇ ನಟ ಧನ್ವೀರ್ ಅವರು, ತಾವು ಯಾವುದೇ ತಪ್ಪು ಮಾಡಿಲ್ಲ, ಸಂಜೆ ಹೊತ್ತಿಗೆ ಕಾಡಿನಿಂದ ಹೊರಗಿದ್ದೆ ಎಂದು ಹೇಳಿದ್ದು, ಇದಕ್ಕೆ ಸಾಕ್ಷ್ಯಾಧಾರಗಳಾಗಿ ತಮ್ಮ ಬಳಿಯಿದ್ದ ಫೋಟೋ ಹಾಗೂ ವಿಡಿಯೋಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ನೀಡಿದ್ದಾರೆಂದು ತಿಳಿದುಬಂದಿದೆ. 

ತಮ್ಮ ಮೇಲೆ ಕೇಸ್ ದಾಖಲಾಗಿರುವ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾದ ಧನ್ವೀರ್ ಅವರು, ಅರಣ್ಯ ಇಲಾಖೆಯ ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. 

ನಾನು ಸಂಜೆ ಹೊತ್ತಿಗೆ ಕಾಡಿನಿಂದ ಹೊರಗಿದ್ದೆ. ಅರಣ್ಯ ಇಲಾಖೆಯ ವಾಹನದಲ್ಲಿಯೇ ಸಫಾರಿಗೆ ಟಿಕೆಟ್ ಪಡೆದು ತೆರಳಿದ್ದೆ. ನೈಟ್ ಸಫಾರಿ ಮಾಡಿಲ್ಲ. ತಪ್ಪಾಗಿ ನೈಟ್ ಸಫಾರಿ ಎಂದು ಪೋಸ್ಟ್ ಮಾಡಿದ್ದೆ ಎಂದು ತಿಳಿಸಿದ್ದಾರೆಂದು ತಿಳಿದುಬಂದಿದೆ. ಅಲ್ಲದೆ, ಸಫಾರಿ ವೇಳೆ ಧನ್ವೀರ್ ತೆಗೆದಿರುವ ಫೋಟೋ ಹಾಗೂ ವಿಡಿಯೋಗಳನ್ನು ಅಧಿಕಾರಿಗಳಿಗೆ ನೀಡಿದ್ದಾರೆಂದು ತಿಳಿದುಬಂದಿದೆ. 

ಧನ್ವೀರ್ ನೀಡಿರುವ ಫೋಟೋಗಳ ಕುರಿತು ಪ್ರತಿಕ್ರಿಯೆ ನೀಡಿರುವ ಅರಣ್ಯ ಇಲಾಖೆಯ ಅಧಿಕಾರಿಗಳು, ಧನ್ವೀರ್ ಅವರು ನೀಡಿರುವ ಫೋಟೋ ಹಾಗೂ ವಿಡಿಯೋಗಳನ್ನು ಸಾಕ್ಷ್ಯಾಧಾರಗಳೆಂದು ಪರಿಗಣಿಸಲು ಸಾಧ್ಯವಿಲ್ಲ. ಧನ್ವೀರ್ ಅವರು ಸಫಾರಿಗೆ ತೆರಳಿದ ಸಮಯವನ್ನು ಪರಿಶೀಲಿಸಲಾಗುತ್ತದೆ. ಧನ್ವೀರ್ ಜೊತೆಗೆ ಸಫಾರಿಗೆ ತೆರಳಿದ್ದವರನ್ನು ವಿಚಾರಣೆಗೊಳಪಡಿಸಲಾಗುತ್ತದೆ. ತನಿಖೆ ಪೂರ್ಣಗೊಂಡ ಬಳಿಕ  ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುತ್ತದೆಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಾಂಗ್ಲಾದೇಶ ಐತಿಹಾಸಿಕ ಸಂಸತ್ ಚುನಾವಣೆ: ಮತದಾನ ಪ್ರಗತಿಯಲ್ಲಿ, 50 ಲಕ್ಷ ಯುವ ಮತದಾರರು-Video

ರಾಜಕೀಯ ದಂಗೆ, ಶೇಖ್ ಹಸೀನಾ ನಿರ್ಗಮನ ಬಳಿಕ ಇಂದು ಬಾಂಗ್ಲಾದೇಶ ಚುನಾವಣೆ: 51 ಪಕ್ಷಗಳು ಕಣದಲ್ಲಿ, ಭವಿಷ್ಯ ನಿರ್ಧರಿಸುತ್ತಾರೆಯೇ Gen-Z ?

ನಾಳೆಯಿಂದ ಹಂಪಿ ಉತ್ಸವದಲ್ಲಿ ಮೊದಲ ಬಾರಿ ಡ್ರೋನ್ ಪ್ರದರ್ಶನ

ವಿಧಾನಸೌಧಕ್ಕೆ ಚಿನ್ನ-ಹಣ ಬಂದಿದ್ದು ಹೇಗೆ..? ತನಿಖೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ನೌಕಾಪಡೆಯ ನಿವೃತ್ತ ಕ್ಯಾಪ್ಟನ್ ತಂದೆ, ದಂತವೈದ್ಯೆ ತಾಯಿಯನ್ನು ಕೊಂದ ಟೆಕ್ಕಿ!

SCROLL FOR NEXT