ಜಗ್ಗೇಶ್ 
ಸಿನಿಮಾ ಸುದ್ದಿ

ಕನ್ನಡ ಸ್ವಲ್ಪ ಗೊತ್ತಿದೆ ಎಂದು ಉತ್ತರದಿಂದ ಬಂದವರಿಂದ ಚಿತ್ರರಂಗದ ಮಾನ ಹರಾಜು : ಜಗ್ಗೇಶ್

ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ನಂಟು ದಿನದಿನಕ್ಕೆ ಹೊಸ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು ಈ ಬಗ್ಗೆ ನವರಸನಾಯಕ ಜಗ್ಗೇಶ್ ಟ್ವೀಟ್ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. "ಕನ್ನಡ ಸ್ವಲ್ಪ ಗೊತ್ತಿದೆ ಎಂದು ಉತ್ತರದಿಂದ ಬಂದವರಿಂದ ಚಿತ್ರರಂಗದ ಮಾನ ಹರಾಜಾಗುತ್ತಿದೆ" ಎಂದು ಜಗ್ಗೇಶ್ ಹೇಳಿದ್ದಾರೆ.

ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ನಂಟು ದಿನದಿನಕ್ಕೆ ಹೊಸ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು ಈ ಬಗ್ಗೆ ನವರಸನಾಯಕ ಜಗ್ಗೇಶ್ ಟ್ವೀಟ್ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. "ಕನ್ನಡ ಸ್ವಲ್ಪ ಗೊತ್ತಿದೆ ಎಂದು ಉತ್ತರದಿಂದ ಬಂದವರಿಂದ ಚಿತ್ರರಂಗದ ಮಾನ ಹರಾಜಾಗುತ್ತಿದೆ" ಎಂದು ಜಗ್ಗೇಶ್ ಹೇಳಿದ್ದಾರೆ.

ಜಗ್ಗೇಶ್ ಸಾಮಾಜಿಕ ತಾಣ ಟ್ವಿಟ್ಟರ್ ಮೂಲಕ ಈಗಿನ ಸ್ಯಾಂಡಲ್ ವುಡ್ ಬಗೆಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದು "ಕನ್ನಡಚಿತ್ರರಂಗದ ನಲ್ಮೆಯ ಕನ್ನಡದ ಹೆಣ್ಣುಮಕ್ಕಳು ನಮ್ಮತನ ಉಳಿಸಿಕೊಂಡು ನಮ್ಮ ಕಾಲದಿಂದ ಬದುಕಿದ್ದಾರೆ ಪಾಪ! ಕನ್ನಡ್ ಸ್ವಲ್ಪಗೊತ್ತಿದೆ ಎನ್ನುವ ಉತ್ತರದಿಂದ ಬಂದು ನಮ್ಮವರ
ಮೋಡಿ ಮಾಡಿದವರೆ ನಮ್ಮಚಿತ್ರರಂಗದ ಮಾನ ಹರಾಜು ಹಾಕುತ್ತಿರುವುದು!ಇನ್ನುಮೇಲಾದರು ನಮ್ಮವರು ನಮ್ಮವರಿಗೆ ಜೈಅನ್ನುವ!ಕನ್ನಡದವರು ಕನ್ನಡಿಗರಿಗೆ ಕೈಎತ್ತಿಸಾಕು" ಎಂದಿದ್ದಾರೆ.

ಅಲ್ಲದೆ "1980ನವಂಬರ್17ಕ್ಕೆ ಸಿನಿಮಾರಂಗಕ್ಕೆ ಬಂದವ ನಾನು! ಭಯದಿಂದ ಬೆಳೆದು ದಡ ಮುಟ್ಟಿರುವೆ! ಹೈಸ್ಪೀಡು!ಕೈಬಿಟ್ಟು ಗಾಡಿ ಓಡ್ಸದವರು!ಅರ್ಧರಾತ್ರೀಲಿ ಛತ್ರಿ ಹಿಡಿದವರು!ಒಂದೆರಾತ್ರಿ ಬೆಟ್ಟ ಹತ್ತಿ ಹಳ್ಳಕ್ಕೆ ಬಿದ್ದವರು! ಏಷ್ಟೆಬೆಳೆದರು ತಲೆಬಾಗಿ ಬಾಳಿದವರ ನೋಡಿ ಬದುಕು ಕಲಿತವ ನಾನು! ದೇವರು ಕೈಹಿಡಿದರೆ ಮಹಾರಾಜ! ಕೈಬಿಟ್ರೆ ಬಿಕ್ಷುಕ!ನಶ್ವರಜಗ ಎಚ್ಚರ!" ಎಂದು ಎಚ್ಚರಿಸಿದ್ದಾರೆ. 

ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ನಟು ರಾಗಿಣಿ ದ್ವಿವೇದಿ ನಂ. 2 ಆರೋಪಿಯಾಗಿ ಸಿಸಿಬಿಯಿಂದ ಗುರುತಿಸಿಕೊಂಡಿದ್ದಾರೆ. ಶ್ರೇಷ್ಠ ಇತಿಹಾಸವಿರುವ ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್ ಪ್ರಕರಣದಲ್ಲಿ ನಟಿಯೊಬ್ಬರ ಬಂಧನವಾಗಿರುವುದು ಇದೇ ಮೊದಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT