ವಿಶಾಲ್ 
ಸಿನಿಮಾ ಸುದ್ದಿ

ನಿಮ್ಮ ದಿಟ್ಟತನಕ್ಕೊಂದು ಹ್ಯಾಟ್ಸ್​ ಆಫ್​: ಕಂಗನಾರನ್ನು ಭಗತ್ ಸಿಂಗ್ ಗೆ ಹೋಲಿಸಿದ ನಟ ವಿಶಾಲ್

ತಮಿಳು ನಟ ವಿಶಾಲ್, ಮಹಾರಾಷ್ಟ್ರ ಸರ್ಕಾರದ ವಿರುದ್ಧ ಸಮರ ಸಾರಿರುವ ಬಾಲಿವುಡ್​ ನಟಿ ಕಂಗನಾ ರಣಾವತ್​ರನ್ನು ​ಸ್ವಾತಂತ್ರ್ಯ ಹೋರಾಟಗಾರ ಭಗತ್​ ಸಿಂಗ್​ ಹೋಲಿಸಿ ಟ್ವೀಟ್​ ಮಾಡಿದ್ದಾರೆ.

ಚೆನ್ನೈ: ತಮಿಳು ನಟ ವಿಶಾಲ್, ಮಹಾರಾಷ್ಟ್ರ ಸರ್ಕಾರದ ವಿರುದ್ಧ ಸಮರ ಸಾರಿರುವ ಬಾಲಿವುಡ್​ ನಟಿ ಕಂಗನಾ ರಣಾವತ್​ರನ್ನು ​ಸ್ವಾತಂತ್ರ್ಯ ಹೋರಾಟಗಾರ ಭಗತ್​ ಸಿಂಗ್​ ಹೋಲಿಸಿ ಟ್ವೀಟ್​ ಮಾಡಿದ್ದಾರೆ.

ನಿಮ್ಮ ದಿಟ್ಟತನಕ್ಕೊಂದು ಹ್ಯಾಟ್ಸ್​ ಆಫ್​, ಯಾವುದು ತಪ್ಪು ಮತ್ತು ಯಾವುದು ಸರಿ ಎನ್ನುವ ವಿಚಾರದಲ್ಲಿ ಧ್ವನಿಯೆತ್ತಲು ನೀವು ಯಾವತ್ತೂ ಎರಡು ಬಾರಿ ಯೋಚಿಸಿಯೇ ಇಲ್ಲ. ಇದು ನಿಮ್ಮ ವೈಯಕ್ತಿಕ ಸಮಸ್ಯೆಯಲ್ಲ, ಸರ್ಕಾರವೇ ನಿಮ್ಮ ವಿರುದ್ಧವಾಗಿದ್ದರೂ ನೀವು ಕುಗ್ಗದೇ ಗಟ್ಟಿಯಾಗಿ ಉಳಿಯುವ ಮೂಲಕ ಒಂದು ದೊಡ್ಡ ಉದಾಹರಣೆಯಾಗಿ ನಿಂತಿದ್ದೀರಿ. ಇದು 1920ರ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಭಗತ್​ ಸಿಂಗ್​​ ಹೋಲುವಂತಿದೆ.

ಯಾವುದು ಸರಿಯಿಲ್ಲ ಎಂದು ಕಂಡುಬಂದಾಗ ಸರ್ಕಾರದ ವಿರುದ್ಧ ಧ್ವನಿ ಏರಿಸಲು ನೀವು ಉದಾಹರಣೆಯೊಂದನ್ನು ಸ್ಥಾಪಿಸಿದ್ದೀರಿ ಮತ್ತು ಸರ್ಕಾರದ ವಿರುದ್ಧ ಧ್ವನಿಯೇರಿಸಲು ಸೆಲೆಬ್ರಿಟಿಯೇ ಆಗಿರಬೇಕಂತಲ್ಲ. ಅದು ಸಾಮಾನ್ಯ ವ್ಯಕ್ತಿಯು ಆಗಿರಬೇಕು. ಈ ವಿಚಾರದಲ್ಲಿ ನಾನು ನಿಮಗೆ ನಮಸ್ಕರಿಸುತ್ತೇನೆಂದು ವಿಶಾಲ್​, ಕಂಗನಾಗೆ ಪೋಸ್ಟ್​ ಮೂಲಕ ಬೆಂಬಲ ವ್ಯಕ್ತಪಡಿಸಿದ್ದಾರೆ. ನಟ ವಿಶಾಲ್ ತಮಿಳುನಾಡಿನಲ್ಲಿ ನಡೆಯುವ ಪ್ರಸಿದ್ಧ ಜಲ್ಲಿಕಟ್ಟು ಕ್ರೀಡೆಗೆ ತೀವ್ರ ವಿರೋಧ ವ್ಯಕ್ತ ಪಡಿಸಿದ್ದರು. 

ರಾಷ್ಟ್ರಪ್ರಶಸ್ತಿ ವಿಜೇತ ನಟಿ ಕಂಗನಾ ರಣಾವತ್ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರ ಜೀವನ ಕಥೆ ಆಧಾರಿತ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT