ಮದಗಜ ಟೀಂ 
ಸಿನಿಮಾ ಸುದ್ದಿ

ಮೈಸೂರಿನಲ್ಲಿ 25 ದಿನದ ಶೂಟಿಂಗ್ ಗೆ ತಯಾರಾದ 'ಮದಗಜ', ಸೆ.19ರಿಂದ ಚಿತ್ರೀಕರಣ ಶುರು

ಶ್ರೀಮುರಳಿ ತಮ್ಮ ಮುಂಬರುವ ಚಿತ್ರ "ಮದಗಜ" ಶೂಟಿಂಗ್  ಪುನರಾರಂಭಿಸಲು  ತಯಾರಾಗಿದ್ದಾರೆ. ಅವರ ಈ ಚಿತ್ರದ ಶೂಟೀಂಗ್ ಇದೇ ಸೆಪ್ಟೆಂಬರ್ 19 ರಂದು ಪುನಾರಂಬವಾಗಲಿದೆ. ನಾಯಕ ಶ್ರೀಮುರಳಿ , ನಿರ್ಮಾಪಕ ಉಮಾಪತಿ  ಮತ್ತು ನಿರ್ದೇಶಕ ಮಹೇಶ್ ಕುಮಾರ್ ಸೇರಿದಂತೆ ತಂಡವು ಒಂದೆರಡು ದಿನಗಳ ಹಿಂದೆ ಭೇಟಿಯಾಗಿ ಶೂಟಿಂಗ್ ಬಗ್ಗೆ ಚರ್ಚಿಸಿದೆ. ಹಾಗೂ ಮೈಸೂರಿನ ಸರ್ಕಾರಿ ಅತಿಥಿಗೃಹದಲ್ಲಿಶ

ಶ್ರೀಮುರಳಿ ತಮ್ಮ ಮುಂಬರುವ ಚಿತ್ರ "ಮದಗಜ" ಶೂಟಿಂಗ್  ಪುನರಾರಂಭಿಸಲು  ತಯಾರಾಗಿದ್ದಾರೆ. ಅವರ ಈ ಚಿತ್ರದ ಶೂಟೀಂಗ್ ಇದೇ ಸೆಪ್ಟೆಂಬರ್ 19 ರಂದು ಪುನಾರಂಬವಾಗಲಿದೆ. ನಾಯಕ ಶ್ರೀಮುರಳಿ , ನಿರ್ಮಾಪಕ ಉಮಾಪತಿ  ಮತ್ತು ನಿರ್ದೇಶಕ ಮಹೇಶ್ ಕುಮಾರ್ ಸೇರಿದಂತೆ ತಂಡವು ಒಂದೆರಡು ದಿನಗಳ ಹಿಂದೆ ಭೇಟಿಯಾಗಿ ಶೂಟಿಂಗ್ ಬಗ್ಗೆ ಚರ್ಚಿಸಿದೆ. ಹಾಗೂ ಮೈಸೂರಿನ ಸರ್ಕಾರಿ ಅತಿಥಿಗೃಹದಲ್ಲಿಶೂಟಿಂಗ್ ಗೆ ಜಾಗವನ್ನು ಅಂತಿಮಗೊಳಿಸಿದ್ದಾರೆ. ಅಲ್ಲಿ ತಂಡವು ಸುಮಾರು  25 ದಿನಗಳ ಶೆಡ್ಯೂಲ್ ಹೊಂದಿರಲಿದೆ.

ಲಾಕ್‌ಡೌನ್‌ಗೆ ಸ್ವಲ್ಪ ಮುಂಚೆ ವಾರಣಾಸಿಯಲ್ಲಿ ಪ್ರಮುಖ ಶೆಡ್ಯೂಲ್ ಪೂರ್ಣಗೊಳಿಸಿದ್ದ ತಂಡವು ಶೇಕಡಾ 25 ರಷ್ಟು ಚಿತ್ರೀಕರಣವನ್ನಷ್ಟೇ ಬಾಕಿ ಉಳಿಸಿಕೊಂಡಿದೆ. ಇದೀಗ  ಈಗ 18 ದಿನಗಳ ಕಾಲ ಟಾಕಿ ಭಾಗಗಳ ಚಿತ್ರೀಕರಣದೊಡನೆ ಇದು ಪ್ರಾರಂಬವಾಗುತ್ತಿದ್ದು  ಸ್ಟಂಟ್ ಮಾಸ್ಟರ್ಸ್ ರಾಮ್-ಲಕ್ಷ್ಮಣ್  ಅವರ ನಿರ್ದೇಶನದಲ್ಲಿ ಫೈಟಿಂಗ್ ನ ಪ್ರಮುಖ ಬಾಗಗಳ ಚಿತ್ರೀಕರಣ ನಡೆಯಲಿದೆ. ಇದನ್ನು ಏಳು ದಿನಗಳವರೆಗೆ ಚಿತ್ರೀಕರಣ ಮಾಡಲು ಯೋಜಿಸಲಾಗಿದೆ.

ನಾಯಕ ಶ್ರೀಮುರಳಿ ತಂಡದೊಡನೆ ಶೂಟಿಂಗ್ ನಲ್ಲಿ ಭಾಗವಹಿಸಲಿದ್ದು ನಾಯಕಿಯಾಗಿ ಆಶಿಕಾ ರಂಗನಾಥ್, ಇದ್ದಾರೆ. ರಂಗಾಯಣ ರಘು, ಚಿಕ್ಕಣ್ಣ, ಶಿವರಾಜ್ ಕೆ ಆರ್ ಪೇಟೆ ಹಾಗೂ ಇತರರು ಚಿತ್ರದಲ್ಲಿ ಅಭಿನಯಿಸಿದ್ದಾರೆ. ನಿರ್ದೇಶಕ ಮಹೇಶ್ ಕುಮಾರ್ ಪಾಲಿಗೆ ಇದು ಎರಡನೇ ಚಿತ್ರವಾಗಿದೆ. 

ರವಿ ಬಸ್ರೂರ್ ಸಂಯೋಜಿಸಿರುವ ಚಿತ್ರದ ಸಂಗೀತವು ನಾಲ್ಕು ಹಾಡುಗಳನ್ನು ಒಳಗೊಂಡಿದೆ. ಎರಡು ಹಾಡುಗಳಿಗೆ ಸಾಹಿತ್ಯವನ್ನು ಚೇತನ್ ಕುಮಾರ್ ಬರೆದಿದ್ದರೆ, ರವಿ ಬಸ್ರೂರ್ ಮತ್ತು ಕಿನ್ನಲ್ ರಾಜ್ ತಲಾ ಒಂದು ಹಾಡನ್ನು ಬರೆಯಲಿದ್ದಾರೆ. ಮುಫ್ತಿ ಛಾಯಾಗ್ರಾಹಕರಾದ  ನವೀನ್ ಕುಮಾರ್  ಈ ಚಿತ್ರಕ್ಕೂ ಕ್ಯಾಮರಾ ಕೆಲಸ ಮಾಡಲಿದ್ದಾರೆ. ಹರೀಶ್ ಕೊಂಬೆ ಸಂಭಾಷಣೆ ಬರೆದಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!