ದರ್ಶನ್ 
ಸಿನಿಮಾ ಸುದ್ದಿ

ಸ್ವಾಭಿಮಾನಿ ಕನ್ನಡಿಗರಿಗೆ ಕನ್ನಡವೇ ರಾಷ್ಟ್ರ ಭಾಷೆ, ಕೊನೆಯುಸಿರಿರುವವರೆಗೂ ಕನ್ನಡ ಪರ ನಿಲ್ಲುತೇವೆ: ದರ್ಶನ್

ಕನ್ನಡದ ಹಲವಾರು ಕಲಾವಿದರು ಈಗಾಗಲೇ ಹಿಂದಿ ದಿವಸ್ ಆಚರಣೆಗೆ, ಹಿಂದಿ ಹೇರಿಕೆ ವಿರುದ್ಧ ಮಾತನಾಡಿದ್ದರು. ಈಗ 'ಚಾಲೆಂಜಿಂಗ್ ಸ್ಟಾರ್‌' ದರ್ಶನ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಬೆಂಗಳೂರು: ಕನ್ನಡದ ಹಲವಾರು ಕಲಾವಿದರು ಈಗಾಗಲೇ ಹಿಂದಿ ದಿವಸ್ ಆಚರಣೆಗೆ, ಹಿಂದಿ ಹೇರಿಕೆ ವಿರುದ್ಧ ಮಾತನಾಡಿದ್ದರು. ಈಗ 'ಚಾಲೆಂಜಿಂಗ್ ಸ್ಟಾರ್‌' ದರ್ಶನ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಈ ಸಂಬಂಧ ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ದರ್ಶನ್, 'ಬಹಳ ವರ್ಷಗಳಿಂದಲೂ ಈ ಹಿಂದಿ ಹೇರಿಕೆ ಕಾಲ ಕ್ರಮೇಣ ಹೆಚ್ಚಾಗುತ್ತಲೇ ಇದೆ. ಈಗಾಗಲೇ ಕರ್ನಾಟಕದ ಬಾರ್ಡರ್ ಪ್ರದೇಶಗಳಲ್ಲಿ ಅನ್ಯ ಭಾಷೆಗಳ ಬಳಕೆಯಿಂದ ನಮ್ಮ ಕನ್ನಡ ಭಾಷೆಯ ಅಸ್ತಿತ್ವಕ್ಕೆ ಧಕ್ಕೆಯುಂಟಾಗುತ್ತಿದೆ.

ಇದನ್ನು ಪ್ರತಿಭಟಿಸದೆ ನಾವು ಸುಮ್ಮನಿದ್ದರೆ ಮುಂದೆ ಕನ್ನಡಿಗ ಎನ್ನುವ ಅಸ್ತಿತ್ವವೇ ದೂರವಾಗುವ ದಿನಗಳು ಹತ್ತಿರದಲ್ಲೇ ಇದೆ. ಸ್ವಾಭಿಮಾನಿ ಕನ್ನಡಿಗರಿಗೆ ಕನ್ನಡವೇ ರಾಷ್ಟ್ರ ಭಾಷೆ. ಕನ್ನಡಿಗರ ತೆರಿಗೆ ಹಣದಲ್ಲಿ 'ಹಿಂದಿ ದಿವಸ್' ಆಚರಣೆ ಯೋಗ್ಯವಲ್ಲ. ಅದು ಕೇವಲ ಉತ್ತರ ಭಾರತದ ಕೆಲವು ರಾಜ್ಯಗಳಿಗೆ ಸೀಮಿತವಾಗಿದ್ದರೆ ಒಳಿತು' ಎಂದು 'ಡಿ ಬಾಸ್' ದರ್ಶನ್ ಖಡಕ್ ಆಗಿಯೇ ಹೇಳಿಕೆ ನೀಡಿದ್ದಾರೆ.

ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವುದು ನಮ್ಮ ಭಾರತ ಸಂವಿಧಾನದ ಪ್ರತೀಕವಾಗಿದೆ. ಯಾವುದೋ ಉತ್ತರದ ಒಂದು ಪ್ರಾದೇಶಿಕ ಭಾಷೆಯನ್ನು ನಮ್ಮ ಮೇಲೆ ಹೇರಿ ನಮ್ಮ ಸಂಸ್ಕೃತಿ, ಭಾಷೆ, ನೆಲೆಯನ್ನು ಕಸಿದುಕೊಳ್ಳುವುದು ಹೀನಾಯಕರ ಸಂಗತಿಯೆಂದರೆ ತಪ್ಪಾಗಲಾರದು. ನಮ್ಮ ಕೊನೆಯುಸಿರಿರುವವರೆಗೂ ಕನ್ನಡ ಪರವಾಗಿ ನಿಲ್ಲುತೇವೆ. ಕನ್ನಡವೇ ಸತ್ಯ, ಕನ್ನಡವೇ ನಿತ್ಯ' ಎಂದು ಹೇಳಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT