ವಿಶಾಲ್ 
ಸಿನಿಮಾ ಸುದ್ದಿ

ನಟ ವಿಶಾಲ್ ಗೆ ಮದ್ರಾಸ್ ಹೈಕೋರ್ಟ್ ನೋಟಿಸ್!

ನಟ ವಿಶಾಲ್ ರ ಮುಂಬರುವ ಚಿತ್ರ ಚಕ್ರವನ್ನು ಒಟಿಟಿಯಲ್ಲಿ ಬಿಡುಗಡೆ ಮಾಡದಂತೆ ತಡೆಯುವಂತೆ ಚಲನಚಿತ್ರ ನಿರ್ಮಾಣ ಸಂಸ್ಥೆ ಟ್ರೈಡೆಂಟ್ ಆರ್ಟ್ಸ್ ಸಲ್ಲಿಸಿದ್ದ ಅರ್ಜಿ ಸಂಬಂಧ ನಟ ವಿಶಾಲ್ ಮತ್ತು ನಿರ್ದೇಶಕ ಎಂ ಆನಂದನ್ ಅವರಿಗೆ ಮದ್ರಾಸ್ ಹೈಕೋರ್ಟ್ ನೋಟಿಸ್ ನೀಡಿದೆ. 

ಚೆನ್ನೈ: ನಟ ವಿಶಾಲ್ ರ ಮುಂಬರುವ ಚಿತ್ರ ಚಕ್ರವನ್ನು ಒಟಿಟಿಯಲ್ಲಿ ಬಿಡುಗಡೆ ಮಾಡದಂತೆ ತಡೆಯುವಂತೆ ಚಲನಚಿತ್ರ ನಿರ್ಮಾಣ ಸಂಸ್ಥೆ ಟ್ರೈಡೆಂಟ್ ಆರ್ಟ್ಸ್ ಸಲ್ಲಿಸಿದ್ದ ಅರ್ಜಿ ಸಂಬಂಧ ನಟ ವಿಶಾಲ್ ಮತ್ತು ನಿರ್ದೇಶಕ ಎಂ ಆನಂದನ್ ಅವರಿಗೆ ಮದ್ರಾಸ್ ಹೈಕೋರ್ಟ್ ನೋಟಿಸ್ ನೀಡಿದೆ. 

ವಿಶಾಲ್ ರ ಹಿಂದಿನ 'ಆಕ್ಷನ್' ಚಿತ್ರದಿಂದ 8 ಕೋಟಿ ರುಪಾಯಿ ನಷ್ಟವಾಗಿದೆ ಎಂದು ಟ್ರೈಡೆಂಟ್ ಆರ್ಟ್ಸ್ ಅರ್ಜಿ ಸಲ್ಲಿಸಿದ್ದು ಹಿನ್ನೆಲೆಯಲ್ಲಿ ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ಎನ್ ಸತೀಶ್ ಕುಮಾರ್ ನಟ-ನಿರ್ದೇಶಕರಿಗೆ ನೋಟಿಸ್ ನೀಡಿದ್ದು ಗುರುವಾರದೊಳಗೆ ಲಿಖಿತ ಹೇಳಿಕೆ ನೀಡುವಂತೆ ಸೂಚಿಸಿದೆ.

ಅರ್ಜಿದಾರರ ಪರ ವಕೀಲ ವಿಜಯನ್ ಸುಬ್ರಮಣಿಯನ್ ಅವರು ಆಗಸ್ಟ್ 29, 2018ರಂದು ಆನಂದನ್ ಅವರೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು. ಆ ಪ್ರಕಾರ "ವಿಶಾಲ್ ಸೇನಾಧಿಕಾರಿಯಾಗಿ ನಟಿಸಬೇಕು ಎಂದು ನಿರ್ಧರಿಸಲಾಯಿತು. ಅದೇ ದಿನ 1 ಲಕ್ಷ ರೂ. ಟೋಕನ್ ಮುಂಗಡ ಚೆಕ್ ಅನ್ನು ನಿರ್ದೇಶಕರಿಗೆ ನೀಡಲಾಗಿತ್ತು ಎಂದು ನಿರ್ಮಾಪಕರು ಹೇಳಿದ್ದಾರೆ.

ಆದಾಗ್ಯೂ, ಕೊರೋನಾ ಪ್ರೇರಿತ ಲಾಕ್‌ಡೌನ್ ನಿಂದಾಗಿ ಯೋಜನೆಗಳನ್ನು ಸ್ಥಗಿತಗೊಳಿಸಲಾಯಿತು. "ಆದರೆ ಆನಂದನ್ ನಿರ್ದೇಶನದಲ್ಲಿ ವಿಶಾಲ್ 'ಚಕ್ರ' ಹೆಸರಿನ ಚಿತ್ರದ ನಿರ್ಮಾಣವನ್ನು ಪ್ರಾರಂಭಿಸಿದರು. ಆ ಬಳಿಕ ಆನಂದನ್ ನನ್ನೊಂದಿಗೆ ಮಾತನಾಡುವುದನ್ನು ಅಥವಾ ಭೇಟಿಯಾಗುವುದನ್ನು ತಪ್ಪಿಸಿದರು ಎಂದು ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.

44 ಕೋಟಿ ರೂ.ಗಳ ಪರಿಗಣನೆಗೆ 'ಚಕ್ರ' ಅನ್ನು ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದು ಅರ್ಜಿದಾರರು, ಈ ಚಿತ್ರದ ಬಿಡುಗಡೆಯನ್ನು ಸ್ಥಗಿತಗೊಳಿಸದಿದ್ದಲ್ಲಿ, ಒಪ್ಪಂದದ ಅಡಿಯಲ್ಲಿ ನನ್ನ ಹಕ್ಕುಗಳಿಗೆ ಧಕ್ಕೆಯಾಗುತ್ತದೆ ಎಂದು ಅರ್ಜಿದಾರರು ಹೇಳಿದ್ದಾರೆ.

ಇದೇ ವೇಳೆ ಆನಂದನ್ ಮತ್ತು ವಿಶಾಲ್ ಅವರಿಗೆ 1 ಕೋಟಿ ರೂ. ಠೇವಣಿ ಇಡಲು ನ್ಯಾಯಾಲಯ ನಿರ್ದೇಶನ ನೀಡಬೇಕು ಎಂದು ಅವರು ವಾದಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT