ನಿರ್ದೇಶಕ ಕೃಷ್ಣ 
ಸಿನಿಮಾ ಸುದ್ದಿ

ಲಾಕ್ಡೌನ್ ಸಮಯದಲ್ಲಿ 2 ಕಥೆ ಬರೆದು ಸಿನೆಮಾ ತಯಾರಿಗೆ ಮುಂದಾಗಿರುವ ನಿರ್ದೇಶಕ ಕೃಷ್ಣ

ಪೈಲ್ವಾನ ನಿರ್ದೇಶಕ ಎಸ್ ಕೃಷ್ಣ ಲಾಕ್ ಡೌನ್ ಸಮಯದಲ್ಲಿ ಎರಡು ಸ್ಕ್ರಿಪ್ಟ್ ಗಳನ್ನು ಬರೆಯುವುದಕ್ಕೆ ಸದುಪಯೋಗ ಮಾಡಿಕೊಂಡಿದ್ದಾರೆ. ಇದೀಗ ಅವುಗಳ ಸಿನೆಮಾ ತಯಾರಿಯಲ್ಲಿ ನಿರತರಾಗಿದ್ದು ಸ್ಕ್ರಿಪ್ಟ್ ಗೆ ಪೂಜೆ ಸಲ್ಲಿಸಲು ನಿನ್ನೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೋಗಿದ್ದರು.

ಪೈಲ್ವಾನ ನಿರ್ದೇಶಕ ಎಸ್ ಕೃಷ್ಣ ಲಾಕ್ ಡೌನ್ ಸಮಯದಲ್ಲಿ ಎರಡು ಕಥೆಗಳನ್ನು ಬರೆಯುವುದಕ್ಕೆ ಸದುಪಯೋಗ ಮಾಡಿಕೊಂಡಿದ್ದಾರೆ. ಇದೀಗ ಅವುಗಳ ಸಿನೆಮಾ ತಯಾರಿಯಲ್ಲಿ ನಿರತರಾಗಿದ್ದು ಸ್ಕ್ರಿಪ್ಟ್ ಗೆ ಪೂಜೆ ಸಲ್ಲಿಸಲು ನಿನ್ನೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೋಗಿದ್ದರು.

ಎರಡು ಚಿತ್ರಕಥೆಗಳನ್ನು ನಾನು ಸಿದ್ದ ಮಾಡಿಕೊಂಡಿದ್ದು ಎರಡೂ ಚಿತ್ರಗಳು ನನ್ನ ಆರ್ ಆರ್ ಆರ್ ಮೋಷನ್ ಪಿಕ್ಚರ್ಸ್ ನಡಿ ತಯಾರಾಗಲಿದೆ. ಒಂದು ಚಿತ್ರಕ್ಕೆ ನಾನು ನಿರ್ದೇಶನ ಮಾಡಿದರೆ ಮತ್ತೊಂದನ್ನು ಮತ್ತೊಬ್ಬ ನಿರ್ದೇಶಕರು ಮಾಡಲಿದ್ದಾರೆ, ಇನ್ನು 10-15 ದಿನಗಳಲ್ಲಿ ಹೆಚ್ಚಿನ ವಿವರ ನೀಡುತ್ತೇನೆ. ಕನ್ನಡದ ಒಬ್ಬ ಟಾಪ್ ಹೀರೋ ಜೊತೆ ಮಾತುಕತೆ ನಡೆಸುತ್ತಿದ್ದೇನೆ, ಅವರು ಒಪ್ಪಿಗೆ ನೀಡಿ ಎಲ್ಲವೂ ಮುಕ್ತಾಯದ ಹಂತಕ್ಕೆ ಬಂದರೆ ಸದ್ಯದಲ್ಲಿಯೇ ಘೋಷಿಸುತ್ತೇನೆ ಎಂದರು.

ಹಿರಿಯ ನಟ ಅನಂತ್ ನಾಗ್ ಅವರ ಜೊತೆ ಕೆಲಸ ಮಾಡಲು ಉತ್ಸುಕರಾಗಿದ್ದು ಒಂದು ಕಥೆಗೆ ಅವರನ್ನು ಕೇಳಿಕೊಳ್ಳುತ್ತೇನೆ ಎಂದಿದ್ದರು ನಿರ್ದೇಶಕ ಕೃಷ್ಣ. ಹಾಗೆಂದು ಈ ಚಿತ್ರದಲ್ಲಿ ಅನಂತ್ ನಾಗ್ ಅವರನ್ನು ಹಾಕಿಕೊಳ್ಳುತ್ತಾರೆಯೇ ಎಂದು ಗೊತ್ತಾಗಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್: ನಾವು ಯುದ್ಧದಲ್ಲಿದ್ದೇವೆ; ಟ್ರಂಪ್ ಮಾರ್ಮಿಕ ನುಡಿ, ಸಂಘರ್ಷ ಮತ್ತಷ್ಟು ಉದ್ನಿಗ್ನ ಸಾಧ್ಯತೆ

Hubli Love jihad case: ವಿಡಿಯೋ ಇರೋದು ನಿಜ, ಆದ್ರೆ… ಪ್ರಜ್ಞೆ ತಪ್ಪಿದ್ದರೆ ವಿಡಿಯೋದಲ್ಲಿ ಹೇಗೆ ಆ್ಯಕ್ಟಿವ್ ಆಗಿರುತ್ತಾಳೆ?: Sameer Mulla ಸ್ಫೋಟಕ ಹೇಳಿಕೆ!

IPL 2026: Shreyas Iyer ಗೆ ಮತ್ತೆ ದಂಡ.. ನಾಯಕ ಮಾತ್ರವಲ್ಲ ಇಡೀ ಪಂಜಾಬ್ ತಂಡಕ್ಕೆ ಬರೆ ಹಾಕಿದ ಮ್ಯಾಚ್ ರೆಫರಿ!

'ಸಿಎಂ ಸಿದ್ದರಾಮಯ್ಯ ತಮ್ಮ ಮಗನನ್ನು ವಸೂಲಿ ಮಾಡಲು ರಾಜಕೀಯಕ್ಕೆ ಕರೆತಂದಿದ್ದಾರೆ': ಹೆಚ್ ಡಿ ಕುಮಾರಸ್ವಾಮಿ

Kerala: ಕಾಂಗ್ರೆಸ್ ಸಂಸದ Shashi Tharoor ಬೆಂಗಾವಲು ಪಡೆ ತಡೆದು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ

SCROLL FOR NEXT