ಅನುಶ್ರೀ 
ಸಿನಿಮಾ ಸುದ್ದಿ

ಸಿಸಿಬಿ ಅಧಿಕಾರಿಗಳು ಮತ್ತೆ ವಿಚಾರಣೆಗೆ ಕರೆದಿಲ್ಲ: ಆ್ಯಂಕರ್ ಅನುಶ್ರೀ

ಸ್ಯಾಂಡಲ್ ವುಡ್ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಸಿಸಿಬಿ ಅಧಿಕಾರಿಗಳು ಶನಿವಾರ ಖ್ಯಾತ ಆ್ಯಂಕರ್ ಹಾಗೂ ನಟಿ ಅನುಶ್ರೀ ಅವರ ವಿಚಾರಣೆ ನಡೆಸಿ ಅಗತ್ಯ ಮಾಹಿತಿ ಪಡೆದಿದ್ದಾರೆ.

ಮಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಸಿಸಿಬಿ ಅಧಿಕಾರಿಗಳು ಶನಿವಾರ ಖ್ಯಾತ ಆ್ಯಂಕರ್ ಹಾಗೂ ನಟಿ ಅನುಶ್ರೀ ಅವರ ವಿಚಾರಣೆ ನಡೆಸಿ ಅಗತ್ಯ ಮಾಹಿತಿ ಪಡೆದಿದ್ದಾರೆ.

ಡಿಸಿಪಿ ವಿನಯ್ ಗಾಂವ್ಕರ್ ನೇತೃತ್ವದ ಸಿಸಿಬಿ ತಂಡ ಅನುಶ್ರೀಯನ್ನು ಸತತ ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಿದೆ. ವಿಚಾರಣೆ ನಂತರ ಸಿಸಿಬಿ ಕಚೇರಿಯಿಂದ ಹೊರಬಂದ ಬಳಿಕ ಸುದ್ದಿಗಾರರೊಡನೆ ಮಾತನಾಡಿದ ಅನುಶ್ರೀ, “ಬಂಧಿತ ಆರೋಪಿಗಳಾದ ಕಿಶೋರ್ ಶೆಟ್ಟಿ ಹಾಗೂ ತರುಣ್ ರಾಜ್ ಪರಿಚಯವಿದ್ದ ಹಿನ್ನೆಲೆಯಲ್ಲಿ ನನ್ನನ್ನು ವಿಚಾರಣೆಗೆ ಗುರಿಪಡಿಸಿದ್ದರು” ಎಂದು ಹೇಳಿದ್ದಾರೆ.

ಪೊಲೀಸರು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ದು, ಮತ್ತೆ ವಿಚಾರಣೆಗೆ ಕರೆದಿಲ್ಲ. ಆದರೆ ಮತ್ತೆ ಕರೆದರೆ ಹಾಜರಾಗುತ್ತೇನೆ. ಡ್ರಗ್ ಮಾಫಿಯಾ ರಾಜ್ಯಕ್ಕೆ ಅಂಟಿರುವ ಭೂತ. ಆ ಭೂತವನ್ನು ಹೋಗಲಾಡಿಸಲು ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ನಾವು ಸಹಕಾರ ನೀಡಬೇಕು ಎಂದರು.

ಡ್ರಗ್ಸ್ ಪಾರ್ಟಿ ವಿಚಾರವಾಗಿ ಉತ್ತರಿಸಿದ ಅವರು, ಪಾರ್ಟಿಯಲ್ಲಿ ಭಾಗಿಯಾಗಿರುವ ವಿಚಾರಕ್ಕೆ ಸಂಬಂಧಿಸಿ ನನ್ನನ್ನು ವಿಚಾರಣೆಗೆ ಕರೆದಿಲ್ಲ. ಅವರು ನನ್ನ ಡ್ಯಾನ್ಸ್‌ ಕೊರಿಯೋಗ್ರಾಫರ್‍ ಆದ ಕಾರಣ ವಿಚಾರಣೆಗೆ ಕರೆದಿದ್ದರು. ಕಿಶೋರ್‌ ಅಮನ್‌ ಶೆಟ್ಟಿ ಹಾಗೂ ತರುಣ್‌ ಇವರಿಬ್ಬರು ಕೂಡಾ 12 ವರ್ಷಗಳ ಹಿಂದೆ ಒಂದು ಕಾರ್ಯಕ್ರಮದಲ್ಲಿ ನನ್ನ ಡ್ಯಾನ್ಸ್‌ ಕೊರಿಯೋಗ್ರಾಫರ್‍ ಆಗಿದ್ದರು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT