ಪವನ್ ಕಲ್ಯಾಣ್, ಚಿತ್ರಮಂದಿರದಲ್ಲಿ ದಾಂಧಲೆ ಚಿತ್ರ 
ಸಿನಿಮಾ ಸುದ್ದಿ

ತಾಂತ್ರಿಕ ದೋಷದಿಂದ 'ವಕೀಲ್ ಸಾಬ್' ಪ್ರದರ್ಶನ ಸ್ಥಗಿತ'; ವೀಕ್ಷಕರಿಂದ ಚಿತ್ರಮಂದಿರದಲ್ಲಿ ದಾಂಧಲೆ: ವಿಡಿಯೋ

ಕೊರೋನಾ ವೈರಸ್ ಭೀತಿಯ ನಡುವೆಯೂ ಪವನ್ ಕಲ್ಯಾಣ್ ಅಭಿನಯದ ಬಹುನಿರೀಕ್ಷಿತ 'ವಕೀಲ್ ಸಾಬ್' ಇಂದು ವಿಶ್ವದಾದ್ಯಂತ ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. 

ತೆಲಂಗಾಣ: ಕೊರೋನಾ ವೈರಸ್ ಭೀತಿಯ ನಡುವೆಯೂ ಪವನ್ ಕಲ್ಯಾಣ್ ಅಭಿನಯದ ಬಹುನಿರೀಕ್ಷಿತ 'ವಕೀಲ್ ಸಾಬ್' ಇಂದು ವಿಶ್ವದಾದ್ಯಂತ ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. 

ಥಿಯೇಟರ್ ಗಳಲ್ಲಿ ಶೇ.50 ರಷ್ಟು ಆಸನದ ಮಿತಿ ಇದ್ದರೂ ಮೂರು ವರ್ಷಗಳ ಬಳಿಕ ತಮ್ಮ ನೆಚ್ಚಿನ ನಟನನ್ನು ಬೆಳ್ಳಿ ಪರದೆ ಮೇಲೆ ಕಂಡ ಅಭಿಮಾನಿಗಳು ಸಾಕಷ್ಟು ಥ್ರಿಲ್ ಆಗಿದ್ದಾರೆ.

ಈ ಮಧ್ಯೆ ತೆಲಂಗಾಣದ ಜೋಗುಲಾಂಬ ಗಡ್ವಾಲ್ ಥಿಯೇಟರ್ ನಲ್ಲಿ  ತಾಂತ್ರಿಕ ದೋಷದಿಂದ ವಕೀಲ್ ಸಾಬ್ ಚಿತ್ರವನ್ನು ನಿಲ್ಲಿಸಿದ್ದರಿಂದ ವೀಕ್ಷಕರ ಆಕ್ರೋಶ ಸ್ಫೋಟಿಸಿತು. ಕೂಗಾಟ, ಕಿರುಚಾಟದ ಮೂಲಕದ ಥಿಯೇಟರ್ ನಲ್ಲಿ ದಾಂಧಲೆ ನಡೆಸಿದ್ದಾರೆ. ಗಾಜುಗಳನ್ನು ಪುಡಿಪುಡಿ ಮಾಡಿ, ಬಾಗಿಲು, ಕಿಟಕಿ, ಪಿರೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ. 

 ಹಿಂದಿಯಲ್ಲಿ ಅಮಿತಾಬ್ ಬಚ್ಚನ್ ಅಭಿನಯಿಸಿದ 'ಪಿಂಕ್' ಸಿನಿಮಾ ರಿಮೇಕ್ ಇದಾಗಿದ್ದು, ವೇಣು ಶ್ರೀರಾಮ್ ನಿರ್ದೇಶನ ಮಾಡಿದ್ದಾರೆ. ಇನ್ನೂ ಟ್ವಿಟರ್ ನಲ್ಲಿ ಈ ಚಿತ್ರದ ಬಗ್ಗೆ ಪರ ಹಾಗೂ ವಿರುದ್ಧವಾದ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT