ಪವನ್ ಕಲ್ಯಾಣ್, ಚಿತ್ರಮಂದಿರದಲ್ಲಿ ದಾಂಧಲೆ ಚಿತ್ರ 
ಸಿನಿಮಾ ಸುದ್ದಿ

ತಾಂತ್ರಿಕ ದೋಷದಿಂದ 'ವಕೀಲ್ ಸಾಬ್' ಪ್ರದರ್ಶನ ಸ್ಥಗಿತ'; ವೀಕ್ಷಕರಿಂದ ಚಿತ್ರಮಂದಿರದಲ್ಲಿ ದಾಂಧಲೆ: ವಿಡಿಯೋ

ಕೊರೋನಾ ವೈರಸ್ ಭೀತಿಯ ನಡುವೆಯೂ ಪವನ್ ಕಲ್ಯಾಣ್ ಅಭಿನಯದ ಬಹುನಿರೀಕ್ಷಿತ 'ವಕೀಲ್ ಸಾಬ್' ಇಂದು ವಿಶ್ವದಾದ್ಯಂತ ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. 

ತೆಲಂಗಾಣ: ಕೊರೋನಾ ವೈರಸ್ ಭೀತಿಯ ನಡುವೆಯೂ ಪವನ್ ಕಲ್ಯಾಣ್ ಅಭಿನಯದ ಬಹುನಿರೀಕ್ಷಿತ 'ವಕೀಲ್ ಸಾಬ್' ಇಂದು ವಿಶ್ವದಾದ್ಯಂತ ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. 

ಥಿಯೇಟರ್ ಗಳಲ್ಲಿ ಶೇ.50 ರಷ್ಟು ಆಸನದ ಮಿತಿ ಇದ್ದರೂ ಮೂರು ವರ್ಷಗಳ ಬಳಿಕ ತಮ್ಮ ನೆಚ್ಚಿನ ನಟನನ್ನು ಬೆಳ್ಳಿ ಪರದೆ ಮೇಲೆ ಕಂಡ ಅಭಿಮಾನಿಗಳು ಸಾಕಷ್ಟು ಥ್ರಿಲ್ ಆಗಿದ್ದಾರೆ.

ಈ ಮಧ್ಯೆ ತೆಲಂಗಾಣದ ಜೋಗುಲಾಂಬ ಗಡ್ವಾಲ್ ಥಿಯೇಟರ್ ನಲ್ಲಿ  ತಾಂತ್ರಿಕ ದೋಷದಿಂದ ವಕೀಲ್ ಸಾಬ್ ಚಿತ್ರವನ್ನು ನಿಲ್ಲಿಸಿದ್ದರಿಂದ ವೀಕ್ಷಕರ ಆಕ್ರೋಶ ಸ್ಫೋಟಿಸಿತು. ಕೂಗಾಟ, ಕಿರುಚಾಟದ ಮೂಲಕದ ಥಿಯೇಟರ್ ನಲ್ಲಿ ದಾಂಧಲೆ ನಡೆಸಿದ್ದಾರೆ. ಗಾಜುಗಳನ್ನು ಪುಡಿಪುಡಿ ಮಾಡಿ, ಬಾಗಿಲು, ಕಿಟಕಿ, ಪಿರೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ. 

 ಹಿಂದಿಯಲ್ಲಿ ಅಮಿತಾಬ್ ಬಚ್ಚನ್ ಅಭಿನಯಿಸಿದ 'ಪಿಂಕ್' ಸಿನಿಮಾ ರಿಮೇಕ್ ಇದಾಗಿದ್ದು, ವೇಣು ಶ್ರೀರಾಮ್ ನಿರ್ದೇಶನ ಮಾಡಿದ್ದಾರೆ. ಇನ್ನೂ ಟ್ವಿಟರ್ ನಲ್ಲಿ ಈ ಚಿತ್ರದ ಬಗ್ಗೆ ಪರ ಹಾಗೂ ವಿರುದ್ಧವಾದ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

ಬಿಜೆಪಿ-ಸಿಪಿಐ(ಎಂ) ಹೊಂದಾಣಿಕೆಯಿಂದ ಕೇರಳಕ್ಕೆ ಹೊಸ ಹೆಸರು; ಕೇಂದ್ರ ಬಂಗಾಳವನ್ನು ನಿರ್ಲಕ್ಷಿಸಿದೆ: ಮಮತಾ

Ranji Trophy final: ಮೊದಲ ದಿನ ಬಲಿಷ್ಠ ಕರ್ನಾಟಕ ವಿರುದ್ಧ ಪ್ರಾಬಲ್ಯ ಸಾಧಿಸಿದ ಜಮ್ಮು ಕಾಶ್ಮೀರ!

ಬೆಂಗಳೂರಿನಲ್ಲಿ ನಕಲಿ ಕಾಲ್ ಸೆಂಟರ್ ಮೇಲೆ ಪೊಲೀಸ್ ದಾಳಿ; ಇಬ್ಬರ ಬಂಧನ

SCROLL FOR NEXT