ರಕ್ಷಿತ್ ಶೆಟ್ಟಿ 
ಸಿನಿಮಾ ಸುದ್ದಿ

ನಟ ರಕ್ಷಿತ್ ಶೆಟ್ಟಿ ವಿರುದ್ಧ ಜಾಮೀನು ರಹಿತ ವಾರೆಂಟ್

ಅನುಮತಿ ಇಲ್ಲದೇ ‘ಕಿರಿಕ್ ಪಾರ್ಟಿ’ ಸಿನಿಮಾದಲ್ಲಿ ಹಾಡು ಬಳಸಿದ್ದ ಮೊಕದ್ದಮೆಗೆ ಸಂಬಂಧಪಟ್ಟಂತೆ ನಟ ರಕ್ಷಿತ್ ಶೆಟ್ಟಿ ಬಂಧನಕ್ಕೆ ನಗರದ 9ನೇ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ.

ಬೆಂಗಳೂರು: ಅನುಮತಿ ಇಲ್ಲದೇ ‘ಕಿರಿಕ್ ಪಾರ್ಟಿ’ ಸಿನಿಮಾದಲ್ಲಿ ಹಾಡು ಬಳಸಿದ್ದ ಮೊಕದ್ದಮೆಗೆ ಸಂಬಂಧಪಟ್ಟಂತೆ ನಟ ರಕ್ಷಿತ್ ಶೆಟ್ಟಿ ಬಂಧನಕ್ಕೆ ನಗರದ 9ನೇ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ.

‘ಶಾಂತಿ ಕ್ರಾಂತಿ’ ಚಿತ್ರದ ಹಾಡನ್ನು ಲಹರಿ ಸಂಸ್ಥೆ ಅನುಮತಿ ಇಲ್ಲದೇ ಕಿರಿಕ್ ಪಾರ್ಟಿ ಸಿನಿಮಾದಲ್ಲಿ ಬಳಸಲಾಗಿತ್ತು. ರಕ್ಷಿತ್ ಶೆಟ್ಟಿ, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಮತ್ತು ಪರಮ್ವಾ ಸ್ಟುಡಿಯೋ ವಿರುದ್ಧ ಲಹರಿ ಸಂಸ್ಥೆಯವರು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು.

ಮೊಕದ್ದಮೆ ವಿಚಾರಣೆಗೆ ಹಲವು ಬಾರಿ ಗೈರಾಗಿದ್ದರಿಂದಾಗಿ ನಟ, ಸಂಗೀತ ನಿರ್ದೇಶಕ, ಪರಮ್ವಾ ಸ್ಟುಡಿಯೊ ಮಾಲೀಕರ ವಿರುದ್ಧ ವಾರಂಟ್ ಜಾರಿ ಮಾಡಲಾಗಿದೆ. ಅವರೆಲ್ಲರನ್ನೂ ಬಂಧಿಸಿ ಏಪ್ರಿಲ್ 27ರಂದು ವಿಚಾರಣೆಗೆ ಹಾಜರುಪಡಿಸುವಂತೆ ಪೊಲೀಸರಿಗೆ ನ್ಯಾಯಾಲಯ ಆದೇಶದಲ್ಲಿ ಹೇಳಿದೆ.

ಕಿರಿಕ್ ಪಾರ್ಟಿಯಲ್ಲಿ ಲಹರಿ ಸಂಸ್ಥೆಗೆ ಸೇರಿದ ಹಾಡುಗಳ ಅಕ್ರಮ ಬಳಕೆ ಮಾಡಿದ್ದ ಆರೋಪ ಕೇಳಿ ಬಂದಿತ್ತು. ಯಾರದೇ ಅನುಮತಿ ಇಲ್ಲದೇ ಹಾಡುಗಳನ್ನು ಬಳಕೆ ಮಾಡಿಕೊಂಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು.

ಈ ಬಗ್ಗೆ ಕ್ರಿಮಿನಲ್ ಮತ್ತು ಸಿವಿಲ್ ಕೇಸ್ ಹಾಕಿದ್ದ ಲಹರಿ ರೆಕಾರ್ಡಿಂಗ್ಸ್ ಕಾನೂನು ಹೋರಾಟ ಆರಂಭಿಸಿತ್ತು. ಕಾಪಿ ರೈಟ್ಸ್ ಆಕ್ಟ್ 63ಎ & 63 ಬಿ ಅಡಿಯಲ್ಲಿ ಕೇಸ್ ಹಾಕಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?

BJP ತೊರೆಯಲು ಕಾರಣ ಬಹಿರಂಗಪಡಿಸಿದ Annamalai; ಮಾಜಿ ಐಪಿಎಸ್ ಅಧಿಕಾರಿ ಹೇಳಿದ್ದೇನೆಂದರೆ

SIR ಪ್ರಕ್ರಿಯೆಯಲ್ಲಿನ ಅನ್ಯಾಯ ತಡೆಗೆ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು: ಸಿಎಂ ಶಿವಕುಮಾರ್ ಗೆ ಪ್ರಕಾಶ್ ರಾಜ್ ಮನವಿ