ರಕ್ಷಿತ್ ಶೆಟ್ಟಿ 
ಸಿನಿಮಾ ಸುದ್ದಿ

ನಟ ರಕ್ಷಿತ್ ಶೆಟ್ಟಿ ವಿರುದ್ಧ ಜಾಮೀನು ರಹಿತ ವಾರೆಂಟ್

ಅನುಮತಿ ಇಲ್ಲದೇ ‘ಕಿರಿಕ್ ಪಾರ್ಟಿ’ ಸಿನಿಮಾದಲ್ಲಿ ಹಾಡು ಬಳಸಿದ್ದ ಮೊಕದ್ದಮೆಗೆ ಸಂಬಂಧಪಟ್ಟಂತೆ ನಟ ರಕ್ಷಿತ್ ಶೆಟ್ಟಿ ಬಂಧನಕ್ಕೆ ನಗರದ 9ನೇ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ.

ಬೆಂಗಳೂರು: ಅನುಮತಿ ಇಲ್ಲದೇ ‘ಕಿರಿಕ್ ಪಾರ್ಟಿ’ ಸಿನಿಮಾದಲ್ಲಿ ಹಾಡು ಬಳಸಿದ್ದ ಮೊಕದ್ದಮೆಗೆ ಸಂಬಂಧಪಟ್ಟಂತೆ ನಟ ರಕ್ಷಿತ್ ಶೆಟ್ಟಿ ಬಂಧನಕ್ಕೆ ನಗರದ 9ನೇ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ.

‘ಶಾಂತಿ ಕ್ರಾಂತಿ’ ಚಿತ್ರದ ಹಾಡನ್ನು ಲಹರಿ ಸಂಸ್ಥೆ ಅನುಮತಿ ಇಲ್ಲದೇ ಕಿರಿಕ್ ಪಾರ್ಟಿ ಸಿನಿಮಾದಲ್ಲಿ ಬಳಸಲಾಗಿತ್ತು. ರಕ್ಷಿತ್ ಶೆಟ್ಟಿ, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಮತ್ತು ಪರಮ್ವಾ ಸ್ಟುಡಿಯೋ ವಿರುದ್ಧ ಲಹರಿ ಸಂಸ್ಥೆಯವರು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು.

ಮೊಕದ್ದಮೆ ವಿಚಾರಣೆಗೆ ಹಲವು ಬಾರಿ ಗೈರಾಗಿದ್ದರಿಂದಾಗಿ ನಟ, ಸಂಗೀತ ನಿರ್ದೇಶಕ, ಪರಮ್ವಾ ಸ್ಟುಡಿಯೊ ಮಾಲೀಕರ ವಿರುದ್ಧ ವಾರಂಟ್ ಜಾರಿ ಮಾಡಲಾಗಿದೆ. ಅವರೆಲ್ಲರನ್ನೂ ಬಂಧಿಸಿ ಏಪ್ರಿಲ್ 27ರಂದು ವಿಚಾರಣೆಗೆ ಹಾಜರುಪಡಿಸುವಂತೆ ಪೊಲೀಸರಿಗೆ ನ್ಯಾಯಾಲಯ ಆದೇಶದಲ್ಲಿ ಹೇಳಿದೆ.

ಕಿರಿಕ್ ಪಾರ್ಟಿಯಲ್ಲಿ ಲಹರಿ ಸಂಸ್ಥೆಗೆ ಸೇರಿದ ಹಾಡುಗಳ ಅಕ್ರಮ ಬಳಕೆ ಮಾಡಿದ್ದ ಆರೋಪ ಕೇಳಿ ಬಂದಿತ್ತು. ಯಾರದೇ ಅನುಮತಿ ಇಲ್ಲದೇ ಹಾಡುಗಳನ್ನು ಬಳಕೆ ಮಾಡಿಕೊಂಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು.

ಈ ಬಗ್ಗೆ ಕ್ರಿಮಿನಲ್ ಮತ್ತು ಸಿವಿಲ್ ಕೇಸ್ ಹಾಕಿದ್ದ ಲಹರಿ ರೆಕಾರ್ಡಿಂಗ್ಸ್ ಕಾನೂನು ಹೋರಾಟ ಆರಂಭಿಸಿತ್ತು. ಕಾಪಿ ರೈಟ್ಸ್ ಆಕ್ಟ್ 63ಎ & 63 ಬಿ ಅಡಿಯಲ್ಲಿ ಕೇಸ್ ಹಾಕಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT