ನಟ ಪ್ರವೀಣ್ 
ಸಿನಿಮಾ ಸುದ್ದಿ

ಸಿನಿಮಾದಲ್ಲೂ ಸಿಕ್ಸರ್ ಬಾರಿಸ್ತಾರಾ ಪ್ರವೀಣ್

ಅಂಗಳದಲ್ಲಿ ಅಭಿಮಾನಿಗಳ ಕೂಗು, ಬ್ಯಾಟ್, ಬಾಲ್, ಸಿಕ್ಸರ್‍ಗಳ ಸುರಿಮಳೆ,  ಇದರೆಲ್ಲದರಿಂದ ಹೊರಬಂದಿರುವ ಪ್ರವೀಣ್ ಶ್ರೀ ಈಗ ನಾಯಕ ನಟರಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಿತರಾಗುತ್ತಿದ್ದಾರೆ.

ಬೆಂಗಳೂರು: ಅಂಗಳದಲ್ಲಿ ಅಭಿಮಾನಿಗಳ ಕೂಗು, ಬ್ಯಾಟ್, ಬಾಲ್, ಸಿಕ್ಸರ್‍ಗಳ ಸುರಿಮಳೆ, ಇದರೆಲ್ಲದರಿಂದ ಹೊರಬಂದಿರುವ ಪ್ರವೀಣ್ ಶ್ರೀ ಈಗ ನಾಯಕ ನಟರಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಿತರಾಗುತ್ತಿದ್ದಾರೆ.

ಚಿಕ್ಕಂದಿನಿಂದ ಪ್ರವೀಣ್ ಅವರ ಕನಸು ಇದ್ದದ್ದು ಕ್ರಿಕೆಟರ್ ಆಗಬೇಕು ಎಂದೇ. ಆದರೆ ಕ್ರಿಕೆಟ್‍ನಲ್ಲಿ ಅಂತರರಾಷ್ಟ್ರೀಯ ಪಂದ್ಯ, ಇಲ್ಲದಿದ್ದರೆ ಐಪಿಎಲ್ ಆಡಿದರಷ್ಟೇ ಭವಿಷ್ಯ ಇದೆ. ಪ್ರವೀಣ್ ಅಂತಾರಾಷ್ಟ್ರೀಯ ಪಂದ್ಯ ಆಡದಿದ್ದರೂ ಅಲ್ಲಿ ಕಡಿಮೆ ಛಾಪು ಮೂಡಿಸಿಲ್ಲ. ಕರ್ನಾಟಕದ ಅಂಡರ್ 19, ಅಂಡರ್ 22 ಹಾಗೂ  ರೈಲ್ವೇಸ್ ತಂಡಗಳಲ್ಲಿ ಆಡಿದ್ದಾರೆ. ಕ್ಲಬ್‌ ಒಂದಕ್ಕಾಗಿ ಆಡುವಾಗ ಅವರು ಹೊಡೆದಿದ್ದ 188 ರನ್‍ಗಳ ಇನಿಂಗ್ಸ್ ಈಗಲೂ ಅವರನ್ನು ಕಾಡುತ್ತಿದೆ. ಕೆಪಿಎಲ್, ಕೆಸಿಸಿನಲ್ಲೂ ಆಡಿ ಮಿಂಚಿದ್ದಾರೆ.

ಸಿನಿಮಾದಲ್ಲಿ ಪ್ರವೀಣ್
"ನಾನು ಸುದೀಪ್ ಅಣ್ಣ ಅವರ ಅಭಿಮಾನಿ. ಅವರನ್ನೇ ನನ್ನ ರೋಲ್ ಮಾಡೆಲ್ ಎಂದು ನಂಬುತ್ತೇನೆ. ಅವರ ಅಭಿನಯ ನೋಡಿ ನನಗೂ ನಟನೆಯಲ್ಲಿ ಆಸಕ್ತಿ ಬೆಳೆಯಿತು. ಕಳೆದ 5-6 ವರ್ಷಗಳಿಂದ ಸಿನಿಮಾ ಇಂಡಸ್ಟ್ರಿಯಲ್ಲಿ ಏನಾದರೂ ಸಾಧಿಸಬೇಕು ಎಂದು ಅವಕಾಶದ ಹುಡುಕಾಟದಲ್ಲಿದ್ದೆ. ಕ್ರಿಕೆಟ್ ಆಡುವಾಗ ನನಗೆ ಯಾರೂ ಬೆಂಬಲಿಗರು ಇರಲಿಲ್ಲ.  "ಡಿಯರ್ ಕಣ್ಮಣಿ"ಗೆ ಆಡಿಷನ್ ಕೊಟ್ಟ ನಂತರ  ವಿಸ್ಮಯಾ ಗೌಡ ಅವರು ನನಗೆ ಬೆಂಬಲ ಕೊಟ್ಟರು. ಮೊದಲೇ ಸ್ನೇಹಿತರಾಗಿದ್ದರು ಆದರೆ ಅವರ ತಂಡದ ಉತ್ಸಾಹ, ಸಿನಿಮಾದ ಕಥೆ, ನನಗೆ ಸಿಕ್ಕ ಪಾತ್ರ, ಅದರಲ್ಲೂ ಮೊದಲ ಸಿನಿಮಾದಲ್ಲೇ "ಹೀರೋ ರೋಲ್' ಇದೆಲ್ಲಾ ನೋಡಿ ನಾನು ನಿಜಕ್ಕೂ ಕನಸು ಕಾಣಲು ಆರಂಭಿಸಿದೆ ಎಂದರು.

ಕ್ರಿಕೆಟ್‍ನಲ್ಲೂ ನಾನು ಸಾಕಷ್ಟು ಬೆವರು ಹರಿಸಿದ್ದೆ. ಅದೇ ರೀತಿ ಸಿನಿಮಾಕ್ಕಾಗಿ ಕೂಡ ನಾನು ಶ್ರಮಹಾಕಿ ಕೆಲಸ ಮಾಡುತ್ತಿದ್ದೇನೆ. ಇಲ್ಲಿ ಗೆದ್ದೇ ಗೆಲ್ಲುತ್ತೇನೆ ಅನ್ನುವ ಭರವಸೆ ನನಗಿದೆ ಎಂದು ಹೇಳಿದರು.

ನಿರ್ದೇಶಕಿ ವಿಸ್ಮಯಾ ಕನಸು
ಕ್ರಿಕೆಟ್ ನಿಂದ ಸಿನಿಮಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಕಾಣಿಸಿಕೊಳ್ಳುತ್ತಿರುವ ಪ್ರವೀಣ್ ಅವರ ಪಾತ್ರದ ಬಗ್ಗೆ ಸಿನಿಮಾ ತಂಡ ಯಾವುದೇ ಸುಳಿವು ಬಿಟ್ಟುಕೊಟ್ಟಿಲ್ಲ. ಆಟಗಾರನಿಂದ ನಟನಾಗಲಿರುವ ಪ್ರವೀಣ್ ಅವರಿಗೆ ವಿಸ್ಮಯಾ  ಅವರಿಂದ ಧ್ವನಿ, ನಟನೆ, ಲುಕ್ ಎಲ್ಲಾ ರೀತಿಯಲ್ಲೂ ತರಬೇತಿಯನ್ನು ನೀಡಲಾಗುತ್ತಿದೆ.

'ಈ ಸಿನಿಮಾದಲ್ಲಿ ನನ್ನ ಪಾತ್ರ ಚೆನ್ನಾಗಿದೆ. ತೆರೆ ಮೇಲೂ ಅದು ಹಾಗೇ ಕಾಣಬೇಕಾದರೆ ತರಬೇತಿ ಬೇಕು ಎನ್ನುವುದು ವಿಸ್ಮಯಾ ಅವರ ಕನಸು. ಅವರ ಶ್ರಮ ಹಾಗೂ ಕನಸಿಗೆ ನಾವು ಬೆಂಬಲ ನೀಡುತ್ತಿದ್ದೇವೆ. ನಮ್ಮ ಎಲ್ಲಾ  ಅಗತ್ಯ ಹಾಗೂ ಭರವಸೆಗೂ ವಿಸ್ಮಯಾ ಅವರು ಜೊತೆ ಇದ್ದಾರೆ' ಎಂದು ಪ್ರವೀಣ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT