ಮದಗಜ ಟೀಸರ್ 
ಸಿನಿಮಾ ಸುದ್ದಿ

ಯುಗಾದಿ ಹಬ್ಬಕ್ಕೆ ಬಂತು ಶ್ರೀಮುರಳಿ-ಆಶಿಕಾ ಜೋಡಿಯ ‘ಲವ್‌ಸಮ್’ ಟೀಸರ್ 

"ಮದಗಜ" ಚಿತ್ರತಂಡ ಯುಗಾದಿ ಹಬ್ಬದಂದು ಚಿತ್ರದ  ‘ಲವ್‌ಸಮ್’ ಟೀಸರ್ ಬಿಡುಗಡೆ ಮಾಡಿದೆ. ಇದು ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಆನಂದ್ ಆಡಿಯೋ  ಮೂಲಕ ಹೊರಬಂದಿದೆ.

"ಮದಗಜ" ಚಿತ್ರತಂಡ ಯುಗಾದಿ ಹಬ್ಬದಂದು ಚಿತ್ರದ  ‘ಲವ್‌ಸಮ್’ ಟೀಸರ್ ಬಿಡುಗಡೆ ಮಾಡಿದೆ. ಇದು ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಆನಂದ್ ಆಡಿಯೋ  ಮೂಲಕ ಹೊರಬಂದಿದೆ.

“ನಮ್ಮ ಕೊನೆಯ ಎರಡು ಟೀಸರ್ ಗಳಲ್ಲಿ, ನಾಯಕ ಶ್ರೀಮುರಳಿ ಮತ್ತು ನಟ ಜಗಪತಿ ಬಾಬು ಅವರ ಲುಕ್ ಅನ್ನು ನೀಡಿದ್ದೇವೆ. ಈ ಟೀಸರ್ ಆಶಿಕಾ ರಂಗನಾಥ್ ನಿರ್ವಹಿಸಿದ ನಾಯಕಿಯ ಪಾತ್ರವನ್ನು ಪರಿಚಯಿಸುತ್ತದೆ ಮತ್ತು ಅಅರು ನಾಯಕ ಜೋಡಿಯಾಗಿ ಹೇಗೆ ಕಾಣುತ್ತಾರೆ ಎನ್ನುವುದನ್ನು ಹೇಳಲಿದೆ." ನಿರ್ದೇಶಕ ಮಹೇಶ್ ಕುಮಾರ್ ಹೇಳಿದ್ದಾರೆ.

ಚಿತ್ರದ ಮೊದಲ ಕೆಲವು ಸ್ಟಿಲ್‌ಗಳನ್ನು ನಿರ್ದೇಶಕರು ಹಂಚಿಕೊಂಡಿದ್ದು, ಇದರಲ್ಲಿ ಆಶಿಕಾ ರಂಗನಾಥ್ ಹಳ್ಳಿ ಹುಡುಗಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ನಟಿ ಶ್ರೀಮುರಳಿ ಅವರೊಂದಿಗೆ ಸ್ಕ್ರೀನ್ ಸ್ಪೇಸ್ ಹಂಚಿಕೊಳ್ಳುತ್ತಿರುವುದು ಇದೇ ಮೊದಲು, ಮತ್ತು ಇಬ್ಬರೂ ತಮ್ಮ ಹೊಸ ಅವತಾರಗಳಲ್ಲಿ ನೆಟಿಜನ್‌ಗಳನ್ನು ಮೆಚ್ಚಿಸಲು ಹೊರಟಿದ್ದಾರೆ. ಏತನ್ಮಧ್ಯೆ, ಫಿಲ್ಮ್ ಸೆಟ್ ಗಳಲ್ಲಿ ಕಾಲಿಗೆ ಗಾಯವಾದ ಶ್ರೀಮುರಳಿ ಅವರಿಗೆ ಈಗ 15 ದಿನಗಳ ಬೆಡ್ ರೆಸ್ಟ್ ಸೂಚಿಸಲಾಗಿದೆ, ಮತ್ತು ಚಿತ್ರ ನಿರ್ಮಾಪಲರು ಅವರ ಶೂಟಿಂಗ್ ದಿನಾಂಕಗಳನ್ನು ಮರು ನಿಗದಿಪಡಿಸಿದ್ದಾರೆ. ಉಮಾಪತಿ ಫಿಲ್ಮ್ಸ್ ನಿರ್ಮಿಸಿದ ಈ ಯೋಜನೆಯು ಕೊನೆಯ ಹಂತದ ಚಿತ್ರೀಕರಣದಲ್ಲಿದೆ.

ಕನ್ನಡದಲ್ಲಿ ತಯಾರಾದ ಫ್ಯಾಮಿಲಿ ಮಾಸ್ ಎಂಟರ್‌ಟೈನರ್ ಪ್ಯಾನ್-ಇಂಡಿಯಾ ರಿಲೀಸ್ ಗೆ ಸಜ್ಜಾಗಿದ್ದು ಏಕಕಾಲದಲ್ಲಿ ಇದನ್ನು ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಬಿಡುಗಡೆ ಮಾಡಲಾಗುವುದು. ತಂಡವು ಆಗಸ್ಟ್  ತಿಂಗಳಲ್ಲಿ ಚಿತ್ರದ ರಿಲೀಸ್ ಗೆ ಸಿದ್ದವಾಗುತ್ತಿದೆ. ವರಮಹಾಲಕ್ಷ್ಮಿ ಹಬ್ಬದಂದು ಸಿನಿ ಮಂದಿರಕ್ಕೆ "ಮದಗಜ" ಲಗ್ಗೆ ಇಡುವುದು ಪಕ್ಕಾ ಎನ್ನಲಾಗಿದೆ. ಆದಾಗ್ಯೂ, ನಿರ್ಮಾಣ ಸಂಸ್ಥೆ ಇದರ ಬಗ್ಗೆ ಯಾವ ಅಧಿಕೃತ ಮಾಹಿತಿ ನೀಡಿಲ್ಲ. ದೊಡ್ಡ ಪಾತ್ರವರ್ಗವನ್ನು ಒಳಗೊಂಡಿರುವ ಈ ಚಿತ್ರಕ್ಕೆ ರವಿ ಬಸ್ರೂರು ಸಂಗೀತ ನೀಡಿದ್ದರೆ ಡಿಒಪಿ ನವೀನ್ ಕುಮಾರ್ ಕ್ಯಾಮೆರಾ ಕೆಲಸ ನಿರ್ವಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT