ನಟ ಯಶ್ 
ಸಿನಿಮಾ ಸುದ್ದಿ

'ಇಂದು ನಿಮ್ಮ ಯಶ್ ಏನೇ ಆಗಿರಬಹುದು, ಅದಕ್ಕೂ ಮೊದಲು ನಾನು ಪ್ರಾಮಾಣಿಕ ಚಾಲಕನ ಪುತ್ರ': ನಟ ಯಶ್

ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ಇಲಾಖೆ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮಾಜಿ ಬಸ್ ಕಂಡಕ್ಟರ್ ಮಗನಾಗಿರುವ ಚಿತ್ರನಟ ಯಶ್ ಬೆಂಬಲ ನೀಡಬೇಕೆಂದು ನಿನ್ನೆ ನೌಕರರು ಮನವಿ ಮಾಡಿಕೊಂಡಿದ್ದರು. 

ಬೆಂಗಳೂರು: ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ಇಲಾಖೆ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮಾಜಿ ಬಸ್ ಕಂಡಕ್ಟರ್ ಮಗನಾಗಿರುವ ಚಿತ್ರನಟ ಯಶ್ ಬೆಂಬಲ ನೀಡಬೇಕೆಂದು ನಿನ್ನೆ ನೌಕರರು ಮನವಿ ಮಾಡಿಕೊಂಡಿದ್ದರು. 

 ಅದಕ್ಕೆ ಇಂದು ಟ್ವೀಟ್ ಮೂಲಕ ರಾಕಿಂಗ್ ಸ್ಟಾರ್ ಯಶ್ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ನಿಮ್ಮ ಯಶ್ ಏನೇ ಆಗಿರಬಹುದು, ಆದರೆ ಅವೆಲ್ಲಕ್ಕಿಂತಲೂ ಮೊದಲು ನಾನು ಸಾರಿಗೆ ಸಂಸ್ಥೆಯ ಪ್ರಾಮಾಣಿಕ ಚಾಲಕನ ಮಗ. ಸಾರಿಗೆ ಇಲಾಖೆ ನೌಕರರ ಕಷ್ಟದ ಬಗ್ಗೆ ನನಗೆ ಅರಿವಿದೆ, ನನ್ನ ತಂದೆ ಕಷ್ಟಪಟ್ಟ ದಿನಗಳು ನೆನಪಿಗೆ ಬರುತ್ತವೆ. ಬಸ್ ಚಾಲಕರು, ನಿರ್ವಾಹಕರು ಮತ್ತು ಪ್ರಯಾಣಿಕರ ನಡುವಿನ ಸಂಬಂಧ-ಸಹಕಾರ ಲೆಕ್ಕವಿಲ್ಲದಷ್ಟು, ಸಾರಿಗೆ ನೌಕರರು ಇಂದು ಪ್ರಾಮಾಣಿಕವಾಗಿ ನ್ಯಾಯ ಕೊಡಿ ಎಂದು ಹೋರಾಟಕ್ಕಿಳಿದಿದ್ದು ನನ್ನನ್ನು ಬಹಳವಾಗಿ ಕಾಡುತ್ತಿದೆ ಎಂದಿದ್ದಾರೆ.

ಸಾರಿಗೆ ಇಲಾಖೆ ಸಚಿವ ಲಕ್ಷ್ಮಣ ಸವದಿ ಅವರೊಂದಿಗೆ ಮಾತನಾಡಿ ನೌಕರರ ಸಮಸ್ಯೆಗಳನ್ನು ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದೇನೆ. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಾರಿಗೆ ನೌಕರರ ಬಹುಮುಖ್ಯ ಬೇಡಿಕೆಯಾದ ವೇತನ ತಾರತಮ್ಯವನ್ನು ಈಡೇರಿಸುವ ಮಾತನ್ನು ಕೊಟ್ಟಿದ್ದಾರೆ. ಸಮಸ್ಯೆಗೆ ಮುಕ್ತವಾಗಿ ಮಾತುಕತೆ ನಡೆಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

SCROLL FOR NEXT