ನಟ ಯಶ್ 
ಸಿನಿಮಾ ಸುದ್ದಿ

'ಇಂದು ನಿಮ್ಮ ಯಶ್ ಏನೇ ಆಗಿರಬಹುದು, ಅದಕ್ಕೂ ಮೊದಲು ನಾನು ಪ್ರಾಮಾಣಿಕ ಚಾಲಕನ ಪುತ್ರ': ನಟ ಯಶ್

ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ಇಲಾಖೆ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮಾಜಿ ಬಸ್ ಕಂಡಕ್ಟರ್ ಮಗನಾಗಿರುವ ಚಿತ್ರನಟ ಯಶ್ ಬೆಂಬಲ ನೀಡಬೇಕೆಂದು ನಿನ್ನೆ ನೌಕರರು ಮನವಿ ಮಾಡಿಕೊಂಡಿದ್ದರು. 

ಬೆಂಗಳೂರು: ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ಇಲಾಖೆ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮಾಜಿ ಬಸ್ ಕಂಡಕ್ಟರ್ ಮಗನಾಗಿರುವ ಚಿತ್ರನಟ ಯಶ್ ಬೆಂಬಲ ನೀಡಬೇಕೆಂದು ನಿನ್ನೆ ನೌಕರರು ಮನವಿ ಮಾಡಿಕೊಂಡಿದ್ದರು. 

 ಅದಕ್ಕೆ ಇಂದು ಟ್ವೀಟ್ ಮೂಲಕ ರಾಕಿಂಗ್ ಸ್ಟಾರ್ ಯಶ್ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ನಿಮ್ಮ ಯಶ್ ಏನೇ ಆಗಿರಬಹುದು, ಆದರೆ ಅವೆಲ್ಲಕ್ಕಿಂತಲೂ ಮೊದಲು ನಾನು ಸಾರಿಗೆ ಸಂಸ್ಥೆಯ ಪ್ರಾಮಾಣಿಕ ಚಾಲಕನ ಮಗ. ಸಾರಿಗೆ ಇಲಾಖೆ ನೌಕರರ ಕಷ್ಟದ ಬಗ್ಗೆ ನನಗೆ ಅರಿವಿದೆ, ನನ್ನ ತಂದೆ ಕಷ್ಟಪಟ್ಟ ದಿನಗಳು ನೆನಪಿಗೆ ಬರುತ್ತವೆ. ಬಸ್ ಚಾಲಕರು, ನಿರ್ವಾಹಕರು ಮತ್ತು ಪ್ರಯಾಣಿಕರ ನಡುವಿನ ಸಂಬಂಧ-ಸಹಕಾರ ಲೆಕ್ಕವಿಲ್ಲದಷ್ಟು, ಸಾರಿಗೆ ನೌಕರರು ಇಂದು ಪ್ರಾಮಾಣಿಕವಾಗಿ ನ್ಯಾಯ ಕೊಡಿ ಎಂದು ಹೋರಾಟಕ್ಕಿಳಿದಿದ್ದು ನನ್ನನ್ನು ಬಹಳವಾಗಿ ಕಾಡುತ್ತಿದೆ ಎಂದಿದ್ದಾರೆ.

ಸಾರಿಗೆ ಇಲಾಖೆ ಸಚಿವ ಲಕ್ಷ್ಮಣ ಸವದಿ ಅವರೊಂದಿಗೆ ಮಾತನಾಡಿ ನೌಕರರ ಸಮಸ್ಯೆಗಳನ್ನು ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದೇನೆ. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಾರಿಗೆ ನೌಕರರ ಬಹುಮುಖ್ಯ ಬೇಡಿಕೆಯಾದ ವೇತನ ತಾರತಮ್ಯವನ್ನು ಈಡೇರಿಸುವ ಮಾತನ್ನು ಕೊಟ್ಟಿದ್ದಾರೆ. ಸಮಸ್ಯೆಗೆ ಮುಕ್ತವಾಗಿ ಮಾತುಕತೆ ನಡೆಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT