ಕೃಷ್ಣ ಟಾಕೀಸ್ 
ಸಿನಿಮಾ ಸುದ್ದಿ

ಅಜೇಯ ರಾವ್ ನಟನೆಯ 'ಕೃಷ್ಣ ಟಾಕೀಸ್' ಲೇಟಾಗ್ಬಂದ್ರೂ ಲೇಟೆಸ್ಟಾಗಿದೆ: ನಿರ್ಮಾಪಕ ಗೋವಿಂದರಾಜು

ಕೃಷ್ಣ ಅಜಯ್ ರಾವ್ ಅಭಿನಯದ ಕೃಷ್ಣ ಟಾಕೀಸ್ ಚಿತ್ರದ ಪ್ರೀರಿಲೀಸ್ ಕಾರ್ಯಕ್ರಮ ಪಂಚತಾರಾ ಹೋಟೆಲ್ ನಲ್ಲಿ ಇತ್ತೀಚೆಗೆ ನೆರವೇರಿತು.

ಬೆಂಗಳೂರು: ಕೃಷ್ಣ ಅಜಯ್ ರಾವ್ ಅಭಿನಯದ ಕೃಷ್ಣ ಟಾಕೀಸ್ ಚಿತ್ರದ ಪ್ರೀರಿಲೀಸ್ ಕಾರ್ಯಕ್ರಮ ಪಂಚತಾರಾ ಹೋಟೆಲ್ ನಲ್ಲಿ ಇತ್ತೀಚೆಗೆ ನೆರವೇರಿತು. 

ವರ್ಣರಂಜಿತವಾಗಿ ನಡೆದ ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ಈ ಹಿಂದೆ ಅಜಯ್ ರಾವ್ ಅವರ ಜೊತೆ ಕೃಷ್ಣ ಸೀರೀಸ್ ನಲ್ಲಿ ಚಿತ್ರಗಳನ್ನು ಮಾಡಿದ ನಿರ್ಮಾಪಕರು ಹಾಗೂ ನಿರ್ದೇಶಕರು ಭಾಗವಹಿಸಿದ್ದರು.

ವಿಜಯಾನಂದ್ (ಆನಂದಪ್ರಿಯ) ಅವರ ನಿರ್ದೇಶನದ ಹಾರರ್, ಸಸ್ಪೆನ್ಸ್, ಥ್ರಿಲ್ಲರ್ ಚಿತ್ರ ಇದಾಗಿದ್ದು, ಹಾಡುಗಳು ಹಾಗೂ ಟೀಸರ್, ಟ್ರೇಲರ್ ಮೂಲಕ ಪೇಕ್ಷಕರಲ್ಲಿ ಕುತೂಹಲ ಮೂಡಿಸಿದೆ.  

ಈ ಸಂದರ್ಭದಲ್ಲಿ ಮಾತನಾಡಿದ ನಿರ್ಮಾಪಕ ಗೋವಿಂದರಾಜು ಒಮ್ಮೆ ನಿರಂತ್ ಕಥೆ ಬಗ್ಗೆ ಹೇಳಿದರು. ಅವರ ಮೂಲಕ ಆನಂದಪ್ರಿಯ ಮೀಟ್ ಆಗಿ ಕಥೆ ಕೇಳಿದಾಗ ಈ ಸಿನಿಮಾ ನಾನೇ ಮಾಡಬೇಕು ಎಂದು ಆರಂಭಿಸಿದೆ. 

ಅಲ್ಲದೆ ಈ ಚಿತ್ರ ಇಲ್ಲೀವರೆಗೆ ಬರಲು ನಾನೊಬ್ಬನೇ ಕಾರಣನಲ್ಲ, ಆರ್ ಕೆ ಟಾಕೀಸ್ ನ  ಕೃಷ್ಣ ಸೇರಿದಂತೆ ಇತರರೆಲ್ಲ ಕೈಜೋಡಿಸಿದ್ದರಿಂದ ಕಂಪ್ಲೀಟ್ ಆಗಿದೆ. ಕೋವಿಡ್ ನಿಂದ ಸ್ವಲ್ಪ ಲೇಟಾದರೂ ಲೇಟೆಸ್ಟಾಗಿ ಬರುತ್ತಿದೇವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT