ಅರ್ಜುನ್ ಜನ್ಯ 
ಸಿನಿಮಾ ಸುದ್ದಿ

ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ: ವದಂತಿಗಳಿಗೆ ಅರ್ಜುನ್ ಜನ್ಯ ಸ್ಪಷ್ಟನೆ

ಸ್ಯಾಂಡಲ್‌ವುಡ್‌ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಆರೋಗ್ಯ, ಕುಟುಂಬದ ಬಗ್ಗೆ ಕೆಲ ಸುಳ್ಳು ಸುದ್ದಿಗಳು ಹರಡುತ್ತಿದೆ. ಈ ಬಗ್ಗೆ ಅರ್ಜುನ್ ಜನ್ಯ ಅವರು ಸೋಶಿಯಲ್ ಮೀಡಿಯಾ ಪೋಸ್ಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಬೆಂಳಗಳೂರು: ಸ್ಯಾಂಡಲ್‌ವುಡ್‌ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಆರೋಗ್ಯ, ಕುಟುಂಬದ ಬಗ್ಗೆ ಕೆಲ ಸುಳ್ಳು ಸುದ್ದಿಗಳು ಹರಡುತ್ತಿದೆ. ಈ ಬಗ್ಗೆ ಅರ್ಜುನ್ ಜನ್ಯ ಅವರು ಸೋಶಿಯಲ್ ಮೀಡಿಯಾ ಪೋಸ್ಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಎಲ್ಲರಿಗೂ ನಿಮ್ಮ ಅರ್ಜುನ್ ಜನ್ಯ ಮಾಡುವ ನಮಸ್ಕಾರಗಳು ಈ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಕೆಲವೊಂದು ಯೂಟ್ಯೂಬ್ ಚಾನೆಲ್‌ಗಳು ನನ್ನ ಬಗ್ಗೆ ನನ್ನ ಕುಟುಂಬದ ಬಗ್ಗೆ, ನನ್ನ ಆರೋಗ್ಯದ ಬಗ್ಗೆ ತಪ್ಪು ಮಾಹಿತಿಗಳನ್ನು
ಹಬ್ಬಿಸುತ್ತಿದ್ದಾರೆ. ಇದು ಸರಿ ಹೋಗಬಹುದು ಎಂದು ನಾನು ಸಮಾಧಾನವಾಗಿದ್ದೆ, ಆದರೆ ದಿನೆ ದಿನೇ ಇದು ಹೆಚ್ಚಾಗುತ್ತಿದೆ.

ಜನರಲ್ಲಿ ನಾನು ವಿನಂತಿಸಿಕೊಳ್ಳುವುದೇನೆಂದರೆ ಈ ಕೆಲವು ಯೂಟ್ಯೂಬ್ ಚಾನಲ್‌ಗಳು ನೀಡಿದ ಮಾಹಿತಿಗಳು ಅಪ್ಪಟ ಸುಳ್ಳು. ನಾನು ಆರೋಗ್ಯವಾಗಿದ್ದೇನೆ. ನನಗೆ ಕೊರೋನಾ ಬಂದು ಗುಣಮುಖನಾಗಿ ವೈದ್ಯರ ಸಲಹೆಯಂತೆ ಈಗ ಮನೆಯಲ್ಲಿಯೇ ಹತ್ತು ದಿನದ ಐಸೋಲೇಶನ್‌ನಲ್ಲಿದ್ದೇನೆ. ಇದರಲ್ಲಿ ಈಗಾಗಲೇ ಆರು ದಿನಗಳು ಪೂರ್ಣಗೊಂಡಿವೆ, ಇನ್ನು ಉಳಿದ ನಾಲ್ಕೈದು ದಿನಗಳು ಕಳೆದ ನಂತರ ನನ್ನ ದೈನಂದಿನ ಕೆಲಸಗಳನ್ನು ಮುಂದುವರಿಸುತ್ತೇನೆ. ಮತ್ತೊಮ್ಮೆ ಈ ರೀತಿಯ ಹೀನ ಕಾರ್ಯಗಳನ್ನು ಮಾಡುತ್ತಿರುವ ಯೂಟ್ಯೂಬ್‌ ಚಾನಲ್‌ಗಳನ್ನು ವಿನಂತಿಸಿಕೊಳ್ಳುತ್ತಿದ್ದೇನೆ.

ಇನ್ನು ಮುಂದಾದರೂ ಈ ರೀತಿಯ ಸುಳ್ಳು ಸುದ್ದಿಗಳನ್ನು ಹಬ್ಬಿಸದಂತೆ ವಿನಂತಿಸಿಕೊಳ್ಳುತ್ತಿದ್ದೇನೆ. ಇದರಿಂದ ಜನರಲ್ಲಿ ಕಳವಳ ಹಾಗೂ ಕುಟುಂಬದವರಿಗೂ ಇದರಿಂದ ಮಾನಸಿಕವಾಗಿ ನೋವು ಹಾಗೂ ತೊಂದರೆಯಾಗುತ್ತದೆ. ಈಗಾಗಲೇ ನನ್ನ ಗಮನಕ್ಕೆ ಬಂದಂತಹ ಎಲ್ಲ ಸಾಕ್ಷಿಗಳನ್ನು ಸೈಬರ್ ಪೊಲೀಸ್‌ಗೆ ನೀಡಿದ್ದೇನೆ. ದಯವಿಟ್ಟು ನೀವು ಮಾಡಿದ ವಿಡಿಯೋಗಳನ್ನು ಈ ಕೂಡಲೇ ತೆಗೆಯಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT