ನಿರ್ದೇಶಕ ಗುರುಪ್ರಸಾದ್ 
ಸಿನಿಮಾ ಸುದ್ದಿ

ಕೊರೋನಾ ಬಂದಿರೋ ನಾನು ಸತ್ತರೆ ಸರ್ಕಾರದ ಮಂತ್ರಿಗಳೇ ಹೊಣೆ: ಫೇಸ್‌ಬುಕ್ ಲೈವ್ ನಲ್ಲಿ 'ಮಠ' ನಿರ್ದೇಶಕ ಗುರುಪ್ರಸಾದ್ ಖಡಕ್ ಮಾತು

"ಮಠ" ನಿರ್ದೇಶಕ ಗುರುಪ್ರಸಾದ್ ಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಈ ಬಗ್ಗೆ ಫೇಸ್‌ಬುಕ್  ಲೈವ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಗುರುಪ್ರಸಾದ್ ಒಂದು ವೇಳೆ ನಾನು ಕೊರೋನಾದಿಂದ ಸತ್ತರೆ ಅದಕ್ಕೆ ಈ ಸರ್ಕಾರದ ಮಂತ್ರಿಗಳೇ ಹೊಣೆ ಎಂದು ಎಚ್ಚರಿಸಿದ್ದಾರೆ.

"ಮಠ" ನಿರ್ದೇಶಕ ಗುರುಪ್ರಸಾದ್ ಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಈ ಬಗ್ಗೆ ಫೇಸ್‌ಬುಕ್  ಲೈವ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಗುರುಪ್ರಸಾದ್ ಒಂದು ವೇಳೆ ನಾನು ಕೊರೋನಾದಿಂದ ಸತ್ತರೆ ಅದಕ್ಕೆ ಈ ಸರ್ಕಾರದ ಮಂತ್ರಿಗಳೇ ಹೊಣೆ ಎಂದು ಎಚ್ಚರಿಸಿದ್ದಾರೆ.

"ನಾನು ಕೊರೋನಾ ಪಾಸಿಟಿವ್ ಬಂದಿರೋ ನೋವಿನಲ್ಲಿ ಮಾತನಾಡುತ್ತಿದ್ದೇನೆ. ನನ್ನ ಮನೆಯವರೆಗೆ ಕೊರೋನಾವನ್ನು ತಂದು ಬಿಟ್ಟ ಮುಖ್ಯಮಂತ್ರಿ ಯಡಿಯೂರಪ್ಪ, ವಿಜಯೇಂದ್ರ ಸೇರಿ ಎಲ್ಲರಿಗೆ ಧನ್ಯವಾದ.

"ಒಂದೊಂದು ಮನೆಗೂ ವೈರಸ್ ಹಂಚುತ್ತಿದ್ದೀರಲ್ಲಾ, ನನಗೆ ವೈರಸ್ ತಂದು ಕೊಟ್ಟವರಿಗೆ ಧಿಕ್ಕಾರವಿರಲಿ. ರಾಜಕೀಯ ಅನ್ನೋದು ಬ್ಯುಸಿನೆಸ್ ಅಲ್ಲ, ಮನೆ ಮನೆಯಲ್ಲಿಯೂ ಕೊರೋನಾದಿಂದ ಸಾಯುತ್ತಿರುವುದಕ್ಕೆ ಆರೋಗ್ಯ ಸಚಿವ ಸುಧಾಕರ್, ಸಿಎಂ ಯಡಿಯೂರಪ್ಪ ಅವರೇ ಕಾರಣ, ರಾಜಕಾರಣಿಗಳಾರೂ ಸಾಚಾಗಳಲ್ಲ.

"ಇದು ನನ್ನ ಡೆತ್ ನೋಟ್" ಎಂದಿರುವ ಗುರುಪ್ರಸಾದ್ ಜಾರಕಿಹೋಳಿ ಸಿಡಿ ಬಗ್ಗೆ ಸಹ ಮಾತನಾಡಿದ್ದಾರೆ. "ಜಾರಕಿಹೋಳಿ ಸಿಡಿ ಬಗ್ಗೆ ದಿನವಿಡೀ ತೋರಿಸುವ ಅಗತ್ಯವೇನಿದೆ? ಅದು ಪ್ರಕೃತಿ-ಪುರುಷನ ಸಹಜ ಧರ್ಮ, ಅದು ನಮಗೇಕೆ ಬೇಕು? ನಮಗೆ ಬೇಕಾದ್ದು ಪ್ರತಿಯೊಬ್ಬರನ್ನೂ ಸಾಕುವುದು, ರಕ್ಷಿಸುವುದು. ಪ್ರತಿ ಪ್ರಜೇಗಳಿಗೆ ತೊಂದರೆ ಏನಿದೆ ನೋಡಿ ಪರಿಹರಿಸಬೇಕು" ಎಂದಿದ್ದಾರೆ.

"ದುಡ್ಡು ಮುಖ್ಯವಲ್ಲ, ಮನುಷ್ಯ ಮುಖ್ಯ, ಮೆಡಿಕಲ್ ಮಾಫಿಯಾ ಮಾಡಬೇಡಿ. ಹಾನೆಸ್ಟ್ ಆಗಿ ದುಡಿಯುವವರ ಶಾಪಗಳು ನಿಮ್ಮನ್ನು ಸುಮ್ಮನೆ ಬಿಡಲಾರದು" ಎಂದು ಅವರು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT