ವಿಘ್ನೇಶ್ ಶೆರೆಗಾರ್ 
ಸಿನಿಮಾ ಸುದ್ದಿ

'ಶಾಂತಿಯನ್ನು ಕಳೆದುಕೊಳ್ಳಬೇಡಿ' ಎನ್ನುತ್ತಿದ್ದಾರೆ ಸ್ಯಾಂಡಲ್ ವುಡ್ ನ ಈ ಮೂರು ನಿರ್ದೇಶಕರು!

ಹಲವು ಕಥೆಗಳ ಒಂದು ಸಿನಿಮಾ ಚಿತ್ರ ಗಾಂಧಿನಗರದಲ್ಲಿ ಯಶಸ್ಸು ಪಡೆದಿದೆ. ಅದೇ ಸಾಲಿಗೆ ಈಗ ಮತ್ತೊಂದು ಚಿತ್ರ ಸೇರ್ಪಡಣೆಗೆ ಮುಂದಾಗಿದೆ.

ಹಲವು ಕಥೆಗಳ ಒಂದು ಸಿನಿಮಾ ಚಿತ್ರ ಗಾಂಧಿನಗರದಲ್ಲಿ ಯಶಸ್ಸು ಪಡೆದಿದೆ. ಅದೇ ಸಾಲಿಗೆ ಈಗ ಮತ್ತೊಂದು ಚಿತ್ರ ಸೇರ್ಪಡಣೆಗೆ ಮುಂದಾಗಿದೆ. ಒಂದೇ ಕಥೆಯಲ್ಲಿ ಮೂರು ಸಂದೇಶ ಇರುವ ಕಥೆಗಳನ್ನು ಒಗ್ಗೂಡಿಸಿ "ಶಾಂತಿಯನ್ನು ಕಳೆದುಕೊಳ್ಳಬೇಡಿ" ಎಂಬ ಹೊಸ ಸಿನಿಮಾ ಗಾಂಧಿನಗರದಲ್ಲಿ ಸದ್ದಿಲ್ಲದೇ ಸೆಟ್ಟೇರಿದೆ. 

ಈ ಸಿನಿಮಾ ವಿಶೇಷತೆ ಎಂದರೆ ಮೂರು ಕತೆ, ಮೂವರು ನಿರ್ದೇಶಕರು. ಈಗಾಗಲೇ ಚಂದನವನದಲ್ಲಿ ಇದೇ ಮಾದರಿಯ ಕಥಾಸಂಗಮ ಎನ್ನುವ ಸಿನಿಮಾ ರಿಲೀಸ್ ಆಗಿದೆ. ಇದೀಗ ಅದೇ ರೀತಿಯ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಹೊಸಬರ ತಂಡವೊಂದು ಸದ್ದು ಮಾಡುತ್ತಿದೆ.

ಈಗಾಗಲೇ ಕಿರುತೆರೆಯಲ್ಲಿ ಸಹ ನಿರ್ದೇಶಕರಾಗಿ ಅನುಭವ ಹೊಂದಿದ್ದ ವಿಘ್ನೇಶ್ ಶೇರೆಗಾರ್ ಶಾಂತಿಯನ್ನು ಕಳೆದುಕೊಳ್ಳಬೇಡಿ ಸಿನಿಮಾ ಮೂಲಕ ಸ್ಯಾಂಡಲ್ ವುಡ್ಗೆ ಕಾಲಿಡುತ್ತಿದ್ದಾರೆ. ಇನ್ನು ಗಿರೀಶ್ ಕಾಸರವಳ್ಳಿ ಜೊತೆ ಕೆಲಸ ಮಾಡಿರುವ ಬಾಸುಮಕೊಡಗು ಮತ್ತು ಕಿರುಚಿತ್ರ ನಿರ್ದೇಶನ ಮಾಡಿರುವ ಶಿವ ಅವರು ನಿರ್ದೇಶನ ಮಾಡುತ್ತಿದ್ದಾರೆ. ವಿಘ್ನೇಶ್ ನಿರ್ದೇಶನದ ಮೊದಲ ಭಾಗದ ಕಥೆ ಮಾನವನ ಅಸ್ತಿತ್ವದ ಬಗ್ಗೆ ಹೇಳಲಿದೆಯಂತೆ. 

ಮನುಷ್ಯ ಸತ್ತ ಮೇಲೂ ಜೀವಂತವಾಗಿರುವ ಬಗ್ಗೆ ಕಥೆ ಹೇಳುತ್ತಾರೆ. ಎರಡನೇ ಭಾಗದ ಕಥೆಯನ್ನು ಬಾಸುಮ ಕೊಡಗು ನಿರ್ದೇಶಿಸುತ್ತಿದ್ದು ಇದರಲ್ಲಿ ತಾಯಿ ಮಗುವಿನ ಸಂಬಂಧದ ಬಗ್ಗೆ ಹೇಳುತ್ತಿದ್ದಾರೆ. 

ಮೂರನೇ ಕಥೆ, ಶಿವ ನಿರ್ದೇಶನದಲ್ಲಿ ಮೂಡಿಬರುತ್ತಿದ್ದು, ಕೆಲಸ  ಹುಡುಕಿಕೊಂಡು ಬೆಂಗಳೂರಿಗೆ ಬರುವ ಹುಡುಗನೊಬ್ಬ ಹ್ಯಾಕರ್ ಆಗಿ ಬದಲಾಗುವ ಕುರಿತಾಗಿದೆ.

ನಾಯಕ ನಟನಾಗಿ ಕಾರ್ತಿಕ್ ಹಾಗೂ ನಾಯಕಿಯಾಗಿ ಹರ್ಷಿತಾ ಅಭಿನಯಿಸಿದ್ದು, ನಿರ್ದೇಶಕರಿಂದ ಹಿಡಿದು ಈ ಸಿನಿಮಾದಲ್ಲಿ ಹಿರಿಯ ನಟರಾದ ಜಿ.ಕೆ. ಶಂಕರ್, ರಾಜಣ್ಣ, ಹಾಗೂ ನಟರನ್ನೂ ಸೇರಿ ಎಲ್ಲವೂ ಹೊಸಬರ ತಂಡವೇ ಆಗಿದೆ. ಕಾರ್ತಿಕ್, ಇಂದ್ರಜಿತ್, ಹರ್ಷಿತಾ, ಸಂಗೀತ, ಚಂದ್ರಕಲಾ ಭಟ್,ರಾಕೇಶ್, ಸಂಪತ್ ಶಾಸ್ತ್ರೀ ,ಮುಂತಾದವರು ನಟಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತಕ್ಕೆ ಭೇಟಿ ನೀಡುವಂತೆ ತಾರಿಕ್ ರೆಹಮಾನ್‌ಗೆ ಪ್ರಧಾನಿ ಮೋದಿ ಆಹ್ವಾನ!

AI ಇಂಪ್ಯಾಕ್ಟ್ ಶೃಂಗಸಭೆ ಟಾರ್ಗೆಟ್: ವಿದೇಶಿಗರಿಂದ ದಾಳಿ ಸಾಧ್ಯತೆ, ಗುಪ್ತಚರ ವರದಿ ಬೆನ್ನಲ್ಲೇ G20 ಗ್ರೇಡ್ ಸೈಬರ್ ಭದ್ರತಾ ವ್ಯವಸ್ಥೆ!

T20 World Cup 2026: ಸ್ಕಾಟ್ಲೆಂಡ್ ವಿರುದ್ಧ ನೇಪಾಳಕ್ಕೆ 7 ವಿಕೆಟ್ ಗಳ ಭರ್ಜರಿ ಜಯ!

ಭಾರತದಲ್ಲಿ ವಯಸ್ಸಿನ ಆಧಾರದ ಮೇಲೆ 'ಸಾಮಾಜಿಕ ಜಾಲತಾಣ ನಿಷೇಧ' ಕುರಿತು ಚರ್ಚೆ: ಅಶ್ವಿನಿ ವೈಷ್ಣವ್

'ಕರಾವಳಿ' ಹೂಡಿಕೆ ವಿವಾದ: ಪ್ರಿಯಾಂಕ್ ಖರ್ಗೆ ಸಹಜವಾಗಿ ಹೇಳಿದ್ದಾರೆ, ಆದರೆ ದಕ್ಷಿಣ ಕನ್ನಡ ಬದಲಾಗುತ್ತಿದೆ; ಪರಮೇಶ್ವರ್

SCROLL FOR NEXT