ರಾಮು ಅಂತ್ಯಕ್ರಿಯೆ 
ಸಿನಿಮಾ ಸುದ್ದಿ

ಕನ್ನಡದ 'ಕೋಟಿ' ನಿರ್ಮಾಪಕ ರಾಮು ಪಂಚಭೂತಗಳಲ್ಲಿ ಲೀನ!

ಕರ್ನಾಟಕದ ಕೋಟಿ ನಿರ್ಮಾಪಕ ಎಂದೇ ಪ್ರಖ್ಯಾತರಾಗಿದ್ದ ರಾಮು ಅವರು ಕೊರೋನಾಗೆ ಬಲಿಯಾಗಿದ್ದು ಇಂದು ಅವರ ಹುಟ್ಟೂರಿನಲ್ಲಿ ಅಂತ್ಯ ಸಂಸ್ಕಾರ ನಡೆಯಿತು.

ತುಮಕೂರು: ಕರ್ನಾಟಕದ ಕೋಟಿ ನಿರ್ಮಾಪಕ ಎಂದೇ ಪ್ರಖ್ಯಾತರಾಗಿದ್ದ ರಾಮು ಅವರು ಕೊರೋನಾಗೆ ಬಲಿಯಾಗಿದ್ದು ಇಂದು ಅವರ ಹುಟ್ಟೂರಿನಲ್ಲಿ ಅಂತ್ಯ ಸಂಸ್ಕಾರ ನಡೆಯಿತು. 

ಮೂರು ದಿನಗಳ ಹಿಂದೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಮು ಅವರು ನಿನ್ನೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. 

ಇಂದು ಕೊರೋನಾ ನಿಯಮಾವಳಿ ಅನುಸಾರ ತುಮಕೂರಿನ ಸ್ವಗ್ರಾಮ ಕೊಡಿಗೆಹಳ್ಳಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಿತು. ಪುತ್ರ ಆರ್ಯನ್ ಅಂತ್ಯ ಸಂಸ್ಕಾರದ ವಿಧಿಗಳನ್ನು ನೆರವೇರಿಸಿ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು.

52 ವರ್ಷದ ರಾಮು ಅವರಿಗೆ ಒಂದು ವಾರದ ಹಿಂದೆ ಕೊರೋನಾ ಪಾಸಿಟಿವ್ ಬಂದಿತ್ತು. ರಾಮು ಅವರು ಪತ್ನಿ ಮಾಲಾಶ್ರೀ, ಮಗ ಮತ್ತು ಮಗಳನ್ನು ಅಗಲಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ 39 ಚಿತ್ರಗಳನ್ನು ನಿರ್ಮಿಸಿದ್ದಾರೆ. ಗೋಲಿಬಾರ್ ಚಿತ್ರದ ನಿರ್ಮಾಣದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದರು. ಇನ್ನು ಮೊದಲಿಗೆ ಕನ್ನಡದಲ್ಲಿ ಕೋಟಿ ಬಜೆಟ್ ನಲ್ಲಿ ಚಿತ್ರ ನಿರ್ಮಿಸಿದ್ದರಿಂದ ಅವರಿಗೆ ಕೋಟಿ ರಾಮು ಎಂದು ಹೆಸರು ಬಂದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT