ಪ್ರವೀಣ್, ಶಶಾಂಕ್ 
ಸಿನಿಮಾ ಸುದ್ದಿ

ಹೊಸ ಪ್ರತಿಭೆಗಳೊಂದಿಗೆ ಚಿತ್ರ ನಿರ್ದೇಶನಕ್ಕೆ ಶಶಾಂಕ್ ಸಜ್ಜು

"ಮೊಗ್ಗಿನ ಮನಸ್ಸು" ಚಿತ್ರದ ನಂತರ ನಿರ್ದೇಶಕ ಶಶಾಂಕ್, ಮತ್ತೊಮ್ಮೆ ಹೊಸ ಪ್ರತಿಭೆಗಳೊಂದಿಗೆ ಚಿತ್ರ ನಿರ್ದೇಶಿಸಲು ಸಜ್ಜಾಗಿದ್ದಾರೆ. 

ಬೆಂಗಳೂರು: "ಮೊಗ್ಗಿನ ಮನಸ್ಸು" ಚಿತ್ರದ ನಂತರ ನಿರ್ದೇಶಕ ಶಶಾಂಕ್, ಮತ್ತೊಮ್ಮೆ ಹೊಸ ಪ್ರತಿಭೆಗಳೊಂದಿಗೆ ಚಿತ್ರ ನಿರ್ದೇಶಿಸಲು ಸಜ್ಜಾಗಿದ್ದಾರೆ. 

ಶಶಾಂಕ್ ಸಿನೆಮಾಸ್" ಸಂಸ್ಥೆಯಡಿ, ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ನಿರ್ಮಾಣವಾಗಲಿರುವ ಈ ಚಿತ್ರದ ಮುಖಾಂತರ, "ಪ್ರವೀಣ್" ಎಂಬ ಹೊಸ ನಾಯಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.

ವೈದ್ಯಕೀಯ ಪದವೀಧರರಾದ ಪ್ರವೀಣ್, ಹೊಸಪೇಟೆ ಮೂಲದವರಾಗಿದ್ದು, ನಟನಾಗುವ ಆಸಕ್ತಿಯಿಂದ ಅದಕ್ಕೆ ಬೇಕಾಗುವ ಎಲ್ಲಾ ತರಬೇತಿಗಳನ್ನು ಪಡೆದು ಬೆಳ್ಳಿತೆರೆ ಏರಲು ಸಜ್ಜಾಗಿದ್ದಾರೆ.

ಇನ್ನೂ ಶೀರ್ಷಿಕೆ ನಿಗದಿಯಾಗದ, ಭಾವುಕ ಪ್ರೇಮಕಥೆಯ ಈ ಚಿತ್ರಕ್ಕೆ ಶಶಾಂಕ್ ಹೊಸ ನಾಯಕಿಯ ಹುಡುಕಾಟದಲ್ಲಿದ್ದಾರೆ. ಲಾಕ್ಡೌನ್ ಗೂ ಮುನ್ನ ಸರಳವಾಗಿ ಮುಹೂರ್ತ ನೆರವೇರಿದ್ದು, ಲಾಕ್ಡೌನ್ ಮುಗಿದ ನಂತರ ಫೋಟೋಶೂಟ್ ಮಾಡಿ, ಶೀರ್ಷಿಕೆಯ ಜೊತೆ ಫಸ್ಟ್ ಲುಕ್ ರಿಲೀಸ್ ಮಾಡುವುದಾಗಿ ನಿರ್ದೇಶಕರು ತಿಳಿಸಿದ್ದಾರೆ.

ಜೂನ್ ತಿಂಗಳಲ್ಲಿ ಚಿತ್ರೀಕರಣ ಆರಂಭಿಸಲಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜಿಸಲಿದ್ದು, ಉಳಿದ ತಾರಾಗಣ ಮತ್ತು ತಾಂತ್ರಿಕ ವರ್ಗದ ಆಯ್ಕೆ ನಡೆಯುತ್ತಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT