ಮಾನ್ವಿತಾ ಕಾಮತ್ 
ಸಿನಿಮಾ ಸುದ್ದಿ

ಸೈಕಾಲಜಿಕಲ್ ಥ್ರಿಲ್ಲರ್ ಚಿತ್ರದಲ್ಲಿ ಪೃಥ್ವಿ ಅಂಬರ್- ಮಾನ್ವಿತಾ ಜೋಡಿ

ಸಬೂ ಅಲೋಶಿಯಸ್​ ಹಾಗೂ ಅರುಣ್​ಕುಮಾರ್​ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಸೈಕಾಲಜಿಕಲ್ ಥ್ರಿಲ್ಲರ್ ಚಿತ್ರದಲ್ಲಿ ಇದೇ ಮೊದಲ ಬಾರಿಗೆ ನಟ ಪೃಥ್ವಿ ಅಂಬರ್ ಹಾಗೂ ನಟಿ ಮಾನ್ವಿತಾ ಕಾಮತ್ ಅವರು ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಸಬೂ ಅಲೋಶಿಯಸ್​ ಹಾಗೂ ಅರುಣ್​ಕುಮಾರ್​ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಸೈಕಾಲಜಿಕಲ್ ಥ್ರಿಲ್ಲರ್ ಚಿತ್ರದಲ್ಲಿ ಇದೇ ಮೊದಲ ಬಾರಿಗೆ ನಟ ಪೃಥ್ವಿ ಅಂಬರ್ ಹಾಗೂ ನಟಿ ಮಾನ್ವಿತಾ ಕಾಮತ್ ಅವರು ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಚಿತ್ರದ ಕುರಿತು ಯಾವುದೇ ಗುಟ್ಟು ಬಿಟ್ಟುಕೊಡದ ಚಿತ್ರದ ತಂಡ ಈಗಾಗಲೇ ಸದ್ದಿಲ್ಲದೆ ಚಿತ್ರೀಕರಣವನ್ನು ಆರಂಭಿಸಿದೆ ಎಂದು ತಿಳಿದುಬಂದಿದೆ. 

ಸ್ಯಾಂಡಲ್ ವುಡಲ್ ನಲ್ಲಿ ಸಬೂ ಅಲೋಶಿಯಸ್​ ಹಾಗೂ ಅರುಣ್​ಕುಮಾರ್​ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಎರಡನೇ ಚಿತ್ರ ಇದಾಗಿದೆ. 

ಈಗಾಗಲೇ ಈ ನಿರ್ದೇಶಕರು ಪೃಥ್ವಿ ಅಂಬರ್ ಅಂಬರ್ ಜೊತೆಗೆ ಲೈಫ್ ಈಸ್ ಬ್ಯೂಟಿಫುಲ್ ಚಿತ್ರವನ್ನು ನಿರ್ದೇಶಿಸಿದ್ದು, ಚಿತ್ರ ಬಿಡುಗಡೆಗೆ ಸಿದ್ದವಾಗಿದೆ. 

ದಿಯಾ ಚಿತ್ರದ ಮೂಲಕ ಖ್ಯಾತಿ ಪಡೆದಿರುವ ಪೃಥ್ವಿ ಅಂಬರ್ ಕೈಯಲ್ಲಿ ಸಾಕಷ್ಟು ಚಿತ್ರಗಳಿವೆ. ಹ್ಯಾಟ್ರಿಕ್ ಹೀರೋ  ಶಿವರಾಜಕುಮಾರ್ ಅವರು ನಟಿಸುವ ದೊಡ್ಡ ಚಿತ್ರ ಬೈರಾಗಿಯಲ್ಲೂ ಪೃಥ್ವಿ ಕಾಣಿಸಿಕೊಳ್ಳುತ್ತಿದ್ದಾರೆ. ಕನ್ನಡ ಚಿತ್ರವಷ್ಟೇ ಅಲ್ಲದೆ, ಪೃಥ್ವಿ ಅಂಬರ್ ಅವರು ತಮಿಳು ಚಿತ್ರಗಳಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ. 

ಬೈರಾಗಿ ಚಿತ್ರವನ್ನು ವಿಜಯ್ ಮಿಲ್ಟನ್ ಅವರು ನಿರ್ದೇಶನ ಮಾಡಿದ್ದು, ಈ ಚಿತ್ರದಲ್ಲಿ ಪೃಥ್ವಿಯವರ ನಟನೆಯನ್ನು ನೋಡಿದ ವಿಜಯ್ ಮಿಲ್ಟನ್ ಅವರು ಪೃಥ್ವಿಯವರನ್ನು ತಮಿಳು ಚಿತ್ರರಂಗಕ್ಕೆ ಕರೆದುಕೊಂಡು ಹೋಗುತ್ತಿದ್ದಾರೆಂದು ತಿಳಿದುಬಂದಿದೆ. 

ಇನ್ನು ಮಾನ್ವಿತ ಕಾಮತ್ ಅವರು. ಪಿಸಿ.ಶೇಖರ್ ಅವರು ನಿರ್ದೇಶಿಸುತ್ತಿರುವ ರೊಮ್ಯಾಂಟಿಕ್ ಥ್ರಿಲ್ಲರ್ ಚಿತ್ರವೊಂದಕ್ಕೆ ಇತ್ತೀಚೆಗಷ್ಟೇ ಸಹಿ ಹಾಕಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT