ಲವ್ ಯೂ ರಚ್ಚು ಸಿನಿಮಾದ ನಾಯಕ ಅಜಯ್ ರಾವ್ ಮತ್ತು ನಾಯಕಿ ರಚಿತಾ ರಾಮ್(ಸಂಗ್ರಹ ಚಿತ್ರ) 
ಸಿನಿಮಾ ಸುದ್ದಿ

'ಲವ್ ಯೂ ರಚ್ಚು' ಶೂಟಿಂಗ್ ವೇಳೆ ಫೈಟರ್ ಸಾವು: ಗುರು ದೇಶಪಾಂಡೆ ಸೇರಿ ಐವರ ವಿರುದ್ಧ ಕೇಸು ದಾಖಲು

'ಲವ್ ಯೂ ರಚ್ಚು' ಸಿನೆಮಾ ಶೂಟಿಂಗ್ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ 28 ವರ್ಷದ ಯುವಕ ಫೈಟರ್ ವಿವೇಕ್ ಮೃತಪಟ್ಟಿರುವ ಘಟನೆ ಸಂಬಂಧ ಬೆಂಗಳೂರು ಹೊರವಲಯದ ಬಿಡದಿ ಪೊಲೀಸರು ಐವರ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.

ಬೆಂಗಳೂರು: 'ಲವ್ ಯೂ ರಚ್ಚು' ಸಿನೆಮಾ ಶೂಟಿಂಗ್ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ 28 ವರ್ಷದ ಯುವಕ ಫೈಟರ್ ವಿವೇಕ್ ಮೃತಪಟ್ಟಿರುವ ಘಟನೆ ಸಂಬಂಧ ಬೆಂಗಳೂರು ಹೊರವಲಯದ ಬಿಡದಿ ಪೊಲೀಸರು ಐವರ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.

ನಿರ್ದೇಶಕ ಶಂಕರಯ್ಯ, ನಿರ್ಮಾಪಕ ಗುರುದೇಶಪಾಂಡೆ, ಸಾಹಸ ನಿರ್ದೇಶಕ ವಿನೋದ್ ಕುಮಾರ್, ಸಿನಿಮಾ ಪ್ರೊಡಕ್ಷನ್ ಮ್ಯಾನೇಜರ್ ಫರ್ನಾಂಡಿಸ್, ಕ್ರೇನ್ ಆಪರೇಟರ್ ಮಹದೇವ್ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ನಿರ್ದೇಶಕ ಶಂಕರಯ್ಯ ಎ1, ನಿರ್ಮಾಪಕ ಗುರು ದೇಶಪಾಂಡೆ ಎ2, ಚಿತ್ರದ ಸಾಹಸ ನಿರ್ದೇಶಕ ವಿನೋದ್ ಕುಮಾರ್ ಎ3, ಸಿನಿಮಾ ಪ್ರೊಡಕ್ಷನ್ ಮ್ಯಾನೇಜರ್ ಫರ್ನಾಂಡಿಸ್ ಎ4 ಮತ್ತು ಕ್ರೇನ್ ಆಪರೇಟರ್ ಮಹದೇವ್ ಎ5 ಆರೋಪಿಗಳೆಂದು ದಾಖಲಾಗಿದೆ. ನಿನ್ನೆ ಘಟನೆ ನಡೆದ ಬಳಿಕ ಬಿಡದಿ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ಘಟನೆ ನಡೆದ ಬಳಿಕ ಚಿತ್ರದ ನಿರ್ಮಾಪಕ ಹಾಗೂ ಸ್ಯಾಂಡಲ್ ವುಡ್ ನಿರ್ದೇಶಕ ಗುರು ದೇಶಪಾಂಡೆ ಎಸ್ಕೇಪ್ ಆಗಿದ್ದಾರೆ ಎಂದು ಹೇಳಲಾಗುತ್ತಿದೆ. ಮಾಧ್ಯಮಗಳಲ್ಲಿ ವರದಿ ಬರುತ್ತಿದ್ದಂತೆ ನಾನು ನನ್ನ ಕೆಲಸ ನಿಮಿತ್ತ ಬೇರೆ ಊರಿಗೆ ಹೋಗಿದ್ದೆ, ಇಂದು ಮಧ್ಯಾಹ್ನ ಹೋಗುತ್ತೇನೆ, ಬಿಡದಿ ಪೊಲೀಸರು ಕರೆದರೆ ವಿಚಾರಣೆಗೆ ಹೋಗುತ್ತೇನೆ ಎಂದು ನಿನ್ನೆ ಹೇಳಿದ್ದ ಗುರು ದೇಶಪಾಂಡೆ ಇಂದು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. 

ಘಟನೆಯಲ್ಲಿ ಗಾಯಾಳುವಾಗಿರುವ ರಂಜಿತ್ ಎನ್ನುವವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳಗ್ಗೆ 10 ಗಂಟೆಯ ನಂತರ ಫೈಟರ್ ವಿವೇಕ್ ಮರಣೋತ್ತರ ಪರೀಕ್ಷೆಯಾಗಿ ಕುಟುಂಬಕ್ಕೆ ಹಸ್ತಾಂತರ ಮಾಡಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT