ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

ನಾನು ಮಾತಾಡುವುದಕ್ಕಿಂತ ನನ್ನ ಕೆಲಸ ಮಾತಾಡಬೇಕು: ವಿಜಯ ರಾಘವೇಂದ್ರ 

ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರನಟ, ಚಿನ್ನಾರಿ ಮುತ್ತಾ ಎಂದೇ ಜನಪ್ರಿಯತೆ ಗಳಿಸಿರುವ ವಿಜಯ ರಾಘವೇಂದ್ರ ಅವರು 'ಸೀತಾರಾಂ ಬಿನೊಯ್'' ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಇದು ಅವರ 50ನೇ ಚಿತ್ರ.

ಬೆಂಗಳೂರು: ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರನಟ, ಚಿನ್ನಾರಿ ಮುತ್ತಾ ಎಂದೇ ಜನಪ್ರಿಯತೆ ಗಳಿಸಿರುವ ವಿಜಯ ರಾಘವೇಂದ್ರ ಅವರು 'ಸೀತಾರಾಂ ಬಿನೊಯ್'' ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಇದು ಅವರ 50ನೇ ಚಿತ್ರವಾಗಲಿದೆ. ಸೀತಾರಾಂ ಬಿನೊಯ್ ಸಿನಿಮಾ ತನಿಖಾ ಪತ್ತೇದಾರಿ ಸಿನಿಮಾ ಆಗಿರಲಿದ್ದು, ದೇವಿ ಪ್ರಸಾದ್ ಶೆಟ್ಟಿ ನಿರ್ದೇಶನ ಮಾಡುತ್ತಿದ್ದಾರೆ. 

ಸಿನಿಮಾ ಆಗಸ್ಟ್ 15ರಂದು ಸುವರ್ಣ ಚಾನೆಲ್ಲಿನಲ್ಲಿ ಪ್ರಸಾರವಾಗಲಿದ್ದು, ಮರುದಿನ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳುತ್ತಿರುವುದು ವಿಶೇಷವಾಗಿದೆ. ಇತ್ತೀಚಿಗೆ ಬಿಡುಗಡೆಗೊಂಡಿದ್ದ ಸಿನಿಮಾದ ಟ್ರೇಲರ್ ಕನ್ನಡ ಪ್ರೇಕ್ಷಕರಲ್ಲಿ ನಿರೀಕ್ಷೆ ಹುಟ್ಟುಹಾಕಿದೆ.

ಈ ಸಂದರ್ಭ ನಟ ವಿಜಯ ರಾಘವೇಂದ್ರ ಮಾತನಾಡುತ್ತಾ, ತನ್ನ ಸಿನಿಮಾ ಹೆಚ್ಚು ಜನರನ್ನು ತಲುಪಬೇಕು ಎನ್ನುವುದು ಪ್ರತಿಯೊಬ್ಬ ಕಲಾವಿದನ ಆಸೆ ಮತ್ತು ತುಡಿತ. ಅದರಲ್ಲೂ ಕೊರೊನಾ ಸಾಂಕ್ರಾಮಿಕದ ಸಮಯದಲ್ಲಿ ಜನರನ್ನು ಸೆಳೆಯುವುದು ಅತಿ ದೊಡ್ಡ ಸವಾಲು ಎಂದು ಅವರು ಹೇಳಿದರು. 

ಮೊದಲ ಹಂತದ ಲಾಕ್ ಡೌನ್ ಕೊನೆಯಾದ ನಂತರ 21 ದಿನಗಳ ಅವಧಿಯಲ್ಲೇ ಸಿನಿಮಾ ಚಿತ್ರೀಕರಣವನ್ನು ಪೂರ್ತಿಗೊಳಿಸಲಾಗಿದೆ ಎನ್ನುವುದು ಮತ್ತೊಂದು ವಿಶೇಷ. 

ಸೀತಾರಾಂ ಬಿನೊಯ್ ಸಿನಿಮಾದ ಕಥೆ ಓರ್ವ ಇನ್ಸ್ ಪೆಕ್ಟರ್ ಕುರಿತಾಗಿದ್ದು, ಆತನನ್ನು ಪದೇ ಪದೆ ವರ್ಗಾವಣೆ ಮಾಡಲಾಗುತ್ತಿರುತ್ತದೆ. ಈ ವರ್ಗಾವಣೆಯಿಂದ ಆತ ತಪ್ಪಿಸಿಕೊಳ್ಳುವುದೇ ಕಥಾಹಂದರದ ತಿರುವು. ಈ ಸಿನಿಮಾ ಯಾವುದೇ ಪರಭಾಷೆಯ ರೀಮೇಕ್ ಅಲ್ಲ ಎಂದು ವಿಜಯ್ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ಸಿನಿಮಾ ಬಗ್ಗೆ ತಾವೇ ಹೆಚ್ಚು ಹೇಳುವುದಕ್ಕಿಂತ ಖುದ್ದು ಸಿನಿಮಾನೇ ಮಾತಾಡಿದರೆ ಚೆನ್ನ ಎಂಬ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT