ಸಿನಿಮಾ ಸುದ್ದಿ

ಕನ್ನಡ ಚಲನಚಿತ್ರ ಹಿರಿಯ ನಿರ್ಮಾಪಕ ವಿಜಯಕುಮಾರ್ ನಿಧನ 

Srinivasamurthy VN

ಬೆಂಗಳೂರು: ಕನ್ನಡ ಚಲನಚಿತ್ರ ನಿರ್ಮಾಪಕ ಮತ್ತು ಕನ್ನಡ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಬಿ ವಿಜಯ್ ಕುಮಾರ್ ನಿಧನರಾಗಿದ್ದಾರೆ.

ಭಾನುವಾರ ರಾತ್ರಿ 9.30ರ ಸುಮಾರಿಗೆ ವಿಜಯ್ ಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. 

ಈ ಹಿಂದೆ ವಿಜಯ್ ಕುಮಾರ್ ಅವರು, ನಟ ವಿಷ್ಣುವರ್ಧನ್ ಅವರ ಲಯನ್ ಜಗಪತಿ ರಾವ್, ಜಗದೇಕ ವೀರ ಮತ್ತು ಸಿಂಹಾದ್ರಿಯ ಸಿಂಹ ಮುಂತಾದ ಚಿತ್ರಗಳ ನಿರ್ಮಾಣ ಮಾಡಿದ್ದರು. ಬಿಎಸ್‌ ಯಡಿಯೂರಪ್ಪ ಅವರ ಆಪ್ತರಾಗಿದ್ದ ವಿಜಯಕುಮಾರ್ ಅವರು ಕರ್ನಾಟಕ ರೇಷ್ಮೆ ಮಂಡಳಿ ಅಧ್ಯಕ್ಷರಾಗಿ  ಆಯ್ಕೆಯಾಗಿದ್ದರು.
 

SCROLL FOR NEXT